ಸಿದ್ಧಾಪುರದಲ್ಲಿ ಭದ್ರಾವತಿಯ ದನಗಳ್ಳರ ಬಂಧನ, ಮುರುಡೇಶ್ವರದಲ್ಲಿ ಶಿವಮೊಗ್ಗದ ಮೂವರ ರಕ್ಷಣೆ

ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ

13 ಜನರ ತಂಡದಲ್ಲಿದ್ದ ನಾಲ್ವರು ಯುವಕರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ನಂತರ ಓರ್ವ ಈಜಿಕೊಂಡು ದಡಕ್ಕೆ ಬಂದಿದ್ದು, ಮತ್ತೆ ಮೂವರನ್ನು ಅಲ್ಲಿನ ಬೀಚ್ ಮೇಲ್ವಿಚಾರಕ ಹಾಗೂ ಲೈಫ್ ಗಾರ್ಡ್ ಅಡ್ವೆಂಚರ್ಸ್ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ..

ಭಟ್ಕಳ : ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ

ಲಾಕ್​​ಡೌನ್​​ ತೆರವು ಬಳಿಕ ಮುರುಡೇಶ್ವರಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಹೀಗೆ ಪ್ರವಾಸಕ್ಕೆಂದು ಶಿವಮೊಗ್ಗದಿಂದ ಬಂದ 13 ಜನರ ತಂಡ ಧರ್ಮಸ್ಥಳ, ಕೊಲ್ಲೂರು ಹಾಗೂ ವಿವಿಧ ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶುಕ್ರವಾರ ಮುರುಡೇಶ್ವರಕ್ಕೆ ಬಂದಿದ್ದು, ಶಿವನ ದರ್ಶನ ಪಡೆದ ಬಳಿಕ ಮೋಜು-ಮಸ್ತಿಗೆ ಸಮುದ್ರಕ್ಕಿಳಿದಿದ್ದಾರೆ.

three tourist rescued

ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ..

ಈ ವೇಳೆ 13 ಜನರ ತಂಡದಲ್ಲಿದ್ದ ನಾಲ್ವರು ಯುವಕರು ಸಮುದ್ರದ ಅಲೆಗೆ ಕೊಚ್ಚಿ ಹೋಗಿದ್ದಾರೆ. ನಂತರ ಓರ್ವ ಈಜಿಕೊಂಡು ದಡಕ್ಕೆ ಬಂದಿದ್ದು, ಮತ್ತೆ ಮೂವರನ್ನು ಅಲ್ಲಿನ ಬೀಚ್ ಮೇಲ್ವಿಚಾರಕ ಹಾಗೂ ಲೈಫ್ ಗಾರ್ಡ್ ಅಡ್ವೆಂಚರ್ಸ್ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ.

ಲೈಫ್​​ ಗಾರ್ಡ್​ಗಳ ಸಮಯ ಪ್ರಜ್ಞೆಯಿಂದ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಕಾರ್ಯಕ್ಕೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಬೀಚ್ ಮೇಲ್ವಿಚಾರಕ ದತ್ತಾತ್ರೇಯ ಶೆಟ್ಟಿ, ಲೈಫ್​​ ಗಾರ್ಡ್​ಗಳಾದ ಕೇಶವ, ಹನುಮಂತ, ವಿಘ್ನೇಶ್ವರ್, ರಾಮಚಂದ್ರ ಹಾಗೂ ಜಯರಾಮ ಭಾಗಿಯಾಗಿದ್ದರು. (kpc)

ಸಿದ್ದಾಪುರ: ತಾಲೂಕಿನಲ್ಲಿ ಜಾನುವಾರಗಳನ್ನು ಕಟ್ಟಿ ಹಾಕದೆ ಬಿಡಾಡಿಗಳಾಗಿ ಓಡಾಡಲು ಬಿಡುತ್ತಿರುವುದುರಿಂದ ಅಕ್ರಮವಾಗಿ ಕದ್ದು ಸಾಗಾಣಿಕೆ ಮಾಡುವವರ ಸಂಖ್ಯೆಯೂ ಹೆಚ್ಚಾಗಿದೆ. ಜಾನುವಾರುಗಳ ಮಾಲೀಕರು ಜಾನುವಾರುಗಳನ್ನು ಬಿಡದೆ ಕಟ್ಟಿಹಾಕಬೇಕು. ಜಾನುವಾರುಗಳಿಗೆ ಇನ್ಸೂರೆನ್ಸ್ ಮಾಡಿಸಬೇಕು. ಸಾಕಲು ಸಾಧ್ಯವಾಗದೆ ಇದ್ದವರು ಜಾನುವಾರುಗಳನ್ನು ಗೋಶಾಲೆಗೆ ನೀಡಬೇಕು. ದನಗಳನ್ನು
ಬಿಡಾಡಿಯಾಗಿ ಓಡಾಡಲು ಬಿಡುವುದು ತಪ್ಪು. ಅದ್ದರಿಂದ ಜಾನುವಾರು ಕಳ್ಳತನವಾಗಿದೆ ಎಂದು ದೂರು ನೀಡುವವರ ವಿರುದ್ದವೂ ಪ್ರಕರಣ ದಾಕಲಿಸಲಾಗುವುದು ಎಂದು ಸಿಪಿಐ ಕುಮಾರ ಕೆ ಹೇಳಿದರು.

  1. ದನವನ್ನು ವಾಹನದಲ್ಲಿ ಸಾಗಿಸುತ್ತಿದ್ದ ಇಬ್ಬರನ್ನು ಸಾರ್ವಜನಿಕರ
    ಸಹಾಯದಿಂದ ಪೊಲೀಸ್‌ರು ತಾಲೂಕಿನ ಬಿಳಗಿಯಲ್ಲಿ ಬುಧವಾರ ಬಂಧಿಸಿದ್ದಾರೆ.
    ದನ ಸಾಗಾಟಕ್ಕೆ ಉಪಯೋಗಿಸಿದ್ದ ಟಾಟಾ ಜೀಪ್ ಹಾಗೂ ಆಕಳು ಮತ್ತು
    ಒಂದು ಗಂಡು ಕರುವನ್ನು ವಶಕ್ಕೆ ಪಡೆಯಲಾಗಿದೆ.
    ಶಿವಾನಂದ ಗಂಗಾಧರ ಗೌಡ ಬಿಳಗಿ (45) ಹಾಗೂ ಗೋವಿಂದ ಮಾಬ್ಲಾ ಗೌಡ ಕಿಲವಳ್ಳಿ(62) ಆರೋಪಿಗಳಾಗಿದ್ದಾರೆ.
  2. ಪಟ್ಟಣದ ಜಾತಿಕಟ್ಟೆ ಸಮೀಪ ಗುರುವಾರ ರಾತ್ರಿ
    ಗಂಟೆಯ ಸುಮಾರಿಗೆ ದನಕಳ್ಳತನ ಮಾಡಿ
    ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪಿಎಸ್‌ಐ
    ಮಹಂತಪ್ಪ ಕುಂಬಾರ ನೇತೃತ್ವದ ಪೊಲೀಸ್ ತಂಡ
    ಬೆನ್ನಟ್ಟಿ ನಾಲ್ಕು ಜನರನ್ನು ಹಿಡಿದಿದ್ದು ಇಬ್ಬರು
    ಪರಾರಿಯಾಗಿದ್ದಾರೆ.
    ಬಂಧಿತ ಆರೋಪಿಗಳು ಭದ್ರಾವತಿಯ ಸಲ್ಮಾನ್
    ಅಶ್ವಾಖಾನ್(20)ಕಾಶೀಪ್ ಮಹಮ್ಮದ ರಫೀ(27)ಮುಬಾರಕ್
    ಗೌಸ್ ಪೀರ್(24)ಜೈನುಲ್ಲಾ ಶಾಮೀರ(30) ಆಗಿದ್ದು
    ಮಹಮ್ಮದ ವಸಿಂ ಹಾಗೂ ಜಮೀರ್ ಖಾನ ಪರಾರಿಯಾಗಿರುವ
    ಆರೋಪಿಗಳಾಗಿದ್ದಾರೆ.
    ತಾಲೂಕಿನಲ್ಲಿ ಇತ್ತೀಚೆಗೆ ದನಕಳ್ಳತನ ಹೆಚ್ಚಾಗುತ್ತಿದೆ.
    ಕಳ್ಳರು ಬಿಡಾಡಿ ದನಗಳನ್ನು ಗುರಿಯಾಗಿಸಿಕೊಂಡು ರಾತ್ರಿ
    ಸಮಯದಲ್ಲಿ ಕದ್ದು ವಾಹನದಲ್ಲಿ
    ತುಂಬಿಕೊಂಡು ಪರಾರಿಯಾಗುತ್ತಿದ್ದಾರೆ
    ಆದ್ದರಿಂದ ದನಗಳ ಮಾಲಿಕರು ತಮ್ಮ ದನಗಳನ್ನು
    ರಾತ್ರಿಸಮಯದಲ್ಲಿ ಓಡಾಡಲು ಬಿಡಬಾರದು ಕೊಟ್ಟಿಗೆಯಲ್ಲಿ ಕಟ್ಟುವ ವ್ಯವಸ್ಥೆ ಮಾಡಬೇಕು. ಹಾಗೇ ಜಾನುವಾರು ಗಳಿಗೆ ಇನ್ಸೂರನ್ಸ್ ಮಾಡಿಸಬೇಕು ಸಾಕಲು ಆಗದವರು
    ಗೋಶಾಲೆಗೆ
    ನೀಡಬೇಕು. ದನಕಳ್ಳತನವಾಗಿದೆ ಎಂದು ದೂರು ನೀಡುವವರ ವಿರುದ್ದವೂ ಪ್ರಕರಣ
    ದಾಕಲಿಸಲಾಗುವುದು. ಬಿಡಾಡಿ
    ದನಗಳ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು
    ಪಪಂ ಹಾಗೂ ಗ್ರಾಪಂಗೆ ತಿಳಿಸಲಾಗಿದೆ.
    ಸಾರ್ವಜನಿಕ ರು ತಾಲೂಕಿನಲ್ಲಿ ಅಕ್ರಮ ಬಂದೂಕು ಇಟ್ಟುಕೊಂಡಿರುವವರ ಬಗ್ಗೆ ಮಾಹಿತಿ ನೀಡಬೇಕು. ಅಲ್ಲದೇ
    ಅಕ್ರಮ ಸರಾಯಿ ಮಾರಾಟ ಮಾಡುತ್ತಿರುವ ಬಗ್ಗೆ ಯು ಮಾಹಿತಿ ನೀಡಬೇಕು ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸಾರ್ವಜನಿಕರು
    ಸಹಕರಿಸಿದರೆ ಮಾತ್ರ ತಾಲ್ಲೂಕಿನಲ್ಲಿ ಅಪರಾಧ ಪ್ರಕರಣವನ್ನು
    ತಡೆಯಲು ಸಾಧ್ಯ ವಾಗುತ್ತದೆ ಎಂದು ಸಿಪಿಐ ಕುಮಾರ ಕೆ. ತಿಳಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *