ಹಿರಿಯ ವೈದ್ಯ ಡಾ|ಎಸ್.ಆರ್.ಹೆಗಡೆಯವರಿಗೆ ನಾಗರಿಕ ಸನ್ಮಾನ & ಇತರ local ಸುದ್ದಿಗಳು


ಸಿದ್ದಾಪುರ
ಜ್ಞಾನ, ಕೌಶಲ್ಯಗಳಿಂದ ಮಾತ್ರ ವೈದ್ಯಕೀಯ ಕಾರ್ಯ ಸಾಧ್ಯವಿಲ್ಲ. ವಿಶ್ವಾಸ, ಶೃದ್ಧೆ, ಪ್ರಾಮಾಣಿಕತೆ, ತಾಳ್ಮೆ, ಅನುಕಂಪಗಳು ಅತ್ಯಗತ್ಯ. ಈ ಗುಣಗಳು ಡಾ|ಎಸ್.ಆರ.ಹೆಗಡೆಯವರಲ್ಲಿರುವದಕ್ಕೆ ಅವರೊಬ್ಬ ಜನಪರ, ಮಾದರಿ ವೈದ್ಯರಾಗಿ ಕಳೆದ ೫೦ ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನೇತ್ರತಜ್ಞ ಡಾ|ಕೆ.ವಿ.ಶಿವರಾಂ ಶಿರಸಿ ಹೇಳಿದರು.
ಅವರು ಹಿರಿಯ ವೈದ್ಯ ಡಾ|ಎಸ್.ಆರ್.ಹೆಗಡೆ ಹಾರ್ಸಿಮನೆಯವರ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ಅರ್ಧ ಶತಮಾನದ ಹಿಂದೆಯೇ ಎಂ.ಬಿ.ಬಿ.ಎಸ್. ಪದವಿ ಪಡೆದು ಅಪ್ಪಟ ಗ್ರಾಮೀಣ ಭಾಗವಾದರು ತನ್ನ ಹುಟ್ಟೂರಿನ ಸಿದ್ದಾಪುರದಲ್ಲಿ ವೃತ್ತಿಯನ್ನು ಆರಂಭಿಸಿ, ನಂತರದಲ್ಲಿ ಆಧುನಿಕ ವೈದ್ಯಕೀಯ ಸೇವೆಯನ್ನು ನೀಡಿದವರು ಎಸ್.ಆರ್.ಹೆಗಡೆ. ಸೇವಾ ಕ್ಷೇತ್ರದಲ್ಲಿ ಇರುವವರಿಗೆ ಇವರು ಮಾರ್ಗದರ್ಶಿಯಾಗಿದ್ದಾರೆ ಎಂದರು.

ತಾಳಮದ್ದಲೆ
ಸಿದ್ದಾಪುರ : ಯಕ್ಷಗಾನ ಕವಿ ಬೆಳಸಲಿಗೆ ಗಣಪತಿ ಹೆಗಡೆ ಪುಣ್ಯತಿಥಿಯ ಅಂಗವಾಗಿ, ʼಅಹಲ್ಯಾಶಾಪʼ(ರಚನೆ : ಬೆಳಸಲಿಗೆ ಗಣಪತಿ ಹೆಗಡೆ) ಪ್ರಸಂಗದ ತಾಳಮದ್ದಲೆ ತಾಲ್ಲೂಕಿನಬೆಳಸಲಿಗೆಯಸುರೇಶ ಗಣಪತಿ ಹೆಗಡೆ ಅವರಮನೆಯಲ್ಲಿ ಇತ್ತೀಚೆಗೆನಡೆಯಿತು.
ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ತಾಳಮದ್ದಲೆಯ ಹಿಮ್ಮೇಳದಲ್ಲಿ ಸತೀಶ ಹೆಗಡೆ ದಂಟಕಲ್(ಭಾಗವತರು), ಮಂಜುನಾಥ ಹೆಗಡೆ ಕಂಚಿಮನೆ (ಮದ್ದಲೆವಾದಕರು) ಮತ್ತು ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಗೀತಾ ಸುರೇಶ ಹೆಗಡೆ ಬೆಳಸಲಿಗೆ(ಇಂದ್ರ), ಸುಜಾತಾ ಹೆಗಡೆ ದಂಟಕಲ್(ಅಹಲ್ಯೆ), ಕಾತ್ಯಾಯಿನಿ ನಾಗೇಶ ಹೆಗಡೆ ಅತ್ತಿಕೊಪ್ಪ(ಗೌತಮ), ನಾಗರತ್ನ ಶ್ರೀಧರ ಹೆಗಡೆ ಅತ್ತಿಕೊಪ್ಪ(ಬ್ರಹ್ಮ),ವೆಂಕಟರಾಮ ಹೆಗಡೆ ಬಿದ್ರಕಾನ(ನಾರದ) ಭಾಗವಹಿಸಿದ್ದರು.
btr


ಅಭಿನಂದನಾ ಮಾತುಗಳನ್ನಾಡಿದ ಆಶಾಕಿರಣ ಟ್ರಸ್ಟ ಅಧ್ಯಕ್ಷ ಡಾ|ರವಿ ಹೆಗಡೆ ಹೂವಿನಮನೆ ನಗರ ಪ್ರದೇಶದಲ್ಲಿ ಅವಕಾಶವಿದ್ದರೂ ಹುಟ್ಟಿದ ಊರಿನಲ್ಲಿ ವೈದ್ಯಕೀಯ ಸೇವೆಗೆ ಮುಂದಾದ ಡಾ|ಎಸ್.ಆರ್.ಹೆಗಡೆ ಮಾನವೀಯ ಮೌಲ್ಯಗಳನ್ನಿಟ್ಟುಕೊಂಡು ಕಾರ್ಯನಿರ್ವಹಿಸುತ್ತ ಬಂದವರು. ಸಿದ್ದಾಪುರಕ್ಕೆ ಮೊದಲ ಅಂಬುಲೆನ್ಸ, ಎಕ್ಸರೇ ಯೂನಿಟ್ ಮುಂತಾಗಿ ಅನೇಕ ಪ್ರಥಮಗಳನ್ನು ತಂದವರು. ಹಣವೇ ಮುಖ್ಯವೆಂದುಕೊಳ್ಳದೇ ತೀರಾ ಕುಗ್ರಾಮಗಳ ರೋಗಿಗಳ ಶುಶ್ರೂಷೆಯನ್ನು ಮಾಡಿದ್ದು ಅವರ ಅತಿ ದೊಡ್ಡ ಗುಣ. ಕಳೆದ ೫೦ ವರ್ಷಗಳಿಂದ ಜನರ ವಿಶ್ವಾಸವನ್ನು ಉಳಿಸಿಕೊಂಡದ್ದು ಅವರ ವೃತ್ತಿಪರತೆಗೆ ಸಾಕ್ಷಿ ಎಂದರು.
ಸಾಗರದ ನೇತ್ರತಜ್ಞ ಡಾ|ಎಚ್.ಎಸ್.ಮೋಹನ್ ಮಾತನಾಡಿ ಕೇವಲ ವೈದ್ಯರಾಗಿ ಮಾತ್ರವಲ್ಲದೇ ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಿದ ಡಾ|ಎಸ್.ಆರ್.ಹೆಗಡೆ ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದರು.
ದಾನಿ, ಉದ್ಯಮಿ ಆನಂದ ಈರಾ ನಾಯ್ಕ ಹೊಸೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ಅಧ್ಯಕ್ಷತೆ ವಹಿಸಿ ಡಾ|ಎಸ್.ಆರ್.ಹೆಗಡೆಯವರ ವ್ಯಕ್ತಿತ್ವ, ಸೇವೆಗಳ ಕುರಿತು ವಿವರಿಸಿದರು.
ಈ ಸಂದರ್ಭದಲ್ಲಿ ಡಾ|ಎಸ್.ಆರ್.ಹೆಗಡೆ ಸನ್ಮಾನ ಸಮಿತಿ ವತಿಯಿಂದ ಡಾ|ಎಸ್.ಆರ್.ಹೆಗಡೆ ದಂಪತಿಗಳನ್ನು ಸನ್ಮಾನಿಸಲಾಯಿತು. ವಿವಿಧ ಭಾಗಗಳಿಂದ ಆಗಮಿಸಿದ ಹಿತೈಷಿಗಳು, ಆತ್ಮೀಯರು ಸನ್ಮಾನಿಸಿದರು.
ಎಂ.ಎಂ.ಹೆಗಡೆ ಮಗೇಗಾರ ಸ್ವಾಗತಿಸಿದರು. ಪ್ರೊ}ಎಂ.ಕೆ.ನಾಯ್ಕ ನಿರೂಪಿಸಿದರು.

ಕಾನೂನು ಅರಿವು-

ಸಿದ್ದಾಪುರ
ಪ್ರತಿಯೊಬ್ಬರೂ ಕಾನೂನನ್ನು ತಿಳಿದುಕೊಂಡಾಗ ಮಾತ್ರ ಸಮಾಜ ಸುಸ್ಥಿರವಾಗಿರುತ್ತದೆ. ಕಾನೂನಿನ ಅರಿವಿಲ್ಲದಿದ್ದರೆ ನ್ಯಾಯ ಪಡೆಯುವುದು ಕಷ್ಠವಾಗುತ್ತದೆ. ಪ್ರಾಚೀನ ಕಾಲಕ್ಕೂ ಹಾಗೂ ಇಂದಿನ ಆಧುನಿಕ ಕಾಲಕ್ಕೂ ಕಾನೂನಿನಲ್ಲಿ ಬದಲಾವಣೆ ಆಗಿದೆ ಎಂದು ಸಿದ್ದಾಪುರದ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದರಾಮ ಎಸ್ ಹೇಳಿದರು.
ತಾಲೂಕಿನ ವಾಜಗದ್ದೆಯ ದುರ್ಗಾವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಹಾಗೂ ಕಾನೂನು ನೆರವು-ಅರಿವು ಕಾರ್ಯಾಗಾರ ಉದ್ಘಾಟಿಸಿ ಅವರು ಶನಿವಾರ ಮಾತನಾಡಿದರು.
ತಹಸೀಲ್ದಾರ ಪ್ರಸಾದ ಎಸ್.ಎ.ಮಾತನಾಡಿ ಸರ್ಕಾರದ ಸೌಲಭ್ಯಗಳು ಎಲ್ಲರಿಗೂ ತಲುಪಿಸಬೇಕೆನ್ನುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯುತ್ತಿದೆ. ಜನರು ಸಹ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೆ ಇದೊಂದು ಮುಕ್ತ ವೇದಿಕೆ ಆಗಿದೆ ಎಂದು ಹೇಳಿದರು.
ಎಪಿಪಿ ಚಂದ್ರಶೇಖರ ಎಚ್.ಎಸ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ದಿನೇಶ ನಾಯ್ಕ, ವಕೀಲ ಅಶೋಕ ನಾಯ್ಕ ಕಾನೂನು ಅರಿವು-ನೆರವು ಕುರಿತು ಮಾತನಾಡಿದರು. ದುರ್ಗಾವಿನಾಯಕ ದೇವಸ್ಥಾನದ ಮೊಕ್ತೇಸರ ಎಸ್.ಎಂ.ಹೆಗಡೆ,ಹಾರ್ಸಿಕಟ್ಟಾ ಗ್ರಾಪಂ ಅಧ್ಯಕ್ಷೆ ವಿದ್ಯಾ ಪಿ.ನಾಯ್ಕ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.
ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯದ ಕುರಿತು ಮಾಹಿತಿ. ಔಷಧಿ ಹಾಗೂ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಆರೋಗ್ಯ ಇಲಾಖೆಯಿಂದ ಗ್ರಾಮಸ್ಥರ ಆರೋಗ್ಯ ತಪಾಸಣೆ,ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪೋಷಣ ಪಕ್ವಾಡ ಕಾರ್ಯಕ್ರಮ,ಮತದಾರರ ಪಟ್ಟಿಯಲ್ಲಿ ಹೆಸರು ಕಡಿಮೆ ಮಾಡುವುದು/ ಸೇರ್ಪಡೆಮಾಡುವ ಹಾಗೂ ಆಧಾರ ನೋಂದಣಿ ಕುರಿತು ಮಾಹಿತಿ, ಜನಪ್ರತಿನಿಧಿಗಳಿಂದ ಕಂದಾಯ ಇಲಾಖೆಯ ವಿವಿಧ ಯೋಜನೆಯಲ್ಲಿ ಮಂಜೂರಿಯಾದ ಫಲಾನುಭವಿಗಳಿಗೆ ಆದೇಶ ಪ್ರತಿ ವಿತರಣೆ ನಡೆಯಿತು.


_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *