ಕಳಚಿದ ಸ್ವಾತಂತ್ರ್ಯದ ಕೊನೆಯ ಕೊಂಡಿ

ಸ್ವಾತಂತ್ರ್ಯ ಹೋರಾಟದ ನೆಲ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದ ಮನ್ಮನೆಯ ಸ್ವಾತಂತ್ರ್ಯ ಹೋರಾಟಗಾರ ಬಂಗಾರಪ್ಪ ನಾಯ್ಕ ಇಂದು ಮುಂಜಾನೆ ತಮ್ಮ 99 ನೇ ವಯಸ್ಸಿನಲ್ಲಿ ಕೊನೆ ಉಸಿರೆಳೆದರು.

ಉತ್ತರ ಕನ್ನಡ ಜಿಲ್ಲೆಯ ಬೆರಳೆಣಿಕೆಯ ಜೀವಂತ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಒಬ್ಬರಾಗಿದ್ದ ಬಂಗಾರಪ್ಪ ನಾಯ್ಕ ಸಿದ್ಧಾಪುರ ತಾಲೂಕಿನ ಕೊನೆಯಸ್ವಾತಂತ್ರ್ಯ ಯೋಧರಾಗಿದ್ದರು. ತಮ್ಮ ಹರೆಯದಲ್ಲಿ ಸ್ನೇಹಿತರೊಂದಿಗೆ ಬ್ರಟೀಷರ ವಿರುದ್ಧ ಹೋರಾಟದಲ್ಲಿ ಭಾಗವಹಿಸಿದ್ದ ಇವರು ಮಾವಿನಗುಂಡಿ, ಮನ್ಮನೆ ಪ್ರದೇಶಗಳಲ್ಲಿ ಸೇತುವೆ ಮುರಿಯುವುದು,ಪ್ರತಿರೋಧ,ಪ್ರತಿಭಟನಾ ಹೋರಾಟದ ಮೂಲಕ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಕೊಂಡಿದ್ದರು.

ಸ್ವಾತಂತ್ರ್ಯಾ ನಂತರ ಕಾಗೋಡು ಹೋರಾಟದಲ್ಲಿ ತೊಡಗಿಕೊಂಡಿದ್ದ ನಾಯ್ಕ ಸ್ವಾತಂತ್ರ್ಯ ಹೋರಾಟಗಾರ ಎಂದು ಹೆಸರಾಗುವುದಕ್ಕಿಂತ ಕಾಗೋಡು ಚಳವಳಿಕಾರ ಎಂದೇ ಗುರುತಿಸಿಕೊಂಡಿದ್ದರು. ತುಂಬು ಕುಟುಂಬದ ಮಕ್ಕಳು, ಮೊಮ್ಮಕ್ಕಳು ಬಂಧು ಮಿತ್ರರನ್ನು ಅಗಲಿರುವ ಬಂಗಾರಪ್ಪ ನಾಯ್ಕ ಕೆಲವು ವರ್ಷಗಳಿಂದ ವಯೋಸಹಜ ತೊಂದರೆಯಿಂದಾಗಿ ನೆನಪಿನ ಶಕ್ತಿ ಕಳೆದುಕೊಂಡಿದ್ದರು. ಮೂರ್ನಾಲ್ಕು ವರ್ಷದ ಕೆಳಗೆ ಸ್ವಾತಂತ್ರ್ಯ ಹೋರಾಟ ನಂತರದ ದಿನಗಳನ್ನು ನೆನಪಿಸಿಕೊಂಡು ಹೋರಾಟದ ಹಾಡು ಗುನುಗಿದ್ದ ನಾಯ್ಕ ಒಂದು ವರ್ಷದ ಈಚೆಗೆ ನೆನಪಿನ ಶಕ್ತಿ ಕಳೆದುಕೊಂಡಿದ್ದರೂ 99 ರ ತಮ್ಮ ತುಂಬು ಬದುಕಿನ ಜೀವಂತಿಕೆಗೆ ಸಾಕ್ಷಿ ಎಂಬಂತೆ ದೈಹಿಕವಾಗಿ ದೃಢವಾಗಿದ್ದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ಮತ್ತು ಸಿದ್ಧಾಪುರ ತಾಲೂಕುಗಳು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಾಲೂಕುಗಳು. ಸಿದ್ಧಾಪುರದ ನೂರಾರು ಜನ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೊನೆಯವರಾಗಿ ಬದುಕಿ ಉಳಿದಿದ್ದ ಇವರನ್ನು ಅವರಿಗೆ ಬೇಡದ ವಯಸ್ಸಿನಲ್ಲಿ, ಜೀರ್ಣಿಸಿಕೊಳ್ಳದ ಸಮಯದಲ್ಲಿ ಸನ್ಮಾನಿಸಿ, ಗೌರವಿಸಿದ್ದೇ ಹೆಚ್ಚು. ಗೌರವಾದರಗಳು,ಅನುಕೂಲ,ಪ್ರಸಿದ್ಧಿಗಳಿಗೆ ನಿರ್ಲಿಪ್ತರಾಗಿ ಪ್ರತಿಕ್ರೀಯಿಸುತಿದ್ದ ಬಂಗಾರಪ್ಪ ನಾವೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದು ಈ ಸೌಭಾಗ್ಯಕ್ಕಲ್ಲ ಎನ್ನುವ ನೋವು ಅವರಲ್ಲಡಗಿತ್ತು. ಸ್ವಾತಂತ್ರ್ಯ ಹೋರಾಟ, ಕಾಗೋಡು ಚಳವಳಿಗಳ ಕೇಂದ್ರ ಸ್ಥಳ ಸಿದ್ಧಾಪುರದ ಮನ್ಮನೆ ಇಂದು ತಮ್ಮೂರಿನ ಸ್ವಾತಂತ್ರ್ಯ ಹೋರಾಟಗಾರರ ಪರಂಪರೆ ಮತ್ತು ಕಾಗೋಡು ರೈತ ಚಳವಳಿಯ ಕೊನೆಯ ಕೊಂಡಿಯನ್ನು ಕಳಚಿಕೊಂಡಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *