ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು

ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ ಅಧಿಕಾರಿಗಳು ಮಾಲು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ವಿವರ ಹೀಗಿದೆ.

ದಿನಾಂಕ:02_11_2021ರಂದು ರಾತ್ರಿ 9__45 ಗಂಟೆಗೆ ಸಿದ್ದಾಪುರ ತಾಲೂಕಿನ ಅಣಲೇಬೈಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಗದ್ದೆ, ಮೇಲಿನ ಸರಕುಳಿ ಗ್ರಾಮದ ನಿವಾಸಿಯಾದ ಕಟ್ಯಾ ಮಾಚ ಗೌಡ ಮನೆಯಲ್ಲಿ ದಾಳಿ ನಡೆಸಲಾಗಿ, ಸದರಿ ಆರೋಪಿಯು ತನ್ನ ಮನೆಯ ಒಳಗಡೆ ಇಡಲಾಗಿರುವ ಟೆಲಿವಿಷನ್‌ ಸೆಟ್ ನ ಹಿಂಭಾಗದಲ್ಲಿ ಎರಡು ಚೀಲಗಳಲ್ಲಿ ಬೀಜ ಮತ್ತು ಹೂವುಗಳನ್ನು ಒಳಗೊಂಡ ಒಣ ಗಾಂಜಾವನ್ನು ಹೊಂದಿರುವುದು ಕಂಡು ಬಂದಿರುತ್ತದೆ.. ಚೀಲಗಳಲ್ಲಿ ಇದ್ದ ಮಾದಕ ವಸ್ತುಗಳನ್ನು ಡಿಜಿಟಲ್ ತೂಗು ಯಂತ್ರದಲ್ಲಿ ತೂಗಲಾಗಿ, ಒಂದನೆಯ ಚೀಲದಲ್ಲಿ 483 ಗ್ರಾಮ್ ಹಾಗೂ ಇನ್ನೊಂದು ಚೀಲದಲ್ಲಿ 360 ಗ್ರಾಮ್ ಈ ರೀತಿಯಲ್ಲಿ ಒಟ್ಟು 843 ಗ್ರಾಮ್ ಮಾದಕ ವಸ್ತುವನ್ನು ಮಾರಾಟಕ್ಕಾಗಿ ಹೊಂದಿರುವುದನ್ನು ಪತ್ತೆಹಚ್ಚಿ ಅವುಗಳನ್ನು ಜಪ್ತುಪಡಿಸಿ, ಆರೋಪಿಯನ್ನು ದಸ್ತಗೀರ್ ಮಾಡಿ, ಎನ್.ಡಿ.ಪಿ.ಎಸ್. ಕಾಯ್ದೆ ಅಡಿಯಲ್ಲಿ ಮೊಕದ್ದಮೆಯನ್ನು ದಾಖಲಿಸಿಕೊಳ್ಳಲಾಗಿದೆ..

ದಾವಣಗೆರೆ: 67 ಕೆಜಿ ಪಂಗೋಲಿನ್ ಚಿಪ್ಪು ವಶ, 18 ಮಂದಿ ಬಂಧನ

ಶಿವಮೊಗ್ಗ ರಸ್ತೆಯ ಹರಿಹರದ ಬಳಿಯ ಡಾಬಾದಿಂದ ಸುಮಾರು 67 ಕೆಜಿ ಪಂಗೋಲಿನ್ ಚಿಪ್ಪುಗಳನ್ನು ಸಾಗಿಸುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

Davangere DCRB police team with the seized pangolin scales

ದಾವಣಗೆರೆ: ಶಿವಮೊಗ್ಗ ರಸ್ತೆಯ ಹರಿಹರದ ಬಳಿಯ ಡಾಬಾದಿಂದ ಸುಮಾರು 67 ಕೆಜಿ ಪಂಗೋಲಿನ್ ಚಿಪ್ಪುಗಳನ್ನು ಸಾಗಿಸುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮದ ಬಗ್ಗೆ ಮಾಹಿತಿ ಪಡೆದ ಡಿಸಿಆರ್‌ಬಿ ಡಿಎಸ್‌ಪಿ ಬಿ.ಎಸ್.ಬಸವರಾಜು ಮತ್ತು ತಂಡ ಶಿವಬಸವ ಡಾಬಾ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಎರಡು ವ್ಯಾನ್‌ಗಳಲ್ಲಿ ಪ್ಯಾಂಗೋಲಿನ್ ಸ್ಕೇಲ್ ಸಾಗಿಸುತ್ತಿರುವುದು ಪತ್ತೆಯಾಗಿದೆ.  ಇದರೊಂದಿಗೆ 18 ಮಂದಿಯನ್ನು ಬಂಧಿಸಲಾಗಿದೆ.

ಆರೋಪಿಗಳ ವಿರುದ್ಧ ವನ್ಯಜೀವಿ (ರಕ್ಷಣೆ) ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣವನ್ನು ಸಹ ದಾಖಲಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಚೀನಾ ಔಷಧಿಗೆ ಮುಳ್ಳುಹಂದಿ ಚಿಪ್ಪು ಬಳಕೆ ಮಾಡುವುದರಿಂದ ಪ್ರಪಂಚದಾದ್ಯಂತ ದೊಡ್ಡ ಪ್ರಮಾಣದಲ್ಲಿ ಈ ದಂಧೆ ನಡೆಯುತ್ತಿದ್ದು, ಹೀಗಾಗಿ ಅಳಿವಿನಂಚಿನಲ್ಲಿರುವ ಈ ಸಸ್ತನಿಯನ್ನು ರಕ್ಷಿಸಬೇಕಾಗಿದೆ. (ಕ.ಪ್ರ.ಡಾ.)

ಶ್ರೀಮತಿ ಶೈಲಜಾ ಕೋಟೆ, ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಮಂಗಳೂರು ವಿಭಾಗ ರವರ ನಿರ್ದೇಶನದಂತೆ, ವನಜಾಕ್ಷಿ ಎಮ್. ಅಬಕಾರಿ ಉಪ ಆಯುಕ್ತರು ಉ.ಕ. ಜಿಲ್ಲೆ ಕಾರವಾರ ರವರ ಮಾರ್ಗದರ್ಶನದಲ್ಲಿ, ಮಹೇಂದ್ರ ಎಸ್. ನಾಯ್ಕ ಅಬಕಾರಿ ಉಪ_ ಅಧೀಕ್ಷಕರು(ಪ್ರಭಾರ)ಉಪ -ವಿಭಾಗ ಶಿರಸಿ ಇವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಜ್ಯೋತಿಶ್ರೀ ಜಿ. ನಾಯ್ಕ ಅಬಕಾರಿ ನಿರೀಕ್ಷಕರು ಶಿರಸಿ ವಲಯ ಇವರು ಪ್ರಕರಣ ಪತ್ತೆ ಹಚ್ಚಿ ಮೊಕದ್ದಮೆ ದಾಖಲಿಸಿಕೊಂಡಿದ್ದು, ದಾಳಿಯಲ್ಲಿ ಡಿ. ಎನ್. ಶಿರಸಿಕರ ಅಬಕಾರಿ ಉಪ-ನಿರೀಕ್ಷಕರು ಶಿರಸಿ ವಲಯ, ಸಿಬ್ಬಂದಿಗಳಾದ ನಿರ್ಮಲಾ ಎಮ್. ನಾಯ್ಕ ಪ್ರಸನ್ನ ಯು. ನೇತ್ರಕರ್, ಬಸವರಾಜ ಒಂಟಿ, ಗಂಗಾಧರ vi ಕಲ್ಲೇದ್,ಕುಮಾರೇಶ್ವರ ಅಂಗಡಿ,ಸವಿತಾ ಎಸ್. ಲಂಕೇರ ಹಾಗೂ ವಾಹನ ಚಾಲಕರಾದ ಎನ್. ಕೆ. ವೈದ್ಯ ಮತ್ತು ಬಿ. ಎಮ್. ಗಾಯಕವಾಡ ಇವರುಗಳು ಪಾಲ್ಗೊಂಡಿದ್ದರು… ಜಪ್ತು ಪಡಿಸಿದ ಗಾಂಜಾ ದ ಅಂದಾಜು ಮೌಲ್ಯ 25000ರೂಪಾಯಿಗಳು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *