ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ ತಾಳ್ಮೆ ಇಲ್ಲ ಹಾಗಾಗಿ ಪಕ್ಷ ನನ್ನನ್ನೂ ಪರಿಗಣಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಯೂ ಎದುರಾಗಬಹುದು ಹೀಗೆಂದು ಕಡಕ್ ಆಗಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿದವರು ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜಿಬೈಲ್

ಸಂದರ್ಭ- ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳ ಮತ್ತು ಹಿಂದುಳಿದ ವರ್ಗಗಳ ವಿಭಾಗ ಆಯೋಜಿಸುತ್ತಿರುವ ಬಿ.ಜೆ.ಪಿ. ಹಿಂದುಳಿದವರ್ಗಗಳ ಸಮಾವೇಶದ ಕುರಿತು ಮಾಹಿತಿ ನೀಡಲು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ನಾಯ್ಕ ಮಾಧ್ಯಮಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪಕ್ಷದ ಸಂಘಟನೆಗೆ ಶಕ್ತಿ ಇಲ್ಲದ ಸಂದರ್ಭದಿಂದ ನಿರಂತರ ಮೂರು ದಶಕ ಸೇವೆ ಸಲ್ಲಿಸಿದ್ದೇನೆ. ಮೀಸಲಾತಿ,ತಾಂತ್ರಿಕ ಅಡಚಣೆಗಳಿಲ್ಲದಿದ್ದರೆ ಸಿದ್ಧಾಪುರದ ಪ.ಪಂ. ನಲ್ಲಿ ಪಕ್ಷಾತೀತವಾಗಿ ನಿರಂತರ ಅಧ್ಯಕ್ಷರಾಗುವ ಅವಕಾಶವಿತ್ತು. ಈಗಲೂ ನನ್ನ ವೈಯಕ್ತಿಕ ಅನುಕೂಲಕ್ಕಾಗಿ ನನಗೆ ಯಾವ ಹುದ್ದೆಯ ಅಗತ್ಯವೂ ಇಲ್ಲ. ಅಧಿಕಾರ ಇದ್ದರೆ ಜನಸೇವೆ ಮಾಡುತ್ತೇವೆ. ಜನರಿಗೆ ನೆರವಾಗುವ ಅವಕಾಶದ ಅಧಿಕಾರ ಕೇಳುವ ಹಕ್ಕು ನಮಗಿದೆ. ಹಾಗಾಗಿ ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ನನ್ನನ್ನು ಪರಿಗಣಿಸುವಂತೆ ಪಕ್ಷಕ್ಕೆ ವಿನಂತಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷ ನಾನಾ ವಿಭಾಗಗಳ ಸಂಘಟನೆ, ಸಮಾವೇಶಕ್ಕೆ ಸೂಚಿಸಿದೆ. ಈ ಉದ್ದೇಶದಿಂದ ಸಿದ್ಧಾಪುರದಲ್ಲಿ ಅಕ್ಟೋಬರ್ 30 ರಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ನಾಯಕರು, ಸಚಿವರು,ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಮಾಧ್ಯಮಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಬಹುತೇಕ ಪ್ರಮುಖರು ಹಾಜರಿದ್ದರು. ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕಾ ಅಧ್ಯಕ್ಷ ಬಲರಾಮ್ ನಾಮಧಾರಿ ವಿವರಣೆ ನೀಡಿದರು. ಪ.ಪಂ. ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯರಾದ ವಿನಯ್ ಹೊನ್ನೆಗುಂಡಿ, ವಿಜೇಂದ್ರ ಗೌಡರ್, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಈಶ್ವರ ನಾಯ್ಕ ಮನಮನೆ, ಎಸ್.ಕೆ. ಮೇಸ್ತ ಸೇರಿದಂತೆ ಹಲವರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ...

ಕಾಗೇರಿ ವ್ಯಂಗ್ಯಕ್ಕೆ ಕಾಂಗ್ರೆಸ್‌ ಉತ್ತರ……! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-04-

ಬಿ.ಜೆ.ಪಿ. ಮಟ್ಟಿಗೆ ಉತ್ತರ ಕನ್ನಡದ ವರಿಷ್ಠರಾದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಧ್ಯಮಗೋಷ್ಠಿ ನಡೆಸುವುದರಲ್ಲಿ ಮಾಧ್ಯಮಗಳಿಗೆ ಬೇಕಾದಷ್ಟೇ ಚುಟುಕಾಗಿ ಉತ್ತರಿಸುವುದರಲ್ಲಿ ನಿ಼ಷ್ಣಾತರು. ಆಗಾಗ ಮಾಧ್ಯಮಗೋಷ್ಠಿ...

ನಾಯಕರಿಗೆ ಇಂಬು, ಕಾರ್ಯಕರ್ತರಿಗೆ ಚೊಂಬು!!! ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! -part-03-

ಬಿ.ಜೆ.ಪಿ. ಸೋಲಿಸಲು ಸಾಧ್ಯವಿಲ್ಲ, ಕಾಂಗ್ರೆಸ್‌ ಗೆ ಅಧಿಕಾರವಿಲ್ಲದೆ ಅಲ್ಲಿಯ ಕಾರ್ಯಕರ್ತರು ಅನಿವಾರ್ಯವಾಗಿ ಬಿ.ಜೆ.ಪಿ. ಸೇರುತ್ತಾರೆ. ಹೀಗಾದರೆ ನೀವೆಲ್ಲಾ ಕಾಂಗ್ರೆಸ್‌ ನಲ್ಲಿದ್ದು ಏನು ಪ್ರಯೋಜನ? ಎಂದು...

ಭೀಮ ಗಧೆಗೆ ಮೂರು ಚೂರಾದ ಬಿ.ಜೆ.ಪಿ.! part-02- ವೀಶ್ವೇಶ್ವರ ಹೆಗಡೆಗೆ ಮೃಧುವಾಗೇ ತಿವಿಯುತ್ತಿರುವ ಗ್ಯಾರಂಟಿಯಣ್ಣ!

ಮೇಲ್ವರ್ಗದ ಓಲೈಕೆ, ವೈದಿಕ ತುಷ್ಟೀಕರಣಗಳ ಬಿ.ಜೆ.ಪಿ. ಅನಿವಾರ್ಯವಾದಾಗ, ಮೇಲ್ನೋಟಕ್ಕೆ ಪ್ರದರ್ಶನಕ್ಕೆ ಅಹಿಂದ್‌ ಗಳನ್ನು ಬಳಸುವುದನ್ನು ಬಿಟ್ಟರೆ ಅದು ತನ್ನ ಅಜೆಂಡಾ ಉಳ್ಳವರ ಪರ ನೀತಿಯನ್ನು...

don,t do it- ಮಗುವಿನೊಂದಿಗೆ ಪೋಷಕರ ಅಪಾಯಕಾರಿ ಸೆಲ್ಫಿ; ಸ್ಮಾರ್ಟ್ ಸಿಸಿಟಿವಿಯಿಂದ ತಪ್ಪಿದ ಸಂಭಾವ್ಯ ದುರಂತ!

ಗೋಕರ್ಣ: ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮ ಗೋಕರ್ಣದಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ. ಪೊಲೀಸರು ತಮ್ಮನ್ನು ಕ್ಯಾಮರಾ ಮೂಲಕ ನೋಡುತ್ತಿದ್ದಾರೆ ಎಂದು ದಂಪತಿಗೆ ತಿಳಿದಿರಲಿಲ್ಲ. ಮಗುವಿನೊಂದಿಗೆ ಪೋಷಕರ...

Latest Posts

ಅಕ್ಷತಾ ಸಾವು… ಆಶಯ ಮಾತಿನ ನೋವು……

ಸಿದ್ದಾಪುರದಲ್ಲಿ ಶೋಕ…. rcb ಕಲ್ತುಳಿತದ ಶವ ಸಿದ್ಧಾಪುರಕ್ಕೆ……. ಅಕ್ಷತಾ ಅಂಬಳ್ಳಿ ಅಂತ್ಯ ಕ್ರೀಯೆಗೆ ತಯ್ಯಾರಿ breaking…… rcb ಕಲ್ತುಳಿತದ ಪ್ರತ್ಯಕ್ಷ ಅನುಭವ…… ಆಶಯ ಅಂಬಳ್ಳಿ ಮಾತು….. ಬೆoಗಳೂರಿನ ಚಿನ್ನಸ್ವಾಮಿ ಕ್ರೀಡಾoಗಣ ದಲ್ಲಿ ಕಲ್ತುಳಿತಕ್ಕೆ ಒಳಗಾಗಿ ಜೀವತೆತ್ತ ಅಕ್ಷತಾ ಪೈ ಶವ ಸಿದ್ಧಾಪುರಕ್ಕೆ ಆಗಮಿಸಿದೆ. ಮೃತ ಅಕ್ಷತಾ ಪತಿ ಆಶಯ ನಿನ್ನೆ ಅಲ್ಲಿದ್ದರು. ನಿನ್ನೆಯ ಘಟನೆಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *