ಯಲ್ಲಾಪುರ ಅಪಘಾತ,ಅಪಾರ ಹಾನಿ


ಯಲ್ಲಾಪುರ : ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹಳ್ಳಕ್ಕೆ ಹೊತ್ತಿಕೊಂಡ ಬೆಂಕಿ
!

ಕಾರವಾರ : ರಾಸಾಯನಿಕ ತುಂಬಿದ ಟ್ಯಾಂಕರ್ ಒಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಕ್ರಾಸ್ ಬಳಿ ಇಂದು ಮುಂಜಾನೆ ಮುಗುಚಿ ಬಿದ್ದಿದೆ.ಇದರಿಂದ ಸೋರಿದ ಕೆಮಿಕಲ್ ಹಳ್ಳದಲ್ಲಿ ಹರಿದು ಅಲ್ಲಿರುವ ರೈತರ ಗದ್ದೆ ಮತ್ತು ತೋಟಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ.

ಪೇಂಟ್ ಗೆ ಬಳಸುವ “ಪೆಂಜಾನ್”ಮಂಗಳೂರಿನಿಂದ ಮುಂಬಯಿಗೆ ಟ್ಯಾಂಕರ್ ಮೂಲಕ ಕಳುಹಿಸಲಾಗುತ್ತಿತ್ತು.ಕಡಿದಾದ ತಿರುವಿನಲ್ಲಿ ಟ್ಯಾಂಕರ್ ಪಲ್ಟಿಯಾಗಿ ಸೋರಿದ ರಾಸಾಯನಿಕವು ಪಕ್ಕದ ಹಳ್ಳ ಹಾಗೂ ಕಾಲುವೆಗಳಲ್ಲಿ ಹರಿದಿದೆ.ಇದಕ್ಕೆ ಬೆಂಕಿ ತಗುಲಿದ್ದು,ಹಳ್ಳ ಹೊತ್ತಿ ಉರಿದಿದೆ.ಬೆಂಕಿ ಟ್ಯಾಂಕರ್ ಗೂ ತಗುಲಿದೆ.ಹಳ್ಳದ ಭತ್ತದ ಗದ್ದೆ, ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಗಿಡಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ.ಟ್ಯಾಂಕರ್ ಚಾಲಕ ಮತ್ತು ಕ್ಲೀನರ್ ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವಾಗಿದ್ಧಾರೆ.

ಟ್ಯಾಂಕರ್ ಅಪಘಾತವಾಗುತ್ತಿದ್ದಂತೆ ಸೋರಿದ ರಾಸಾಯನಿಕಕ್ಕೂ ಬೆಂಕಿ ತಗುಲಿದ್ದು,ಸದ್ದು ಎರಡು ಕಿ.ಮೀ.ವರೆಗೂ ಕೇಳಿಸಿದೆ. ಮನೆಗಳಲ್ಲಿದ್ದ ಜನರು ಗಾಬರಿಯಿಂದ ಹೊರಗಡೆ ಓಡಿ ಬಂದಿದ್ದಾರೆ.ಆಗ ಹಳ್ಳ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ.

ಬಾಳೆಗದ್ದೆ ದೇಗುಲದ ಪಕ್ಕದಲ್ಲಿರುವ ನಿವಾಸಿ ಎಸ್.ಎಸ್.ಭಟ್ಟ ಅವರ ಐದು ಗುಂಟೆ ಭತ್ತದ ಗದ್ದೆ ಯಾವುದೇ ಅವಶೇಷ ಇಲ್ಲದಂತೆ ಸುಟ್ಟು ಹೋಗಿದೆ.ಬಾವಿಗೆ ಹಾಕಿದ ಪಂಪ್ ಸೆಟ್ ಸುಟ್ಟು ಕರಕಲಾಗಿದೆ.ತೋಟದಲ್ಲಿದ್ದ ಅಡಿಕೆ ಮರ,ತೆಂಗಿಮರ, ಮಾವಿನ ಮರ,ಹಲಸಿನ ಮರ ಸೇರಿದಂತೆ ಮುಂತಾದ ಮರಗಳಿಗೆ ಬೆಂಕಿ ತಗುಲಿದೆ. ಮನೆಯ ಒಂದು ಪಾರ್ಶ್ವಕ್ಕೂ ಬೆಂಕಿ ತಗುಲಿದೆ.

ಇದೇ ರೀತಿ ಮಂಜುನಾಥ ಗೌಡ, ನಾರಾಯಣ ಭಟ್ಟ,ವಿಶ್ವನಾಥ ಭಟ್ಟ ಮುಂತಾದವರ ತೋಟ,ಗದ್ದೆಗಳಿಗೂ ಹಾನಿಯಾಗಿದೆ.ಕಾಲುವೆಯಲ್ಲಿ ಸುಮಾರು 20 ಅಡಿ ಹಳ್ಳದಲ್ಲಿ 50 ಅಡಿ ಎತ್ತರಕ್ಕೂ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿಯುವ ದೃಶ್ಯ ಕಂಡುಬಂದಿದೆ.ಅಪಘಾತವಾದ ಕಾರಣಕ್ಕೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮೂರು ಗಂಟೆಗೂ ಅಧಿಕ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿತ್ತು.ಯಲ್ಲಾಪುರ, ಮುಂಡಗೋಡ,ಶಿರಸಿಯಿಂದ ಬಂದ ಅಗ್ನಿಶಾಮಕದಳ ಹರಸಾಹಸಪಟ್ಟು ಬೆಂಕಿ ನಂದಿಸಿದರು.ಅಪಘಾತ ಸ್ಥಳಕ್ಕೆ ಶಿರಸಿ ಡಿ.ವೈ.ಎಸ್.ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *