ದೇಶಸೇವೆಯೇ ಈಶ ಸೇವೆ….ಕಾಶಿನಾಥ ಉವಾಚ

ನಾನು ಇನ್ನು ಐಪಿಎಲ್ ಆಡುವುದನ್ನು ಬಿಟ್ಟಿಲ್ಲ: ಧೋನಿ

ಚೆನ್ನೈ ಸೂಪರ್ ಕಿಂಗ್ಸ್  ಪರ ನಾಲ್ಕನೇ  ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ  ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ.

ಕೀರ್ತಿ,ಸಂಪತ್ತು ಯಾರ ತಲೆಯನ್ನೂ ತಿರುಗಿಸಬಾರದು.ನಾನು ದೇಶಸೇವೆಯ ಕನಸಿನಿಂದ ಸೇನೆಗೆ ಸೇರಿದವನು. ದೇಶಪ್ರೇಮ,ಹುಡುಕಾಟಗಳಿಂದ ನನ್ನ ಗುರಿಗೆ ಸ್ಪಷ್ಟತೆ ಸಿಕ್ಕಿತು. ದೇಶಕ್ಕಾಗಿ ದುಡಿದರೆ ನಮಗೂ ಲಾಭ-ಅನುಕೂ ಲ ಆಗುತ್ತದೆ ಎನ್ನುವುದಕ್ಕೆ ನಾನೇ ಉದಾಹರಣೆ – ಕಾಶಿನಾಥ ನಾಯ್ಕ

ಕೇರಳ ದೇಶದ ಮಾದರಿ ರಾಜ್ಯ ಕೇರಳದ ವೈಶಿಷ್ಟ್ಯ, ಸಾಧನೆ, ಪ್ರಸಿದ್ಧಿಯ ಹಿಂದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಶ್ರಮ-ಸಾಮಾಜಿಕ ಹೋರಾಟದ ಹಿನ್ನೆಲೆಗಳಿವೆ.ಸ್ವಾಭಿಮಾನ, ಆತ್ಮಾಭಿಮಾನ ಎಂದರೆ ಏನೆಂದು ತಿಳಿಯಲು ಡಾ. ಅಂಬೇಡ್ಕರ್ ಮತ್ತು ನಾರಾಯಣ ಗುರು, ಲೋಹಿಯಾರಂಥವರನ್ನು ಓದಬೇಕು. – ಸಮಾಜಮುಖಿ ಕನ್ನೇಶ್ ಕೋಲಶಿರ್ಸಿ

ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸೊಗಸು ಜಾತಿ-ಧರ್ಮ ಎಂದು ಕಚ್ಚಾಡುವುದರಲ್ಲಿ ಇಲ್ಲ… ವಿ.ಎನ್. ನಾಯ್ಕ ಬೇಡ್ಕಣಿ, ರತ್ನಾಕರ ನಾಯ್ಕ ನರಮುಂಡಿಗೆ

MS_Dhoni1

ದುಬೈ: ಚೆನ್ನೈ ಸೂಪರ್ ಕಿಂಗ್ಸ್  ಪರ ನಾಲ್ಕನೇ  ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಮಹೇಂದ್ರ ಸಿಂಗ್ ಧೋನಿ  ಇನ್ನೂ ಐಪಿಎಲ್ ಆಡುವುದನ್ನು ಬಿಟ್ಟಿಲ್ಲ ಎಂದು ದೃಢಪಡಿಸಿದ್ದಾರೆ.

ಶುಕ್ರವಾರ ಇಲ್ಲಿ ನಡೆದ ಫೈನಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ನಂತರ ಸಿಎಸ್‌ಕೆಗಾಗಿ ಐಪಿಎಲ್ ಆಡುವುದನ್ನು ಮುಂದುವರಿಸಬೇಕೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಧೋನಿ, “ಇದು ಬಿಸಿಸಿಐ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.

ಮುಂದಿನ ಋತುವಿನಿಂದ ಎರಡು ಹೊಸ ತಂಡಗಳು ಬರಲಿದ್ದು, ಸಿಎಸ್ ಕೆ ಗೆ ಯಾವುದು ಒಳ್ಳೆಯದು ಎಂದು ನಾವು ನಿರ್ಧರಿಸಬೇಕು. ತಂಡಕ್ಕೆ ತೊಂದರೆ ಆಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಬಲವಾದ ಕೋರ್ ಅನ್ನು ನಿರ್ಮಿಸುವುದು ಮುಖ್ಯ ವಿಷಯವಾಗಿದೆ. ಮುಂದಿನ 10 ವರ್ಷಗಳಲ್ಲಿ ಯಾವ ಕೊಡುಗೆ ನೀಡಬಹುದು ಎಂಬುದನ್ನು ನೋಡಲು ಕೋರ್ ಗುಂಪಿನಲ್ಲಿರುವ ನಾವು ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ ಎಂದರು.

ಸಿಎಸ್ ಕೆ ನಾಯಕ ಪಂದ್ಯದ ನಂತರ ತನ್ನ ಅಭಿಮಾನಿಗಳಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. “ನಾವು ಆಡುವ ಎಲ್ಲೆಲ್ಲಿ ಹೋಗುತ್ತೇವೊ, ಅದು ದಕ್ಷಿಣ ಆಫ್ರಿಕಾ, ಮೆಲ್ಬರ್ನ್ ಅಥವಾ ದುಬೈ ಆಗಿರಲಿ, ನಮ್ಮನ್ನು ಬೆಂಬಲಿಸಲು ಅಪಾರ ಸಂಖ್ಯೆಯ ಅಭಿಮಾನಿಗಳಿದ್ದರು. ಪ್ರತಿಯೊಬ್ಬ ಆಟಗಾರ ಮತ್ತು ತಂಡವು ಇದಕ್ಕಾಗಿ ಹಾತೊರೆಯುತ್ತದೆ. ಇಂದು ಇಲ್ಲಿ ಆಡುವಾಗ, ನಾವು ದುಬೈನಲ್ಲಿ ಆಡುತ್ತಿರುವಂತೆ ಅನಿಸಲಿಲ್ಲ, ನಾವು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಆಡುತ್ತಿರುವಂತೆ ಭಾಸವಾಯಿತು. ನಮ್ಮ ಅಭಿಮಾನಿಗಳಿಗಾಗಿ ಚೆನ್ನೈಗೆ ಮರಳಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

ಸಿಎಸ್ ಕೆ ಬಗ್ಗೆ ಮಾತನಾಡುವ ಮೊದಲು ಕೆಕೆಆರ್ ಬಗ್ಗೆ ಮಾತನಾಡುವುದು ಅಗತ್ಯ ಎಂದು ನಾನು ಭಾವಿಸುತ್ತೇನೆ. ಯಾವುದೇ ತಂಡ ಐಪಿಎಲ್ ಗೆಲ್ಲಲು ಅರ್ಹವಾಗಿದ್ದರೆ ಅದು ಕೆಕೆಆರ್ ಎಂದು ಹೇಳಿದ್ದಾರೆ.  (kpc)

ಸಾಧನೆ ಸಾಧಕನ ಸೊತ್ತೇ ಹೊರತು ಸೋಮಾರಿಗಳದ್ದಲ್ಲ. -ಕಾಶಿನಾಥ ನಾಯ್ಕ.
ಸಿದ್ದಾಪುರ ಅ: ಇಂದಿನ ಆಧುನಿಕ ಜಗತ್ತಿನಲ್ಲಿ ಪ್ರತಿಭೆಗಳಿಗೆ ಕೊನೆಯಿಲ್ಲ. ಪ್ರತಿಯೊಂದು ಕ್ಷೇತ್ರದಲ್ಲೂ ಅವಕಾಶಗಳು ಮನೆಬಾಗಿಲು ತಟ್ಟುತ್ತಿವೆ. ಸಾಧನೆಯ ಛಲ,ನಿರಂತರ ಪರಿಶ್ರಮದಿಂದ ಮಾತ್ರ ಗೆಲುವಿನ ಮೆಟ್ಟಿಲೇರಲು ಸಾಧ್ಯ . ಸಾಧನೆ ಸಾಧಕನ ಸೊತ್ತೇ ಹೊರತು ಸೋಮಾರಿಗಳದ್ದಲ್ಲ ಎಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಜಾವಲಿನ್ ಪದಕ ವಿಜೇತ, ಸೈನಿಕ ಶಿರಸಿಯ ಕಾಶಿನಾಥ ನಾಯ್ಕ ಹೇಳಿದರು.
ಅವರು ವಿಜಯದಶಮಿಯಂದು ಪಟ್ಟಣದ ಲಯನ್ಸ್ ಸಭಾ ಭವನದಲ್ಲಿ ಬಿ.ಎಸ್.ಎನ್.ಡಿ. ಪಿ. ತಾಲೂಕು ಘಟಕ ಹಾಗೂ ಶ್ರೀರಾಮ ಕ್ಷೇತ್ರ ಸೇವಾಸಮಿತಿ ಸಿದ್ದಾಪುರ ಗಳು ಏರ್ಪಡಿಸಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕು- ಸ್ಫೂರ್ತಿ ಗೋಪಾಲ ನಾಯ್ಕ ಹಾಗೂ ಇಂಜಿನಿಯರಿಂಗ್ ಪದವಿಯಲ್ಲಿ ಚಿನ್ನದ ಪದಕ ಸ್ವೀಕರಿಸಿದ ಕು- ಪೃಥ್ವಿ ಮಹಾಬಲೇಶ್ವರ ನಾಯ್ಕ ಅವರಗುಪ್ಪ ರನ್ನೂ ಸಹ ಸನ್ಮಾನಿಸಲಾಯಿತು.
ಪತ್ರಕರ್ತ ಕನ್ನೇಶ ಕೋಲ್ ಶಿರ್ಸಿ. ಬಿಎಸ್ಎನ್ ಡಿ.ಪಿಯ ಕಾರ್ಯದಕ್ಷತೆ ಹಾಗೂ ನಾರಾಯಣ ಗುರುಗಳ ಅಂದಿನ ಸಂಘಟನೆ, ಸಾಮಾಜಿಕ ಚಿಂತನೆ ಶೈಕ್ಷಣಿಕ ಕಾಳಜಿಯಿಂದಾಗಿ ಕೇರಳರಾಜ್ಯ, ದಕ್ಷಿಣ ಕನ್ನಡ ಭಾಗಗಳು ಮುಂಚೂಣಿಯಲ್ಲಿರಲು ಕಾರಣವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿ ಸಾಹಿತಿ, ಶಿಕ್ಷಕ ಗೋಪಾಲ ನಾಯ್ಕ ಭಾಶಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಯೊಂದಿಗೆ ನಿರಂತರ ಸಾಧನೆಯಲ್ಲಿ ತೊಡಗಿ ಯಶಸ್ವಿಯಾಗಬೇಕೆಂದು ಕರೆನೀಡಿದರು. ಬಿಎಸ್ ಎನ್ ಡಿ.ಪಿ ತಾಲೂಕು ಅಧ್ಯಕ್ಷ ವಿನಾಯಕ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಸಭೆಯ ಅಧ್ಯಕ್ಷತೆಯನ್ನು ಸಾಮಾಜಿಕ ಧುರೀಣ, ಮಾಜಿ ಜಿ.ಪ . ಸದಸ್ಯರಾದ ವಿ ಎನ್ . ನಾಯ್ಕ ಬೇಡ್ಕಣಿ ವಹಿಸಿ ಸಾಧಕರ ಸಾಧನೆಯ ಗುಣಗಾನ ಮಾಡಿದರು. ಕು- ಪೃಥ್ವಿ ನಾಯ್ಕ, ಹಾಗೂ ಕು- ಸ್ಪೂರ್ತಿ ನಾಯ್ಕ ಸನ್ಮಾನ ಸ್ವೀಕರಿಸಿ ಕೃತಜ್ಞತೆ ಹೇಳಿದರು. ಎರಡೂ ಸಂಘಟನೆಗಳ ಪದಾಧಿಕಾರಿಗಳು, ಸಮಾಜಬಾಂಧವರು ಉಪಸ್ಥಿತರಿದ್ದರು. ಉಪನ್ಯಾಸಕ ರತ್ನಾಕರ ನಾಯ್ಕ ವಂದನಾರ್ಪಣೆ ಮಾಡಿದರು. ವಿನಾಯಕ ನಾಯ್ಕ ಕಾನಗೋಡ ಕಾರ್ಯಕ್ರಮ ನಿರೂಪಿಸಿದರು.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *