Ex -serviceman, s.. ಸಾರ್ಥಕ ಸೇವೆ: ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಸಿದ್ದಾಪುರ: ಮಾಜಿ ಸೈನಿಕರಿಗೆ ಇಂದು ಗೌರವ ಕಮ್ಮಿಯಾಗುತ್ತಿದೆ ಮಾಜಿ ಸೈನಿಕರಿಗೆ ಸರ್ಕಾರದ ಸೌಲಭ್ಯಗಳು ಸರಿಯಾಗಿ ಮುಟ್ಟುತ್ತಿಲ್ಲ ನಮ್ಮಲ್ಲಿ ಒಗ್ಗಟ್ಟು ಕಮ್ಮಿ ಆಗುತ್ತಿರುವುದು ಇದಕ್ಕೆಲ್ಲ ಕಾರಣ ಸರಕಾರ ದಿಂದ ಸಿಗುವ ಸೌಲಭ್ಯ ದೊರಕಿಸಲು ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕು ಗಳಲ್ಲಿ ಇಂತಹ ಸಂಘಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ರಾಜ್ಯ ಸಂಘಟನೆಯ ಸುಭಾಷ್ ಚಂದ್ರ ತೇಜಸ್ವಿ ತಿಳಿಸಿದರು
ಅವರು ಬಾಲ ಭವನದಲ್ಲಿ ಉದ್ಘಾ ಟನೆಗೊಂಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ದ ಕಾರ್ಯ ಕ್ರಮ ದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ನಮಗೆ ಸಮಾಜದಲ್ಲಿ ಸ್ಥಾನಮಾನ ಕಲ್ಪಿಸಿಕೊಳ್ಳುವುದು ಮುಖ್ಯವಾಗುತ್ತದೆ ನಾವುಗಳು ಒಗ್ಗಟ್ಟಿನಿಂದ ಸಮಾಜಮುಖಿ ಕೆಲಸ ಮಾಡಬೇಕಾಗಿದೆ ಇದರಿಂದ ನಮಗೆ ಸಮಾಜದಲ್ಲಿ ಗುರ್ತಿಸಿ ನಮಗೆ ಸಹಾಯ ಮಾಡುತ್ತಾರೆ ಎಂದರು
ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಮಾಜಿ ಲಯನ್ ಗವರ್ನರ್ ರವಿಹೆಗಡೆ ಹೂವಿನ ಮನೆ ಮಾತನಾಡಿ ಸೈನಿಕರ ಕ್ಷೇಮಾಭಿವೃದ್ಧಿ ಸಂಸ್ಥೆ ಮೂಲಕ ದೇಶಭಕ್ತಿ ನಡೆಯುವುದು ಮುಖ್ಯ ಸೈನಿಕರನ್ನು ಇತ್ತೀಚಿನ ದಿನಗಳಲ್ಲಿ ಬಿನ್ನವಾಗಿ ನೋಡುತ್ತಿದ್ದಾರೆ ಅವರನ್ನು ಗೌರವದಿಂದ ನೋಡುವ ಕಾರ್ಯವಾಗಬೇಕು ಸೈನಿಕರ ಅನುಭವ ಸಮಾಜಕ್ಕೆ ಸಿಗುವಂತಾಗಬೇಕು ಕವಲುದಾರಿಯಲ್ಲಿ ನಿಂತ ಸಮಾಜ ನಿಶ್ಚಿತ ದಾರಿಯಲ್ಲಿ ತೆಗೆದುಕೊಂಡು ಹೋಗಲು ಪೂರಕವಾಗಿ ಇಂತಹ ಸಂಘಗಳು ಕೆಲಸ ಮಾಡಬೇಕು ಎಂದರು.
ರಾಷ್ಟ್ರಪ್ರಶಸ್ತಿ ಪಡೆದ ಶಿಕ್ಷಕ ಜಿ ಜಿ ಹೆಗಡೆ ಬಾಳಗೋಡ ಮಾತನಾಡಿ ದೇಶ ಕಟ್ಟುವಲ್ಲಿ ಸೈನಿಕರ ಪಾತ್ರ ಮುಖ್ಯ ಅವರ ಅನುಭವವನ್ನು ವಿದ್ಯಾರ್ಥಿಗಳಿಗೆ ನೀಡಿದಾಗ ರಾಷ್ಟ್ರ
ಪ್ರೇಮದ ಕಲ್ಪನೆ ಮೂಡಿ ದೇಶ ಸೇವೆಗೆ ಪ್ರೇರಣೆ ಮೂಡುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ ಬಿ. ಪಾಟೀಲ್ ವಹಿಸಿದ್ದರು
ನಿವೃತ್ತ ನೌಕರ ಸಂಘದ ಅಧ್ಯಕ್ಷ ಸಿ ಎಸ್ ಗೌಡರ, ಎಂ ಆರ್ ಪಾಟೀಲ್, ರಾಜೇಶ್ ನಾಯ್ಕ, ಉಪಸ್ಥಿತರಿದ್ದರು.
ದತ್ತಾತ್ರೇಯ ಭಟ್ ನಿರೂಪಣೆ ಮಾಡಿದರು ಕಾರ್ಯ ದರ್ಶಿ ಕುಮಾರ್ ಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.


ಸೇನೆಯಲ್ಲಿ 18 ವರ್ಷಗಳ ಸಾರ್ಥಕ ಸೇವೆ: ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಭಾರತೀಯ ಸೇನೆಯಲ್ಲಿ 18 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಹಿಂದಿರುಗಿದ ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ.

ಬೆಳಗಾವಿ: ಭಾರತೀಯ ಸೇನೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧರೊಬ್ಬರಿಗೆ ಸ್ವಗ್ರಾಮದಲ್ಲಿ ಸಕಲ ವಾದ್ಯ ಮೇಳದೊಂದಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಗಿದೆ.

ಯೋಧನಿಗೆ ಸ್ವಗ್ರಾಮದಲ್ಲಿ ಅದ್ಧೂರಿ ಸ್ವಾಗತ

ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಅಜೀತ ಶಂಕರ ಮಗದುಮ್ಮ ಎಂಬುವವರು ಸೇನೆಯಲ್ಲಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದ್ದಾರೆ. ಅವರಿಗೆ ತೆರೆದ ವಾಹನದಲ್ಲಿ ಸಕಲ ವಾದ್ಯ ಮೇಳದೊಂದಿಗೆ ಪುಷ್ಪವೃಷ್ಟಿಯ ಮೂಲಕ ಗ್ರಾಮಸ್ಥರು ಭರ್ಜರಿ ಸ್ವಾಗತ ಕೋರಿದ್ರು.

ಗ್ರಾಮದ ಬೀರೇಶ್ವರ ಮಂದಿರದಿಂದ ಮೆರವಣಿಗೆ ಮುಖಾಂತರ ಬರಮಾಡಿಕೊಂಡರು. ಬಳಿಕ ಡೋಣವಾಡದ ದುರದುಂಡೇಶ್ವರಮಠದ ಶಿವಾನಂದ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು. ಸೇವಾ ನಿವೃತ್ತಿ ಹೊಂದಿದ ಸೈನಿಕ ಅಜೀತ್​​​ ಮಗದುಮ್ಮ ಅವರಿಗೆ ಶಿವಾನಂದ ಮಹಾಸ್ವಾಮಿಗಳು ಸನ್ಮಾನಿಸುವ ಮೂಲಕ ಆಶೀರ್ವದಿಸಿದರು‌.

ಬಳಿಕ ಮಾತನಾಡಿದ ಸ್ವಾಮೀಜಿಗಳು, ದೇಶಕ್ಕೆ ಇಬ್ಬರು ಬೆನ್ನುಲುಬುಗಳಿದ್ದು, ಒಬ್ಬರು ದೇಶ ಕಾಯುವ ಸೈನಿಕರು ಮತ್ತು ದೇಶಕ್ಕೆ ಅನ್ನ ಕೊಡುವ ರೈತರು ಎಂದರು. ದೇಶ ಕಾಯುವ ಸೈನಿಕರು ಪ್ರತಿಯೊಂದು ಮನೆಯಲ್ಲಿಯೂ ಹುಟ್ಟಬೇಕು.

ಪ್ರತಿಯೊಬ್ಬ ತಂದೆ-ತಾಯಂದಿರು ಮಕ್ಕಳಲ್ಲಿ ದೇಶಾಭಿಮಾನ ಬೆಳೆಸುವ ಮುಖಾಂತರ ತಮ್ಮ ಮಕ್ಕಳನ್ನು ಸೈನಿಕರನ್ನಾಗಿಸಲು ಮುಂದಾಗಬೇಕು. ತಾಯಿ ಭಾರತಾಂಬೆಯ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಅದಕ್ಕೂ ಯೋಗಬೇಕು. ಆ ಯೋಗ ಅಜೀತ್​ ಶಂಕರ ಮಗದುಮ್ಮ ಅವರಿಗೆ ದೊರಕಿರುವುದು ಹೆಮ್ಮಯ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.

ವೀರಯೋಧ ಅಜೀತಶಂಕರ ಮಗದುಮ್ಮ ಮಾತನಾಡಿ, ತಂದೆ – ತಾಯಿ, ಗ್ರಾಮದ ಗುರು ಹಿರಿಯರ ಆಶೀರ್ವಾದದಿಂದ ನಾನು 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸಿರುವ ತೃಪ್ತಿ ನನಗಿದೆ ಎಂದು ಹೇಳಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *