ಕಾಂಗ್ರೆಸ್ ನಾಯಕ ಸಲೀಂ ಅಮಾನತು…ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ

ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತು

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ-

ಗ್ರಾಮ ಸ್ವರಾಜ್ ಕಲ್ಪನೆ ಕೊಟ್ಟ ಗಾಂಧಿ ಆದರ್ಶಗಳ ಮೂಲಕ ಯುವಜನತೆಗೆ ಮಾರ್ಗದರ್ಶನ ಮಾಡುವ ಅನಿವಾರ್ಯತೆ ಈಗ ಹೆಚ್ಚಿದೆ ಎಂದು ಕೆ.ಪಿ.ಸಿ.ಸಿ. ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ವಿ.ಎನ್. ನಾಯ್ಕ ಬೇಡ್ಕಣಿ ಹೇಳಿದರು. ಸಿದ್ಧಾಪುರದಲ್ಲಿ ಹೊಸದಾಗಿ ಪ್ರಾರಂಭವಾದ ಕಾಂಗ್ರೆಸ್ ಬ್ಲಾಕ್ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬಿ.ಜೆ.ಪಿ. ಆರ್. ಎಸ್.ಎಸ್. ನಿರ್ಧೇಶನದಂತೆ ಸತ್ಯವನ್ನು ಸುಳ್ಳು ಸುಳ್ಳನ್ನು ಸತ್ಯ ಮಾಡಲು ಪ್ರಯತ್ನಿಸುತ್ತಿದೆ. ಈ ಹಿಡನ್ ಅಜೆಂಡಾಗಳನ್ನು ಸತ್ಯಾಗ್ರಹ,ಚಳವಳಿಮೂಲಕ ಎದುರಿಸಬೇಕು ಎಂದರು.

ಕಾಂಗ್ರೆಸ್ ಕಛೇರಿ ಉದ್ಘಾಟಿಸಿದ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಾತನಾಡಿ ಗಾಂಧಿ ಆದರ್ಶಗಳ ಮೂಲಕ ಸಮಾಜವನ್ನು ಉಳಿಸಿಕೊಳ್ಳಬೇಕು ಇದಕ್ಕೆ ವಿರುದ್ಧವಾಗಿರುವವರ ಮತೀಯವಾದಿ ಹುನ್ನಾರಗಳನ್ನೂ ಅರ್ಥಮಾಡಿಕೊಳ್ಳಬೇಕು ಎಂದರು.

ಶಿರಸಿ-ಸಿದ್ಧಾಪುರ ಕಾಂಗ್ರೆಸ್ ವೀ ಕ್ಷಕಿ ಸುಷ್ಮಾ ರಾಜ್ ಗೋಪಾಲ ರೆಡ್ಡಿ ಮಾತನಾಡಿ ಪಕ್ಷ, ಸರ್ಕಾರಗಳಲ್ಲಿ ಮಹಿಳಾ ಮೀಸಲಾತಿ ನೀಡುವ ಮೂಲಕ ಗಾಂಧೀಜಿಯವರ ಸ್ತ್ರೀ ಸಮಾನತೆಗೆ ಬೆಂಬಲಿಸಬೇಕು ಎಂದರು.

Saleem and V S Ugrappa

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಲೀಂ ಅವರು ಆಧಾರರಹಿತ ಆರೋಪ ಮಾಡಿದ್ದಾರೆ, ಅವರು ಹೇಳಿರುವುದರಲ್ಲಿ ಸತ್ಯಾಂಶವಿಲ್ಲ. ವೇದಿಕೆಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಡಿರುವ ಮಾತುಗಳು ಅಲ್ಲ, ಆಫ್ ದಿ ರೆಕಾರ್ಡ್ ಅವರಿಬ್ಬರೂ ವೈಯಕ್ತಿಕವಾಗಿ ಮಾತನಾಡಿಕೊಂಡಿದ್ದಾರಷ್ಟೆ, ಆದರೂ ಅವರ ಮಾತುಗಳನ್ನು ಪಕ್ಷದ ಶಿಸ್ತು ಸಮಿತಿಗೆ ಕಳುಹಿಸಲಾಗಿದ್ದು ಪರಾಮರ್ಶೆ ನಡೆಸಿ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನ ಮಾಡಲಾಗಿದೆ. ಉಗ್ರಪ್ಪನವರಲ್ಲಿ ವಿವರಣೆ ಕೇಳುತ್ತೇವೆ ಎಂದು ಹೇಳಿದ್ದಾರೆ. 

https://imasdk.googleapis.com/js/core/bridge3.485.1_en.html#goog_795739223

ಇನ್ನು ಟ್ವೀಟ್ ಮೂಲಕ ಬಿಜೆಪಿಯವರಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಅನಧಿಕೃತ ಮಾತುಗಳನ್ನು ಇಟ್ಟುಕೊಂಡು ರೊಟ್ಟಿ ನೆಕ್ಕುತ್ತಿರುವ ಬಿಜೆಪಿಯವರೇ ನಿಮ್ಮ ಪಕ್ಷದವರಾದ ಹೆಚ್ ವಿಶ್ವನಾಥ್ ಅವರು ಅಧಿಕೃತವಾಗಿ ಸುದ್ದಿಗೋಷ್ಠಿ ನಡೆಸಿ ಬಿ ಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಮಾಡಿದ್ದ ಭ್ರಷ್ಟಾಚಾರ ಆರೋಪಗಳಿಗೆ ಮೊದಲು ಉತ್ತರಿಸಿ ಎಂದು ತಿರುಗೇಟು ಕೊಟ್ಟಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *