

ಗೋಕರ್ಣ ದೇವಾಲಯದ ಪೂಜಾ ವಿವಾದ : ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ
ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ- ಗೋಕರ್ಣ : ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ –

ಕಾರವಾರ : ಖ್ಯಾತ ನಟ ಮತ್ತು ನಿರ್ದೇಶಕ ಪ್ರೇಮ್ ಉತ್ತರ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ದ ಮಹಾಬಲೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಮಹಾಗಣಪತಿ,ತಾಮ್ರ ಗೌರಿ ದೇವಾಲಯಕ್ಕೆ ತೆರಳಿ ದರ್ಶನ ಪಡೆದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟಕದ ಎಲ್ಲಾ ಪ್ರಮುಖ ದೇವಾಲಯಕ್ಕೆ ಭೇಟಿ ನೀಡಿದ್ದೆನು.ಆದರೆ ಇಲ್ಲಿ ಮಾತ್ರ ಬರಲಾಗಲಿಲ್ಲ.
ಇದೇ ಮೊದಲ ಬಾರಿ ಶ್ರೀಕ್ಷೇತ್ರಕ್ಕೆ ಬಂದಿದ್ದು,ದೇವರ ದರ್ಶನ ಸಂತಸ ತಂದಿದೆ ಎಂದರು.
ಇಲ್ಲಿನ ಸಂಪ್ರದಾಯ,ಆಚಾರ ವಿಚಾರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಇನ್ನೊಮ್ಮೆ ಪತ್ನಿ ನಟಿ ರಕ್ಷಿತಾರವರನ್ನು ಗೋಕರ್ಣಕ್ಕೆ ಕರೆದುಕೊಂಡು ಬರುವುದಾಗಿ ಅವರು ತಿಳಿಸಿದರು. ಈ ಭಾಗದ ಜನರು ಚಲನಚಿತ್ರ ನೋಡಿ ಪ್ರೋತ್ಸಾಹಿಸುತ್ತಿದ್ದು,ಇದೇ ರೀತಿ ಜನರ ಪ್ರೋತ್ಸಾಹ ಮುಂದುವರಿಯಲಿ ಎಂದು ಆಶಿಸಿದರು.ಮಹಾಬಲೇಶ್ವರ ದೇವಾಲಯದಲ್ಲಿರುವ ಧವಳಿಗಿರಿ ಎಂಬ ನಂದಿಯನ್ನು ವೀಕ್ಷಿಸಿ,ನಂದಿ ಮೈ ಸವರಿ ಬಾಳೆಹಣ್ಣು ನೀಡಿ ಕೆಲಕಾಲ ಕಳೆದು ಖುಷಿಪಟ್ಟರು.ಅಲ್ಲದೆ ತಮ್ಮ ಊರು ಮಂಡ್ಯ ಜಿಲ್ಲೆಯ ಮದ್ದೂರು ತೋಟದ ಮನೆಯಲ್ಲಿರುವ ಹಸುಗಳು ಮತ್ತು ವಿವಿಧ ತಳಿಯ ಜಾನುವಾರುಗಳನ್ನು ಸಾಕಿದ ಬಗ್ಗೆ ಹೇಳಿಕೊಂಡು ಸಂತಸ ಪಟ್ಟರು.
ದೇವಸ್ಥಾನ ಆಡಳಿತ ಮಂಡಳಿ ಹಾಗೂ ಉಪಾಧಿವಂತರ ನಡುವಿನ ಗಲಾಟೆಯಿಂದಾಗಿ ಆತ್ಮಲಿಂಗ ದರ್ಶನಕ್ಕೆ ಭಕ್ತರಿಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಆತ್ಮಲಿಂಗ ದರ್ಶನಕ್ಕೆಂದೇ ದೂರದೂರುಗಳಿಂದ ಆಗಮಿಸುತ್ತಿದ್ದ ಭಕ್ತರಿಗೆ ಇದು ಸಂತಸ ಮೂಡಿಸಿದ್ದಂತೂ ಸತ್ಯ..
ಕಾರವಾರ : ದಕ್ಷಿಣಕಾಶಿ ಖ್ಯಾತಿಯ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಸ್ಥಾನ ಸದ್ಯ ಸರ್ಕಾರದ ಹಿಡಿತದಲ್ಲಿದೆ. ದೇವಸ್ಥಾನ ನಿರ್ವಹಣೆಗೆ ಸುಪ್ರೀಂಕೋರ್ಟ್ ಸಮಿತಿಯೊಂದನ್ನ ರಚನೆ ಮಾಡಿತ್ತು.
ಆದರೆ, ಕೆಲ ದಿನಗಳ ಹಿಂದೆ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರವಾಗಿ ಉಪಾಧಿವಂತರು ಹಾಗೂ ದೇವಸ್ಥಾನದ ಸಮಿತಿಯ ಸದಸ್ಯರ ನಡುವೆ ಗಲಾಟೆಯಾಗಿತ್ತು. ಇದರಿಂದ ಭಕ್ತರಿಗೆ ಆತ್ಮಲಿಂಗ ದರ್ಶನಕ್ಕೆ ಅವಕಾಶ ಇಲ್ಲದಂತಾಗಿತ್ತು. ಇದೀಗ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಪೂಜೆ ವಿಚಾರವಾಗಿ ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ರಾಜ್ಯದಲ್ಲಿಯೇ ಶಿವನ ಆತ್ಮಲಿಂಗವಿರುವ ಏಕೈಕ ದೇವಸ್ಥಾನ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ. ಹೀಗಾಗಿ, ಹೊರ ರಾಜ್ಯವಷ್ಟೇ ಅಲ್ಲದೇ ದೇಶ-ವಿದೇಶಗಳ ಪ್ರವಾಸಿಗರೂ ಸಹ ಮಹಾಬಲೇಶ್ವರನ ದರ್ಶನ ಪಡೆಯಲು ಗೋಕರ್ಣಕ್ಕೆ ಆಗಮಿಸುತ್ತಾರೆ.
ಈ ಹಿಂದೆ 2007ರಿಂದ ಶ್ರೀ ರಾಮಚಂದ್ರಾಪುರ ಮಠದ ಆಡಳಿತದಲ್ಲಿದ್ದ ಮಹಾಬಲೇಶ್ವರ ದೇವಸ್ಥಾನವನ್ನ 2021ರ ಮೇ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ತನ್ನ ಸುಪರ್ದಿಗೆ ತೆಗೆದುಕೊಂಡಿತ್ತು. ಅಲ್ಲದೇ ದೇವಸ್ಥಾನದ ಆಡಳಿತ ನಿರ್ವಹಣೆಗೆ ಅರ್ಚಕರು ಸೇರಿ ಸಮಿತಿಯೊಂದನ್ನ ರಚನೆ ಮಾಡಿತ್ತು.
ಆದ್ರೆ, ಕಳೆದ ತಿಂಗಳು ಪೂಜೆ ಸಲ್ಲಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶದಿಂದ ಗೊಂದಲ ಉಂಟಾಗಿದೆ. ಅನಾದಿ ಕಾಲದಿಂದ ಮಹಾಬಲೇಶ್ವರನಿಗೆ ಪೂಜೆ ಮಾಡಿಕೊಂಡು ಬಂದಿರುವ ಉಪಾಧಿವಂತರು ಹಾಗೂ ಸಮಿತಿಯ ಸದಸ್ಯರ ನಡುವೆ ಗಲಾಟೆ ಉಂಟಾಗಿತ್ತು.
ಪರಿಣಾಮ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಭಕ್ತರೂ ಸೇರಿ ಯಾರಿಗೂ ಅವಕಾಶ ನೀಡದಂತೆ ಸಮಿತಿ ಸೂಚನೆ ನೀಡಿತ್ತು. ಇದು ವಿವಾದಕ್ಕೆ ಕಾರಣವಾಗಿತ್ತು. ಈ ನಿಟ್ಟಿನಲ್ಲಿ ಸಮಿತಿಯ ಸದಸ್ಯರು ಹಾಗೂ ಉಪಾಧಿವಂತರೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನ ಕೈಗೊಂಡು, ಸುಪ್ರೀಂಕೋರ್ಟ್ ಆದೇಶದ ಕುರಿತು ಮಾಹಿತಿ ನೀಡಿದ್ದಾರೆ.
ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯು ದೇವಸ್ಥಾನದ ಆಡಳಿತಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನ ಕೈಗೊಳ್ಳಬಹುದಾಗಿದೆ. ಸರ್ಕಾರದ ಆದೇಶದಂತೆ ಭಕ್ತರ ದರ್ಶನಕ್ಕೆ ಸೂಕ್ತ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮಾತ್ರ ನಿರ್ಧಾರಗಳನ್ನ ಕೈಗೊಳ್ಳಬೇಕು. ಅದನ್ನ ಹೊರತುಪಡಿಸಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರವಾಗಿ ಯಾವುದೇ ನಿರ್ಬಂಧ ಹೇರಲು ಅಧಿಕಾರ ಇಲ್ಲ ಎಂದು ತಿಳಿಸಿದ್ದಾರೆ.
ಇದೇ ವರ್ಷ ಮೇ ತಿಂಗಳಲ್ಲಿ ಮಹಾಬಲೇಶ್ವರ ದೇವಸ್ಥಾನದ ಆಡಳಿತ ವಹಿಸಿಕೊಂಡಿದ್ದ ಸುಪ್ರೀಂಕೋರ್ಟ್ ಈ ಹಿಂದೆ ರಾಮಚಂದ್ರಾಪುರ ಮಠದ ಆಡಳಿತದ ಪೂರ್ವದಲ್ಲಿ 2007ರಲ್ಲಿ ಜಾರಿಯಲ್ಲಿದ್ದ ಪೂಜಾ ವಿಧಾನಗಳನ್ನೇ ಅನುಸರಿಸುವಂತೆ ಸೂಚಿಸಿತ್ತು.
ಅಲ್ಲದೇ ದೇವಸ್ಥಾನದ ಆಡಳಿತ ನಿರ್ವಹಣೆಗೆ ಉಪವಿಭಾಗಾಧಿಕಾರಿ ನೇತೃತ್ವದ ಸಮಿತಿಯೊಂದನ್ನ ರಚನೆ ಮಾಡಿತ್ತು. ಈ ಹಿಂದಿನಿಂದ ಅನುವಂಶೀಯವಾಗಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುತ್ತಿದ್ದ ಉಪಾಧಿವಂತರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಆಗಮಿಸಿದ ವೇಳೆ ಸಮಿತಿಯ ಸದಸ್ಯರು ಅವಕಾಶ ನೀಡಲು ನಿರಾಕರಿಸಿದ್ದರು. ಇದರಿಂದ ಮತ್ತೆ ಗಲಾಟೆ ಉಂಟಾಗುವಂತಾಗಿತ್ತು.
ಸದ್ಯ ಭಕ್ತರ ದರ್ಶನಕ್ಕೆ ಯಾವುದೇ ಅಡ್ಡಿಪಡಿಸದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ವೈಯಕ್ತಿಕ ಪೂಜೆ ಸಲ್ಲಿಕೆ ಅಥವಾ ನಿರಾಕರಣೆ ವಿಚಾರವಾಗಿ ಸುಪ್ರೀಂಕೋರ್ಟ್ನಿಂದ ಪ್ರತ್ಯೇಕ ಆದೇಶ ತಂದಲ್ಲಿ ಈ ಸಂಬಂಧ ಪರಿಶೀಲಿಸೋದಾಗಿ ತಿಳಿಸಿದ್ದಾರೆ. ಭಕ್ತರಿಗೆ ಆತ್ಮಲಿಂಗ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ದೇವಸ್ಥಾನ ಸಮಿತಿ ಸಂತಸ ವ್ಯಕ್ತಪಡಿಸಿದೆ.
ದೇವಸ್ಥಾನ ಆಡಳಿತ ಮಂಡಳಿ ಹಾಗೂ ಉಪಾಧಿವಂತರ ನಡುವಿನ ಗಲಾಟೆಯಿಂದಾಗಿ ಆತ್ಮಲಿಂಗ ದರ್ಶನಕ್ಕೆ ಭಕ್ತರಿಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ. ಆತ್ಮಲಿಂಗ ದರ್ಶನಕ್ಕೆಂದೇ ದೂರದೂರುಗಳಿಂದ ಆಗಮಿಸುತ್ತಿದ್ದ ಭಕ್ತರಿಗೆ ಇದು ಸಂತಸ ಮೂಡಿಸಿದ್ದಂತೂ ಸತ್ಯ. (etbk)
ಕೋವಿಡ್ ಲಸಿಕಾ ಮಾಹಿತಿ-
ದಿನಾಂಕ :13/10/2021 ಸಿದ್ದಾಪುರ ತಾಲೂಕಿನ ವಿವಿಧ ಸ್ಥಳಗಳಲ್ಲಿ ನಡೆಯುವ ಮಹಾಮೇಳ ಕೋವಿಡ್ ಲಸಿಕ ಶಿಬಿರದ ಮಾಹಿತಿ ಕೆಳಗಿನಂತಿದೆ.
1.ಪ್ರಾಥಮಿಕ ಆರೋಗ್ಯ ಕೇಂದ್ರ :ಹೆರೂರು
A).ಉಪಕೇಂದ್ರ :ಹೆರೂರು
150 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ :ಪ್ರಾ.ಆ.ಕೇಂದ್ರದಲ್ಲಿ
2.ಪ್ರಾಥಮಿಕ ಆರೋಗ್ಯ ಕೇಂದ್ರ : ಕೂರ್ಲಕೈ*
A)ಉಪಕೇಂದ್ರ*:ಕೊರ್ಲಕೈ
100 ಡೋಸ್ ಲಸಿಕೆ ಲಭ್ಯವಿದೆ
*ಸ್ಥಳ* :ಪ್ರಾ.ಆ.ಕೇಂದ್ರದಲ್ಲಿ
3ಪ್ರಾಥಮಿಕ ಆರೋಗ್ಯ ಕೇಂದ್ರ :ಕಾನಸೂರು**
A.ಉಪಕೇಂದ್ರ:ಕಾನಸೂರು
150 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ: ಪ್ರಾ.ಆ.ಕೇಂದ್ರದಲ್ಲಿ
4.)ಪ್ರಾಥಮಿಕ ಆರೋಗ್ಯ ಕೇಂದ್ರ : ಕ್ಯಾದಿಗಿ*
*A.ಉಪಕೇಂದ್ರ : ಕ್ಯಾದಿಗಿ
100 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ: ಪ್ರಾಥಮಿಕ ಆರೋಗ್ಯ ಕೇಂದ್ರ.
5.)ಪ್ರಾಥಮಿಕ ಆರೋಗ್ಯ ಕೇಂದ್ರ : ದೊಡ್ಮನೆ*
ಉಪಕೇಂದ್ರ: ದೊಡ್ಮನೆ
100 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ.
6.)ಪ್ರಾಥಮಿಕ ಆರೋಗ್ಯ ಕೇಂದ್ರ : ಬಿಳಿಗಿ*
*A.ಉಪಕೇಂದ್ರ : ಬಿಳಿಗಿ
100 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ : ಪ್ರಾಥಮಿಕ ಆರೋಗ್ಯ ಕೇಂದ್ರ
7.)ಪ್ರಾಥಮಿಕ ಆರೋಗ್ಯ ಕೇಂದ್ರ : ಕೊಲ್ ಸಿರ್ಸಿ*
ಉಪಕೇಂದ್ರ: ಕೊಲ್ ಸಿರ್ಸಿ
100 ಡೋಸ್ ಲಸಿಕೆ ಲಭ್ಯವಿದೆ
ಸ್ಥಳ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ.
B.ಸಿದ್ದಾಪುರ :ಬಾಲಕರ
ಸರ್ಕಾರಿ ಶಾಲೆ
200 ಡೋಸ್ ಲಸಿಕೆ ಲಭ್ಯವಿದೆ.
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಿದ್ದಾಪುರ.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
