ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ! ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ

ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಕಾರವಾರ (ಉ.ಕ): ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜಗಳ ತೆಗೆದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ವ್ಯಾಪ್ತಿಯ ಕಲವೆ ಗ್ರಾಮದಲ್ಲಿ ನಡೆದಿದೆ.

ರಾಮಚಂದ್ರ ಕುಪ್ಪು ಗೌಡ (55) ಮೃತ ದುರ್ದೈವಿ.‌ ನಿತ್ಯ ಕುಡಿದು ಬರುತ್ತಿದ್ದ ಮಗ ಶ್ರೀಕಾಂತ್ ಮನೆಯಲ್ಲಿ ಜಗಳವಾಡುತ್ತಿದ್ದ. ಸೋಮವಾರ ಸಂಜೆ ಕೂಡ ಮನೆಯಲ್ಲಿ ಜಗಳವಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಂತದ ಸಿಟ್ಟಿಗೆದ್ದ ಮಗ ಕತ್ತಿಯಿಂದ ತಂದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡ ತಂದೆ ನರಳಿ ಪ್ರಾಣಬಿಟ್ಟಿದ್ದಾರೆ.

Drunken Son Killed his Father after exchanging words

ಅಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

ಘಟನೆ ಕುರಿತು ಮೃತರ ಪತ್ನಿ ಸಾವಿತ್ರಿ ಕುಮಟಾ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪಿಎಸ್​​​ಐ ಆನಂದ ಮೂರ್ತಿ, ರವಿ.ಗುಡ್ಡೆ, ಎಎಸ್​​​ಐ ನಾಗಾರಜಾಪ್ಪ ಆರೋಪಿಯನ್ನ ಬಂಧಿಸಿದ್ದಾರೆ.

Thumbnail image

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ದಾಂಡೇಲಿ ನಗರದ ಹಳಿಯಾಳ ರಸ್ತೆಯ ವಿನಾಯಕ ನಗರದಲ್ಲಿರುವ ಕಾಳಿ ನದಿಯ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನೋರ್ವನನ್ನು ಮೊಸಳೆಯೊಂದು ಎಳೆದೊಯ್ದಿತ್ತು. ಇಂದು ಬಾಲಕನ ಶವ ಪತ್ತೆಯಾಗಿದೆ.

ಕಾರವಾರ: ಮೀನು ಹಿಡಿಯಲು ತೆರಳಿದಾಗ ಮೊಸಳೆ ಪಾಲಾಗಿದ್ದ ಬಾಲಕನ ಶವ ಎರಡು ದಿನಗಳ ಬಳಿಕ ಇಂದು ಪತ್ತೆಯಾಗಿದೆ.

ಮೊಹಿನ್ ಮೆಹಬೂಬ್ ಅಲಿ(15) ಮೃತ ಬಾಲಕ. ವಿನಾಯಕನಗರದ ಬಳಿಯ ಕಾಳಿ ನದಿ ದಂಡೆಯಲ್ಲಿ ಮೀನು ಹಿಡಿಯುತ್ತಿರುವಾಗ ದಾಳಿ ಮಾಡಿದ ಮೊಸಳೆ ಬಾಲಕನನ್ನು ಎಳೆದೊಯ್ದಿದಿತ್ತು. ಒಂದೆರಡು ಬಾರಿ ನದಿಯಲ್ಲಿ ಮೊಸಳೆಯು ಬಾಲಕನನ್ನು ಮೇಲಕ್ಕೆ ಎತ್ತಿ ಮುಳುಗಿಸಿದ್ದ ಬಳಿಕ ಬಾಲಕನ ಸುಳಿವು ಪತ್ತೆಯಾಗಿರಲಿಲ್ಲ. ಬಾಲಕನಿಗಾಗಿ ಸ್ಥಳೀಯರು ತೆಪ್ಪದ ಮೂಲಕ ಮತ್ತು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೋಟ್​ಗಳ ಮೂಲಕ ಹುಡುಕಾಟ ನಡೆಸಿದ್ದರೂ ಬಾಲಕ ಪತ್ತೆಯಾಗಿರಲಿಲ್ಲ.

dead body of boy found in dandeli who dragged by crocodile

ದಾಂಡೇಲಿಯಲ್ಲಿ ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ!

ಇಂದು ಮತ್ತೆ ಕಾರ್ಯಾಚರಣೆ ನಡೆಸಿದಾಗ ಬಾಲಕನ ಶವ ಪತ್ತೆಯಾಗಿದೆ. ಬಾಲಕನ ಒಂದು ಕೈ ಅನ್ನು ಮೊಸಳೆ ತಿಂದು ಹಾಕಿದೆ. ಈ ಬಗ್ಗೆ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *