ಕ್ಷುಲ್ಲಕ ಕಾರಣಕ್ಕೆ ತಾಯಿ-ತಂಗಿಯ ಹತ್ಯೆ ಮಾಡಿದ ಮಂಜುನಾಥ ಪೊಲೀಸ್ ವಶಕ್ಕೆ

ಹಣ,ದುರಾಸೆ ಚಟಗಳಿಗೆ ದಾಸನಾದ ವ್ಯಕ್ತಿ ಮನುಷ್ಯತ್ವ ಕಳೆದುಕೊಳ್ಳಬಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಸಿದ್ಧಾಪುರದ ಕುಡೇಗೋಡು ಹಸ್ಲರ್ ಸಮೂದಾಯದ ಮನೆಗಳಿರುವ ಚಿಕ್ಕ ಗ್ರಾಮ. ಈ ಗ್ರಾಮಕ್ಕೆ ಸಾರಾಯಿ, ಬೇಟೆ, ಕೂಲಿ ನಿತ್ಯ ಅವಶ್ಯಕತೆಗಳು. ಎಲ್ಲರ ಮನೆಯಂತೇ ಸಮೀಪದ ಜಮೀನ್ಧಾರರ ಮನೆಯ ಕೂಲಿ,ನರೇಗಾ ಕೆಲಸ ಅವಲಂಬಿಸಿದ್ದ ನಾರಾಯಣ ಹಸ್ಲರ್ ಕುಟುಂಬದಲ್ಲಿ ಪಾರ್ವತಿ, ನಾರಾಯಣ ದಂಪತಿಗಳಿಗೆ ಹುಟ್ಟಿದ ಮೊದಲ ಮಗ ಮಂಜುನಾಥ ಅಲಿಯಾಸ್ ಜಯವಂತ, ಈತನಿಗೆ ಇಬ್ಬರು ತಂಗಿಯಂದಿರು. ಮೊದಲ ಸಹೋದರಿ ಪದವಿ ಓದುತ್ತಿರುವ ಹೆಣ್ಣುಮಗಳಾದರೆ ಇನ್ನಬ್ಬಳು ಒಂಬತ್ತನೇ ತರಗತಿಯವಿದ್ಯಾರ್ಥಿನಿ.

ಅಣ್ಣ ಜಯವಂತ ಊರಿನಲ್ಲಿ ಮಂಗ ಗಳನ್ನು ಓಡಿಸುತ್ತಾ ತನ್ನ ಕರ್ಚಿಗೂ ತಾಯಿಯ ಬಳಿ ಕೈ ಒಡ್ಡುತಿದ್ದ. 24 ರ ಹರೆಯದ ಮಗನ ಮಂಗಾಟಗಳಿಗೆ ಸೊಪ್ಪುಹಾಕದ 42 ರ ತಾಯಿ ಪಾರ್ವತಿ ಕಲಿಕೆಯ ಅಗತ್ಯಕ್ಕಾಗಿ ಹಿರಿಯ ಮಗಳು ರಮ್ಯಾಳಿಗೆ ಮೊಬೈಲ್ ಕೊಡಿಸಲು ಸ್ವಸಹಾಯ ಸಂಘದಲ್ಲಿ ಸಾಲ ಮಾಡಿದ್ದಾಳೆ.

ತನಗೆ ಹಣ ನೀಡದ ತಾಯಿ ತಂಗಿ ರಮ್ಯಾಳಿಗೆ ಮೊಬೈಲ್ ಕೊಡಿಸಲು ಸಾಲ ಮಾಡಿದ್ದಾಳೆ ಎಂದು ಜಗಳ ತೆಗೆದಿದ್ದಾನೆ. ಊರಿನ ಮಂಗ ಕಾಯಲು ಕೊಟ್ಟಿದ್ದ ನಾಡ ಬಂದೂಕೊಂದು ಈ ಮಂಜುನಾಥನ ಕೈಯಲ್ಲಿತ್ತು.

ಅದು ಅಕ್ಟೋಬರ್ 13 ರ ಬುಧವಾರದ ಮಧ್ಯಾಹ್ನ ಮನೆಯಲ್ಲಿ ತಾಯಿಯೊಂದಿಗೆ ಸಹೋದರಿಯರು ಹಬ್ಬದ ತಯಾರಿಯಲ್ಲಿದ್ದಾರೆ. ವಾರದ ಬಿಡುವಿನ ಬುಧವಾರ ಮಹಾನವಮಿ ಹಬ್ಬದ ಕರಿ ಕೆಲಸಬೇರೆ. ಗಂಡಸರು ಮನೆಯಲ್ಲಿಲ್ಲ ಎಂದು ಅಡುಗೆಯನ್ನೂ ಮಾಡದೆ ಕೆಲಸದಲ್ಲಿ ಮಗ್ನರಾಗಿದ್ದಾರೆ. ಮಂಗಗಳನ್ನು ಓಡಿಸುತ್ತಾ ಚಿಕ್ಕ ಪುಟ್ಟ ಶಿಕಾರಿ ಮಾಡುತಿದ್ದ ಮಗರಾಯ ಮಧ್ಯಾಹ್ನ ಮನೆಗೆ ಬಂದಾಗ ಊಟ ಸಿದ್ಧವಾಗಿರಲಿಲ್ಲ ಸಿಟ್ಟು-ಅಸಮಾ ಧಾನದ ಕೈಗೆ ಕೋವಿ ಕೊಟ್ಟು ಟ್ರಿಗರ್ ನೂಕಿದ್ದಾನೆ. ಬಂದೂಕಿಗೇನು ಗೊತ್ತು ಈ ಹುಡುಗ ಗುರಿ ಮಾಡಿದ್ದು ತನ್ನ ತಾಯಿ-ಮತ್ತು ತಂಗಿಯೆಂದು ಒಂದೇ ಏಟಿಗೆ ಎರಡು ಜನರ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಹೀಗೆ ಕುಡುಕ, ಬೇಜವಾಬ್ಧಾರಿ ಮಗನ ಎಡವಟ್ಟಿಗೆ ಹೆಣಗಳಾದ ತಾಯಿ-ಮಗಳು ಮಧ್ಯಾಹ್ನದ ಮೂರರ ಸುಮಾರಿಗೆ ಹತ್ಯೆಯಾಗಿದ್ದಾರೆ. ಈ ವಿಷಯ ಹೊರಗೆ ಬರುವುದರೊಳಗಾಗಿ ಊರಿನಲ್ಲೇ ಮಾತುಕತೆಯಾಗಿ ಅಂತ್ಯಸಂಸ್ಕಾರ ಮಾಡುವ ತೀರ್ಮಾನವಾದ ಸಮಯಕ್ಕೆ ಸಿದ್ಧಾಪುರ ಪೊಲೀಸರ ಆಗಮನವಾಗಿದೆ.

ಪಕ್ಕಾ ಮಾಹಿತಿ ತಿಳಿದು ಪೊಲೀಸರು ಕುಡೇಗೋಡಿಗೆ ಬರುವ ಸಮಯಕ್ಕೆ ಕತ್ತಲಾಗಿದೆ. ತಾಯಿ ಅಕ್ಕನನ್ನು ಕಳೆದುಕೊಂಡ 15 ವರ್ಷಗಳ ಸಹೋದರಿ, ಕೊಲೆಗಾರನ ತಂದೆ ನಾರಾಯಣ ಹಸ್ಲರ್ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ದುರಂತದ ಬಗ್ಗೆ ಪೊಲೀಸ್ ದೂರು ದಾಖಲಾಗಿ ಹೆಣಗಳನ್ನು ಪೊಸ್ಟ್ ಮಾರ್ಟಮ್, ಪ್ಲೊರೆನ್ಸಿಕ ವದಿಗಾಗಿ ದೂರದ ಜಿಲ್ಲಾ ಕೇಂದ್ರ ಕಾರವಾರಕ್ಕೆ ರವಾನಿಸಲಾಗಿದೆ. ತುಂಬುಕುಟುಂಬದ ತಾಯಿ-ಮಗಳು ಹತ್ಯೆಯಾಗಿ ಹೆಣವಾದರೆ ಮಗ ಜೈಲುಪಾಲಾಗಿದ್ದಾನೆ. ಈಗ ತಂದೆಯೊಂದಿಗೆ ಅಪ್ರಾಪ್ತ ಬಾಲಕಿ ದಿಕ್ಕುತೋಚದೆ ಕಂಗಾಲಾಗಿದ್ದಾಳೆ.

ಎಸ್ಪಿ ಭೇಟಿ- ದೊಡ್ಮನೆ ಗ್ರಾ.ಪಂ. ಕುಡೇಗೋಡಿಗೆ ಇಂದು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಕೊಲೆಗಾರನಿಗೆ ನಿಶ್ಚಿತ ಉದ್ದೇಶಗಳೇನೂ ಇರಲಿಲ್ಲ. ತಾಯಿ, ತಂಗಿಯನ್ನು ಹತ್ಯೆ ಮಾಡಿದ ಆರೋಪಿ ಮಂಜುನಾಥ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಸೂಕ್ತ ವಿಚಾರಣೆ,ತನಿಖೆ ನಂತರ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿ. ಅಕ್ರಮ, ಅವ್ಯವಹಾರಗಳ ತಡೆಯಲು ಸಾರ್ವಜನಿಕರ ಸಹಕಾರ ಬೇಕು.ಸ್ಥಳಿಯರ ನೆರವು, ಸಹಕಾರದಿಂದ ಇಂಥ ಅಪರಾಧಗಳನ್ನೂ ತಡೆಯಬಹುದು ಎಂದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *