ಉ.ಕ. ಕ್ಯಾಸಿನೋಕ್ಕೆ ವಿರೋಧ..ಎ.ರವೀಂದ್ರ ಅಭಿಪ್ರಾಯ

ಗೋವಾ ಸೇರಿದಂತೆ ದೇಶದ ಕೆಲವು ರಾಜ್ಯಗಳ ಪ್ರವಾಸೋದ್ಯಮದ ಪ್ರಮುಖ ಮೂಲ ಕ್ಯಾಸಿನೋ ಪ್ರಾರಂಭ ದ ಬಗ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದೆ. ಪರಿಸರ ಪ್ರವಾಸೋದ್ಯಮಕ್ಕೆ ಹೆಸರಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕ್ಯಾಸಿನೋ ಪ್ರಾರಂಭಿಸುವ ಹೊಸ ಚಿಂತನೆ ಬಗ್ಗೆ ಸೋಮುವಾರ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್‌ ಹೆಬ್ಬಾರ್‌ ಕಾರವಾರದಲ್ಲಿ ಪ್ರಕಟಿಸಿದ್ದರು. ಶಿವರಾಮ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಪ್ರಾರಂಭದ ಬಗ್ಗೆ ಜಿಲ್ಲೆಯಾದ್ಯಂತ ವಿರೋಧದ ಅಲೆ ಎದ್ದಿದೆ.ಇದು ಜಿಲ್ಲೆಗೆ ಕಳಂಕ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.


     ಉತ್ತರ ಕನ್ನಡ ಜಿಲ್ಲೆ ಅರಣ್ಯ, ಪರಿಸರ ಪ್ರವಾಸೋದ್ಯಮದ ಪ್ರಮುಖ ಜಿಲ್ಲೆ. ಈ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ನೆಪದಲ್ಲಿ ಕ್ಯಾಸಿನೋ ಪ್ರಾರಂಭ ಗೋವಾ ಸಂಸ್ಕೃತಿಗೆ ಆಹ್ವಾನ ಕೊಟ್ಟಂತೆ ಜಿಲ್ಲೆಯಲ್ಲಿ ಜನಸಾಮಾನ್ಯರ ಅನೇಕ ಸಮಸ್ಯೆಗಳಿವೆ ಅಂಥ ಸಮಸ್ಯೆ, ಸವಾಲು ಸ್ವೀಕರಿಸದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ತಮ್ಮ ವೈಯಕ್ತಿಕ ಅಭಿಪ್ರಾಯ, ಯೋಜನೆ ಹೇಳಿದ್ದಾರೋ ಇದು ಬಿ.ಜೆ.ಪಿ.ಯ ಯೋಚನೆ, ಯೋಜನೆಯೋ ಎನ್ನುವ ಪ್ರಶ್ನೆ ಎದ್ದಿದೆ.


ಗೋವಾ ಮಾದರಿಯ ಕ್ಯಾಸಿನೋ ಪ್ರಾರಂಭದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾಅರಣ್ಯ ಭೂಮಿ ಹೋರಾಟಗಾರರ ವೇದಿಕೆ    ಅರಣ್ಯ ಭೂಮಿ ಸಾಗುವಳಿದಾರರು ಮತ್ತು ಇತರ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸದ ಜಿಲ್ಲಾಡಳಿತ ಕ್ಯಾಸಿನೋ ಪ್ರಾರಂಭಕ್ಕೆ ಮುಂದಾಗಿದೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರೋಧ ಎಂದಿದೆ.
ಈ ಬಗ್ಗೆ ಮಾತನಾಡಿದ ಅರಣ್ಯಭೂಮಿ ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರನಾಥ ಕ್ಯಾಸಿನೋ ಪ್ರಾರಂಭದಿಂದ ಉತ್ತರ ಕನ್ನಡ ಜಿಲ್ಲೆಯ ಭಾಗ್ಯದ ಬಾಗಿಲು ತೆರೆಯಲ್ಲ ಬದಲಾಗಿ ಗೋವಾದ ಮೋಜಿನ ಸಂಸ್ಕೃತಿಗೆ ಇಲ್ಲಿ ಅವಕಾ ಶ ಮಾಡಿದಂತಾಗುತ್ತದೆ. ಕ್ಯಾಸಿನೋ ಕ್ಕೆ ಅವಕಾಶ ಮಾಡುವ ಜಿಲ್ಲಾಡಳಿತದ ನಿರ್ಧಾರ ಜನವಿರೋಧಿಯಾಗಿದೆ ಎಂದು ತಿಳಿಸಿದ್ದಾರೆ  ಜನರ ಅಗತ್ಯ ಬೇಡಿಕೆಗಳಿಗೆ ಸ್ಫಂದಿಸದ ಸರ್ಕಾರ ಕ್ಯಾಸಿನೋ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರ ಎಂದಿದ್ದಾರೆ.  .ಉತ್ತರ ಕನ್ನಡ ಜಿಲ್ಲೆಯ ಜನ ಕ್ಯಾಸಿನೋ ಮೋಜಿಗಾಗಿ ಜಿಲ್ಲೆಯಿಂದ ಗೋವಾಕ್ಕೆ ಹೋಗಿ ಬರುತ್ತಿರುವ ವಿದ್ಯಮಾನದ ನಡುವೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರರ ರಾಜ್ಯೋತ್ಸವ ದಿಕ್ಸೂಚಿಗೆ ತೀವೃ ವಿರೋಧ ವ್ಯಕ್ತವಾಗಿರುವುದು ವಿಶೇಶವಾಗಿದೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *