ಕಪ್ಪು ಎಳ್ಳು ಥರದ ಮರಳಿನ ತೀಳ್ ಮಾತಿ ಬೀಚ್ ಬಗ್ಗೆ ತಿಳಿಯಿರಿ

Leaders negligence leads to washed out beauty of Tilmathi black sand beach

ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ

ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದರೆ ಈ ಸಮುದ್ರ ತೀರ ತಲುಪಬೇಕೆಂದರೆ ಹರಸಾಹಸ ಪಡಬೇಕಿದೆ. ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದೆ. ಮಂಜೂರಾದ ತೂಗುಸೇತುವೆಯೂ ನಿರ್ಮಾಣವಾಗದೆ ಅಭಿವೃದ್ಧಿಯಿಂದಲೇ ದೂರಾಗಿದೆ.

ಕಾರವಾರ (ಉ.ಕ): ಸರ್ಕಾರ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಹಣ ಬಿಡುಗಡೆ ಮಾಡಿದ್ದರೂ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬೀಳುತ್ತವೆ. ಇದಕ್ಕೆ ನಿದರ್ಶನ ಎನ್ನುವಂತೆ ಉತ್ತರಕನ್ನಡ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರಕ್ಕೆ ಸರ್ಕಾರ ಹಣ ಬಿಡುಗಡೆಗೊಳಿಸಿದ್ದರೂ ಜನಪ್ರತಿನಿಧಿಗಳ ಕಚ್ಚಾಟದಿಂದಾಗಿ ಅಭಿವೃದ್ಧಿಯಾಗದೆ ಉಳಿದಿದೆ.

ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದ್ರೆ ಈ ಕಡಲತೀರಕ್ಕೆ ತೆರಳಲು ಸೂಕ್ತ ರಸ್ತೆ ಮಾರ್ಗದ ವ್ಯವಸ್ಥೆ ಇಲ್ಲದ ಹಿನ್ನಲೆ ಈ ಹಿಂದೆ 2014ರಲ್ಲಿ ಪ್ರವಾಸೋದ್ಯಮ ಇಲಾಖೆ 5 ಕೋಟಿ ರೂ. ವೆಚ್ಚದಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಅನುದಾನ ಬಿಡುಗಡೆಗೊಳಿಸಿತ್ತು. ಆದರೆ ಬಿಡುಗಡೆಯಾದ ಅನುದಾನ ಬಳಕೆಯಾಗದೇ ಉಳಿದಿದೆ.

ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ

ಈ ಹಿಂದಿನ ಅವಧಿಯಲ್ಲಿ ಕಾಂಗ್ರೆಸ್‌ನ ಸತೀಶ್ ಸೈಲ್ ಶಾಸಕರಾಗಿದ್ದು, ಇದಾದ ಬಳಿಕ 2018ರಲ್ಲಿ ಬಿಜೆಪಿಯ ರೂಪಾಲಿ ನಾಯ್ಕ ಶಾಸಕಿಯಾಗಿ ಆಯ್ಕೆಯಾಗಿದ್ದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಒಮ್ಮೆ ಹಣ ವಾಪಸ್​ ಆಗಿದ್ದು ಇದಾದ ಬಳಿಕ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಸರ್ಕಾರ ಬದಲಾದ ಹಿನ್ನೆಲೆ ಇದುವರೆಗೂ ಹಣ ಬಿಡುಗಡೆಯಾಗಿಲ್ಲ. ಆದರೆ, ಹಾಲಿ ಶಾಸಕಿ ರೂಪಾಲಿ ನಾಯ್ಕ ಉದ್ದೇಶ ಪೂರ್ವಕವಾಗಿಯೇ ತೀಳ್​ಮಾತಿ ಕಡಲತೀರವನ್ನು ಅಭಿವೃದ್ಧಿಪಡಿಸುತ್ತಿಲ್ಲ ಎಂದು ಮಾಜಿ ಶಾಸಕ ಸತೀಶ್ ಸೈಲ್ ಆರೋಪಿಸಿದ್ದರು.

ನಿರ್ಮಾಣವಾಗದ ತೂಗು ಸೇತುವೆ

ಹಿಂದೆ ತೀಳ್​​​ಮಾತಿ ಬೀಚ್‌ಗೆ ಮಂಜೂರಾಗಿದ್ದ ಅನುದಾನ ವಾಪಸಾದ ಬಳಿಕ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ ಕಡಲತೀರಕ್ಕೆ ತೂಗುಸೇತುವೆ ನಿರ್ಮಿಸಲು 1.20 ಕೋಟಿ ರೂ. ವೆಚ್ಚದಲ್ಲಿ ನೂತನ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದರು. ಅಷ್ಟರಲ್ಲಿ ಸರ್ಕಾರವೇ ಬದಲಾಗಿದ್ದು, ಅದಾದ ಬಳಿಕ ತೀಳ್​ಮಾತಿ ಕಡಲತೀರಕ್ಕೆ ಸೇತುವೆ ನಿರ್ಮಿಸುವ ಯೋಜನೆ ನನೆಗುದಿಗೆ ಬಿದ್ದಿತ್ತು.

ಮಾಜಿ ಶಾಸಕ ಸತೀಶ್ ಸೈಲ್ ತಮ್ಮ ಅವಧಿಯಲ್ಲಿ ಪೂರ್ಣಗೊಳಿಸಲಾಗದ ಯೋಜನೆಗಳಿಗೆ ನಾನು ಕಾರಣೀಕರ್ತೆ ಎನ್ನುವಂತೆ ಬಿಂಬಿಸುತ್ತಿದ್ದು, ಇದನ್ನ ಬಿಡಬೇಕು ಅಂತಾ ಶಾಸಕಿ ರೂಪಾಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ತೀಳ್​​ಮಾತಿ ಕಡಲತೀರ ಗೋವಾ ಗಡಿಗೆ ಹತ್ತಿರದಲ್ಲಿದ್ದು, ಗೋವಾ ರಾಜ್ಯ ಈ ಕಡಲತೀರವನ್ನ ತನ್ನದು ಎಂದು ಹೇಳಿಕೊಳ್ಳುತ್ತಿದೆ.

ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಕೆಸರೆರಚಾಟದಿಂದಾಗಿ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿದ್ದು, ಇನ್ನಾದರೂ ಅಭಿವೃದ್ಧಿ ಕಾರ್ಯಗಳೆಂದು ಬಂದಾಗ ತಮ್ಮ ಪ್ರತಿಷ್ಠೆ ಬದಿಗಿಟ್ಟು ಕ್ಷೇತ್ರಕ್ಕಾಗಿ ದುಡಿಯಲಿ ಎಂಬುದು ಸ್ಥಳೀಯರ ಆಶಯವಾಗಿದೆ. (etbk)

ಸಿದ್ದಾಪುರ: ತಾಲೂಕಿನ ಹೆರವಳ್ಳಿಯ ಮಡಿವಾಳ ಮಾಚಿದೇವ ದೇವಸ್ಥಾನ ದಲ್ಲಿ ಶರನ್ನವರಾತ್ರಿಯ ಭಜನಾ ಕಾರ್ಯಕ್ರಮ ದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಪ್ರಸಿದ್ಧ ಭಾಗವತರಾದ ಕೇಶವ ಹೆಗಡೆ ಕೊಳಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದಿನ ಜನತೆ ಟಿವಿ, ಮೊಬೈಲ್ ನಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳು ಮರೆಯಾಗುತ್ತಿ ವೆ. ನಮ್ಮ ಸಂಸ್ಕ್ರತಿ ಮರೆಯಬಾರದು. ನಮ್ಮತನ ನಮ್ಮ ಧ್ಯೇಯವಾಗಿರಬೇಕು ಎಂದರು. ಪತ್ರಕರ್ತ ಸುರೇಶ ಮಡಿವಾಳ ಕಡಕೇರಿ ಮಾತನಾಡಿ ಒಂಬತ್ತು ದಿನಗಳ ದೇವಿಯ ಆರಾಧನೆಯ ಕುರಿತು ಮಾಹಿತಿ ನೀಡಿದರು.
ಗ್ರಾಮದ ಹಿರಿಯರು, ಶ್ರೀ ರಾಮ ಭಜಕ ಮಂಡಳಿಯ ಸಂಸ್ಥಾಪಕ ಅಧ್ಯಕ್ಷರು ಆದ ವಿ ಟಿ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. . ಗ್ರಾಮ ಕಮಿಟಿಯ ಅಧ್ಯಕ್ಷ ಕೃಷ್ಣ ಮಡಿವಾಳ, ಅಣ್ಣಪ್ಪ ಮಡಿವಾಳ, ಬಸವರಾಜ ಮಡಿವಾಳ ಮುಂತಾದವರು ಉಪಸ್ಥಿತರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *