ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ ತಾಳ್ಮೆ ಇಲ್ಲ ಹಾಗಾಗಿ ಪಕ್ಷ ನನ್ನನ್ನೂ ಪರಿಗಣಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಯೂ ಎದುರಾಗಬಹುದು ಹೀಗೆಂದು ಕಡಕ್ ಆಗಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿದವರು ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜಿಬೈಲ್

ಸಂದರ್ಭ- ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳ ಮತ್ತು ಹಿಂದುಳಿದ ವರ್ಗಗಳ ವಿಭಾಗ ಆಯೋಜಿಸುತ್ತಿರುವ ಬಿ.ಜೆ.ಪಿ. ಹಿಂದುಳಿದವರ್ಗಗಳ ಸಮಾವೇಶದ ಕುರಿತು ಮಾಹಿತಿ ನೀಡಲು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ನಾಯ್ಕ ಮಾಧ್ಯಮಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪಕ್ಷದ ಸಂಘಟನೆಗೆ ಶಕ್ತಿ ಇಲ್ಲದ ಸಂದರ್ಭದಿಂದ ನಿರಂತರ ಮೂರು ದಶಕ ಸೇವೆ ಸಲ್ಲಿಸಿದ್ದೇನೆ. ಮೀಸಲಾತಿ,ತಾಂತ್ರಿಕ ಅಡಚಣೆಗಳಿಲ್ಲದಿದ್ದರೆ ಸಿದ್ಧಾಪುರದ ಪ.ಪಂ. ನಲ್ಲಿ ಪಕ್ಷಾತೀತವಾಗಿ ನಿರಂತರ ಅಧ್ಯಕ್ಷರಾಗುವ ಅವಕಾಶವಿತ್ತು. ಈಗಲೂ ನನ್ನ ವೈಯಕ್ತಿಕ ಅನುಕೂಲಕ್ಕಾಗಿ ನನಗೆ ಯಾವ ಹುದ್ದೆಯ ಅಗತ್ಯವೂ ಇಲ್ಲ. ಅಧಿಕಾರ ಇದ್ದರೆ ಜನಸೇವೆ ಮಾಡುತ್ತೇವೆ. ಜನರಿಗೆ ನೆರವಾಗುವ ಅವಕಾಶದ ಅಧಿಕಾರ ಕೇಳುವ ಹಕ್ಕು ನಮಗಿದೆ. ಹಾಗಾಗಿ ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ನನ್ನನ್ನು ಪರಿಗಣಿಸುವಂತೆ ಪಕ್ಷಕ್ಕೆ ವಿನಂತಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷ ನಾನಾ ವಿಭಾಗಗಳ ಸಂಘಟನೆ, ಸಮಾವೇಶಕ್ಕೆ ಸೂಚಿಸಿದೆ. ಈ ಉದ್ದೇಶದಿಂದ ಸಿದ್ಧಾಪುರದಲ್ಲಿ ಅಕ್ಟೋಬರ್ 30 ರಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ನಾಯಕರು, ಸಚಿವರು,ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಮಾಧ್ಯಮಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಬಹುತೇಕ ಪ್ರಮುಖರು ಹಾಜರಿದ್ದರು. ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕಾ ಅಧ್ಯಕ್ಷ ಬಲರಾಮ್ ನಾಮಧಾರಿ ವಿವರಣೆ ನೀಡಿದರು. ಪ.ಪಂ. ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯರಾದ ವಿನಯ್ ಹೊನ್ನೆಗುಂಡಿ, ವಿಜೇಂದ್ರ ಗೌಡರ್, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಈಶ್ವರ ನಾಯ್ಕ ಮನಮನೆ, ಎಸ್.ಕೆ. ಮೇಸ್ತ ಸೇರಿದಂತೆ ಹಲವರಿದ್ದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *