ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ! ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ

ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಕಾರವಾರ (ಉ.ಕ): ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜಗಳ ತೆಗೆದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ವ್ಯಾಪ್ತಿಯ ಕಲವೆ ಗ್ರಾಮದಲ್ಲಿ ನಡೆದಿದೆ.

ರಾಮಚಂದ್ರ ಕುಪ್ಪು ಗೌಡ (55) ಮೃತ ದುರ್ದೈವಿ.‌ ನಿತ್ಯ ಕುಡಿದು ಬರುತ್ತಿದ್ದ ಮಗ ಶ್ರೀಕಾಂತ್ ಮನೆಯಲ್ಲಿ ಜಗಳವಾಡುತ್ತಿದ್ದ. ಸೋಮವಾರ ಸಂಜೆ ಕೂಡ ಮನೆಯಲ್ಲಿ ಜಗಳವಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಂತದ ಸಿಟ್ಟಿಗೆದ್ದ ಮಗ ಕತ್ತಿಯಿಂದ ತಂದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡ ತಂದೆ ನರಳಿ ಪ್ರಾಣಬಿಟ್ಟಿದ್ದಾರೆ.

Drunken Son Killed his Father after exchanging words

ಅಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

ಘಟನೆ ಕುರಿತು ಮೃತರ ಪತ್ನಿ ಸಾವಿತ್ರಿ ಕುಮಟಾ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪಿಎಸ್​​​ಐ ಆನಂದ ಮೂರ್ತಿ, ರವಿ.ಗುಡ್ಡೆ, ಎಎಸ್​​​ಐ ನಾಗಾರಜಾಪ್ಪ ಆರೋಪಿಯನ್ನ ಬಂಧಿಸಿದ್ದಾರೆ.

Thumbnail image

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದಿತ್ತು. ಇಂದು ಬಾಲಕನ ಶವ ಪತ್ತೆಯಾಗಿದೆ.

ಕಾರವಾರ: ಮೀನು ಹಿಡಿಯಲು ತೆರಳಿದಾಗ ಮೊಸಳೆ ಪಾಲಾಗಿದ್ದ ಬಾಲಕನ ಶವ ಎರಡು ದಿನಗಳ ಬಳಿಕ ಇಂದು ಪತ್ತೆಯಾಗಿದೆ.

ಮೊಹಿನ್ ಮೆಹಬೂಬ್ ಅಲಿ(15) ಮೃತ ಬಾಲಕ. ವಿನಾಯಕನಗರದ ಬಳಿಯ ಕಾಳಿ ನದಿ ದಂಡೆಯಲ್ಲಿ ಮೀನು ಹಿಡಿಯುತ್ತಿರುವಾಗ ದಾಳಿ ಮಾಡಿದ ಮೊಸಳೆ ಬಾಲಕನನ್ನು ಎಳೆದೊಯ್ದಿದಿತ್ತು. ಒಂದೆರಡು ಬಾರಿ ನದಿಯಲ್ಲಿ ಮೊಸಳೆಯು ಬಾಲಕನನ್ನು ಮೇಲಕ್ಕೆ ಎತ್ತಿ ಮುಳುಗಿಸಿದ್ದ ಬಳಿಕ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಾಲಕನಿಗಾಗಿ ಸ್ಥಳೀಯರು ತೆಪ್ಪದ ಮೂಲಕ ಮತ್ತು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೋಟ್​ಗಳ ಮೂಲಕ ಹುಡುಕಾಟ ನಡೆಸಿದ್ದರೂ ಬಾಲಕ ಪತ್ತೆಯಾಗಿರಲಿಲ್ಲ.

dead body of boy found in dandeli who dragged by crocodile

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ!

ಇಂದು ಮತ್ತೆ ಕಾರ್ಯಾಚರಣೆ ನಡೆಸಿದಾಗ ಬಾಲಕನ ಶವ ಪತ್ತೆಯಾಗಿದೆ. ಬಾಲಕನ ಒಂದು ಕೈ ಅನ್ನು ಮೊಸಳೆ ತಿಂದು ಹಾಕಿದೆ. ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *