ಉತ್ತರ ಕನ್ನಡದಲ್ಲಿ 30,000 ಸಸ್ಯಗಳನ್ನು ನೆಟ್ಟಿರುವ ತುಳಸಿ ಗೌಡ

ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

Tulasi Gowda receiving Padmashri Award from President of India Ram Nath Kovind in New Delhi on Monday

ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

“ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದೆ. ಮರ ಕಡಿಯುವುದನ್ನು ನಿಷೇಧಿಸುವಂತೆ ಮನವಿ ಮಾಡಿದೆ ಎಂದಿದ್ದಾರೆ ಮಾಧ್ಯಮಗಳೊಂದಿಗೆ ಮಾತನಾಡಿರುವ ತುಳಸಿ ಗೌಡ. 

ಗಿಡಗಳನ್ನು ನೆಡುವುದು ಶ್ರೇಷ್ಠ ಕೆಲಸ ಹಾಗೂ ನಾವು ಅದನ್ನು ಮುಂದುವರೆಸಬೇಕು, ನನ್ನ ಆರೋಗ್ಯ ಬೆಂಬಲಿಸದೇ ಇದ್ದರೂ ನಾನು ಇನ್ನೂ ಹೆಚ್ಚು ಮರಗಳನ್ನು ನೆಡಲು ಇಚ್ಛಿಸುತ್ತೇನೆ ಎನ್ನುತ್ತಾರೆ ತುಳಸಿ ಗೌಡ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ 30,000 ಮರಗಳನ್ನು ತುಳಸಿ ಗೌಡ ನೆಟ್ಟಿರುವ ಸಾಧನೆ ಮಾಡಿದ್ದಾರೆ. ಅರಣ್ಯದ ನರ್ಸರಿಯಲ್ಲಿ ದೈನದಿಂದ ವೇತನಕ್ಕಾಗಿ ಉದ್ಯೋಗಕ್ಕೆ ಸೇರಿದ ತುಳಸಿ ಗೌಡ ಗಿಡಗಳನ್ನು ಬೆಳೆಸುವುದರೆಡೆಗೆ ತಮಗಿದ್ದ ಆಸಕ್ತಿ, ಪ್ರೀತಿಯ ಪರಿಣಾಮ ಖಾಯಂ ಉದ್ಯೋಗಿಯಾದರು.  

ಪಶ್ಚಿಮ ಘಟ್ಟಗಳ ಸ್ಥಳೀಯ ಸಸ್ಯ ಪ್ರಭೇದಗಳನ್ನು ಪತ್ತೆ ಮಾಡುವುದಕ್ಕೆ ಅರಣ್ಯ ಇಲಾಖೆಗೆ ತುಳಸಿ ಗೌಡ ಸಹಾಯ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಯುವುದಕ್ಕೆ ರೈತರು ಹಾಗೂ ಜನತೆಗೆ ತುಳಸಿ ಗೌಡ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. 

ಅರಣ್ಯ ಇಲಾಖೆ ವರ್ಷದ ನಿರ್ದಿಷ್ಟ ಕಾಲದಲ್ಲಿ ನರ್ಸರಿಗಳನ್ನು ಮುಚ್ಚಿ ನೌಕರರಿಗೆ ಕೆಲಸ ಇಲ್ಲದೇ ಇದ್ದಾಗಲೂ ನರ್ಸರಿಯಲ್ಲಿ ತುಳಸಿ ಗೌಡ ಮಾತ್ರ ಸಕ್ರಿಯರಾಗಿರುತ್ತಿದ್ದರು. ಅವರ ಈ ಬದ್ಧತೆಯನ್ನು ಗಮನಿಸಿದ ಅರಣ್ಯ ಇಲಾಖೆ ಆಕೆಯನ್ನು ಖಾಯಂ ಉದ್ಯೋಗಿಯನ್ನಾಗಿ ನೇಮಕ ಮಾಡಿತು. ನಿವೃತ್ತಿಯವರೆಗೂ ಕಾರ್ಯನಿರ್ವಹಣೆ ಮಾಡಿದ ತುಳಸಿ ಗೌಡ, ಇಂದಿಗೂ ತಮ್ಮ ಕಾಯಕವನ್ನು ಮುಂದುವರೆಸಿದ್ದು, ಸ್ಥಳೀಯ ಸಸ್ಯ ಜಾತಿಗಳ ಬಗ್ಗೆ ಜ್ಞಾನವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ತುಳಸಿ ಗೌಡ ಅವರ ಮೊಮ್ಮಗ ಶೇಖರ್ ಗೌಡ ತಿಳಿಸಿದ್ದಾರೆ. 

ಅರಣ್ಯ ಇಲಾಖೆ ವಜ್ಯಜೀವಿಗಳಿಗೆ ಹಣ್ಣುಗಳನ್ನು ನೀಡುವಷ್ಟು ಸ್ಥಳೀಯ ಗಿಡಗಳು ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ತುಳಸಿ ಗೌಡ ಮನವಿ ಮಾಡಿದ್ದು, ಅಕೇಷಿಯಾ ಸೇರಿದಂತೆ ವಿಲಕ್ಷಣ ಮರಗಳನ್ನು ಬೆಳೆಯುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹಾಲಕ್ಕಿ ಸಮುದಾಯಕ್ಕೆ ಇದು ಎರಡನೇ ಪದ್ಮ ಪ್ರಶಸ್ತಿಯಾಗಿದ್ದು, ಹಾಡುಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಸುಕ್ರಿ ಬೊಮ್ಮಗೌಡ ಅವರನ್ನು ಈ ಹಿಂದೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ತರ್ತು ಪರಿಸ್ಥಿತಿ ಜಾರಿ ತಪ್ಪಲ್ಲ!

RSS ಕೂಡ ತುರ್ತು ಪರಿಸ್ಥಿತಿ ಬೆಂಬಲಿಸಿತ್ತು: MLC ಬಿ.ಕೆ. ಹರಿಪ್ರಸಾದ್ ಪ್ರಧಾನಿ ಮೋದಿಯವರು ಸಾಂವಿಧಾನಿಕ ಹುದ್ದೆಯನ್ನು ರಾಜಕೀಯ ಕೆಸರೆರಚಾಟಕ್ಕೆ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ ವಿಚಾರ. ಬಿಕೆ...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *