ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ ತಾಳ್ಮೆ ಇಲ್ಲ ಹಾಗಾಗಿ ಪಕ್ಷ ನನ್ನನ್ನೂ ಪರಿಗಣಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಯೂ ಎದುರಾಗಬಹುದು ಹೀಗೆಂದು ಕಡಕ್ ಆಗಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿದವರು ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ ಹಣಜಿಬೈಲ್

ಸಂದರ್ಭ- ಸಿದ್ಧಾಪುರದಲ್ಲಿ ತಾಲೂಕಾ ಬಿ.ಜೆ.ಪಿ. ಮಂಡಳ ಮತ್ತು ಹಿಂದುಳಿದ ವರ್ಗಗಳ ವಿಭಾಗ ಆಯೋಜಿಸುತ್ತಿರುವ ಬಿ.ಜೆ.ಪಿ. ಹಿಂದುಳಿದವರ್ಗಗಳ ಸಮಾವೇಶದ ಕುರಿತು ಮಾಹಿತಿ ನೀಡಲು ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆ.ಜಿ.ನಾಯ್ಕ ಮಾಧ್ಯಮಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪಕ್ಷದ ಸಂಘಟನೆಗೆ ಶಕ್ತಿ ಇಲ್ಲದ ಸಂದರ್ಭದಿಂದ ನಿರಂತರ ಮೂರು ದಶಕ ಸೇವೆ ಸಲ್ಲಿಸಿದ್ದೇನೆ. ಮೀಸಲಾತಿ,ತಾಂತ್ರಿಕ ಅಡಚಣೆಗಳಿಲ್ಲದಿದ್ದರೆ ಸಿದ್ಧಾಪುರದ ಪ.ಪಂ. ನಲ್ಲಿ ಪಕ್ಷಾತೀತವಾಗಿ ನಿರಂತರ ಅಧ್ಯಕ್ಷರಾಗುವ ಅವಕಾಶವಿತ್ತು. ಈಗಲೂ ನನ್ನ ವೈಯಕ್ತಿಕ ಅನುಕೂಲಕ್ಕಾಗಿ ನನಗೆ ಯಾವ ಹುದ್ದೆಯ ಅಗತ್ಯವೂ ಇಲ್ಲ. ಅಧಿಕಾರ ಇದ್ದರೆ ಜನಸೇವೆ ಮಾಡುತ್ತೇವೆ. ಜನರಿಗೆ ನೆರವಾಗುವ ಅವಕಾಶದ ಅಧಿಕಾರ ಕೇಳುವ ಹಕ್ಕು ನಮಗಿದೆ. ಹಾಗಾಗಿ ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ನನ್ನನ್ನು ಪರಿಗಣಿಸುವಂತೆ ಪಕ್ಷಕ್ಕೆ ವಿನಂತಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷ ನಾನಾ ವಿಭಾಗಗಳ ಸಂಘಟನೆ, ಸಮಾವೇಶಕ್ಕೆ ಸೂಚಿಸಿದೆ. ಈ ಉದ್ದೇಶದಿಂದ ಸಿದ್ಧಾಪುರದಲ್ಲಿ ಅಕ್ಟೋಬರ್ 30 ರಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಲಿದೆ. ಅದರಲ್ಲಿ ರಾಜ್ಯಮಟ್ಟದ ಹಿಂದುಳಿದ ವರ್ಗಗಳ ನಾಯಕರು, ಸಚಿವರು,ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಮಾಧ್ಯಮಗೋಷ್ಠಿಯಲ್ಲಿ ಹಿಂದುಳಿದ ವರ್ಗಗಳ ಬಹುತೇಕ ಪ್ರಮುಖರು ಹಾಜರಿದ್ದರು. ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕಾ ಅಧ್ಯಕ್ಷ ಬಲರಾಮ್ ನಾಮಧಾರಿ ವಿವರಣೆ ನೀಡಿದರು. ಪ.ಪಂ. ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಸದಸ್ಯರಾದ ವಿನಯ್ ಹೊನ್ನೆಗುಂಡಿ, ವಿಜೇಂದ್ರ ಗೌಡರ್, ಜಿ.ಪಂ. ಸದಸ್ಯ ನಾಗರಾಜ್ ನಾಯ್ಕ, ಜಿ.ಪಂ.ಮಾಜಿ ಸದಸ್ಯ ಈಶ್ವರ ನಾಯ್ಕ ಮನಮನೆ, ಎಸ್.ಕೆ. ಮೇಸ್ತ ಸೇರಿದಂತೆ ಹಲವರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *