ಯಲ್ಲಾಪುರ ಸ್ಫೋಟದ ಭಯಾನಕ ಚಿತ್ರಗಳು..

ಕೆಮಿಕಲ್ ಟ್ಯಾಂಕರ್ ಸ್ಫೋಟ ; ಗದ್ದೆ, ತೋಟದ ಜತೆಗೆ ಹೊತ್ತಿ ಉರಿದ ಅರಣ್ಯ ಪ್ರದೇಶ

ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ..

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ಅನಾಹುತಗಳು ಆಗಾಗ ನಡೆಯುತ್ತಿರುತ್ತವೆ. ಬುಧವಾರ ಸಹ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಕೆಮಿಕಲ್ ತುಂಬಿದ ಟ್ಯಾಂಕರ್ ಪಲ್ಟಿಯಿಂದ ಬೆಂಕಿ ಹತ್ತಿಕೊಂಡಿದೆ. ಬೆಳೆಗಳಿಗೂ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಟ್ಯಾಂಕರ್​​ನಿಂದ ಕೆಮಿಕಲ್​ ಸೋರಿಕೆಯಿಂದ ಬೆಳೆಗಳಿಗೆ ಬೆಂಕಿ..

ಇಂದು ಬೆಳಗ್ಗೆ ಸುಮಾರು 5.30ರ ವೇಳೆಗೆ ಕೆಮಿಕಲ್ ಸಾಗಿಸುತ್ತಿದ್ದ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 63ರ ಆರತಿಬೈಲು ಘಟ್ಟದಲ್ಲಿ ಪಲ್ಟಿಯಾಗಿದೆ. ಇನ್ನು, ಪಲ್ಟಿಯಾಗಿ ಕೆಮಿಕಲ್ ಸೋರಿಕೆಯಾಗಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ.

ಪ್ರಾರಂಭದಲ್ಲಿ ಟ್ಯಾಂಕರಿಗೆ ಮಾತ್ರ ಬೆಂಕಿ ತಗುಲಿದೆ. ನಂತರ ಟ್ಯಾಂಕರ್‌ನಿಂದ ಕೆಮಿಕಲ್ ಸೋರಿಕೆಯಾಗಿ ಸಮೀಪದ ಅರಣ್ಯ, ಗದ್ದೆ ತೋಟಗಳಿಗೆ ಹೋಗಿ ಬೆಂಕಿ ಹತ್ತಿ ಗದ್ದೆ, ತೋಟ ನಾಶವಾಗಿವೆ.

ಇದಲ್ಲದೇ ಸಮೀಪದ ಹೊಳೆಯ ನೀರಿಗೆ ಸಹ ಕೆಮಿಕಲ್ ಸೇರ್ಪಡೆಯಾಗಿ ಸುಮಾರು ನೂರರಿಂದ ಇನ್ನೂರು ಮೀಟರ್ ಹೊಳೆಯ ನೀರಿನ ಮೇಲೂ ಸಹ ಬೆಂಕಿ ಹೊತ್ತಿ ಉರಿದಿದೆ. ಘಟನೆಯಿಂದ ಸುತ್ತಮುತ್ತಲಿನ ಜನರು ಆತಂಕಕ್ಕೊಳಗಾಗಿದ್ದಾರೆ. ಬೆಂಕಿಯನ್ನ ನಂದಿಸಲು ಅಗ್ನಿಶಾಮಕ ದಳದವರು ಹರಸಾಹಸವನ್ನೇ ಪಡುವಂತಾಗಿದೆ.

ಆಯಿಲ್ ಪೇಯಿಂಟ್​​ಗೆ ಬಳಸುವ ಬೆಂಜಿನ್ ಪೆಟ್ರೋಕೆಮಿಕಲ್ ರಾಸಾಯನಿಕಯವನ್ನು ಟ್ಯಾಂಕರ್​​ನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು. ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ವಾಹನ ಸಾಗುತ್ತಿತ್ತು. ಮೂಲಗಳ ಪ್ರಕಾರ ಗುಜರಾತ್​​ಗೆ ಟ್ಯಾಂಕರ್ ಹೋಗುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

fire in crops after due to chemical tanker palti

ಕೆಮಿಕಲ್​ ಸೋರಿಕೆಯಾಗಿ ಹೊಳೆಗೂ ಬೆಂಕಿ

ಘಟನಾ ಸ್ಥಳಕ್ಕೆ ಹಾನಗಲ್ ಚುನಾವಣಾ ಪ್ರಚಾರವನ್ನ ಬಿಟ್ಟು ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಪರಿಶೀಲಿಸಿದರು. ಕೆಮಿಕಲ್ ನೀರಿಗೆ ಸೇರ್ಪಡೆಯಾಗಿದ್ದು ಈ ಬಗ್ಗೆ ಪರಿಶೀಲಿಸಲು ಮಂಗಳೂರಿನಿಂದ ಪರಿಣಿತರ ತಂಡ ಬರುವುದಾಗಿ ಸಚಿವರು ಹೇಳಿದರು.

ಘಟನೆ ನಡೆದ ಸಂದರ್ಭ ಬೆಳಗ್ಗೆಯಾಗಿದ್ದರಿಂದ ಸುತ್ತಮುತ್ತಲೂ ವಾಹನ ಓಡಾಟ ಇಲ್ಲದಿರುವುದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಸುಮಾರು ಒಂದು ಎಕರೆಗೂ ಅಧಿಕ ಗದ್ದೆ ಹಾಗೂ ತೋಟ ಸಂಪೂರ್ಣ ಹಾನಿಯಾಗಿದೆ. ಪರಿಹಾರ ನೀಡುವ ಭರವಸೆಯನ್ನು ಸಚಿವರು ನೀಡಿದ್ದಾರೆ.

fire in crops after due to chemical tanker palti

ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

ಆರತಿ ಬೈಲು ಘಟ್ಟದಲ್ಲಿ ಇಂತಹ ಘಟನೆ ಪದೇಪದೆ ಸಂಭವಿಸುತ್ತಿವೆ. ರೈತರು ಹಾಗೂ ಸಾರ್ವಜನಿಕರು ಆತಂಕದಿಂದಲೇ ಕಾಲಕಳೆಯುವಂತಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *