ಉತ್ತರ ಕನ್ನಡದಲ್ಲಿ 30,000 ಸಸ್ಯಗಳನ್ನು ನೆಟ್ಟಿರುವ ತುಳಸಿ ಗೌಡ

ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

Tulasi Gowda receiving Padmashri Award from President of India Ram Nath Kovind in New Delhi on Monday

ಹುಬ್ಬಳ್ಳಿ: ತುಳಸಿ ಗೌಡ ಅವರು ಹಾಲಕ್ಕಿ ಸಮುದಾಯದ ಸಾಂಪ್ರದಾಯಿಕ ಉಡುಪಿನಲ್ಲಿ, ಬರಿಗಾಲಲ್ಲಿ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿ ಸ್ವೀಕರಿಸುತ್ತಿದ್ದರೆ,  ಆಕೆಯ ಊರು ಅಂಕೋಲದ ಹೊನ್ನಳ್ಳಿಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿತ್ತು. 

“ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದೆ. ಮರ ಕಡಿಯುವುದನ್ನು ನಿಷೇಧಿಸುವಂತೆ ಮನವಿ ಮಾಡಿದೆ ಎಂದಿದ್ದಾರೆ ಮಾಧ್ಯಮಗಳೊಂದಿಗೆ ಮಾತನಾಡಿರುವ ತುಳಸಿ ಗೌಡ. 

ಗಿಡಗಳನ್ನು ನೆಡುವುದು ಶ್ರೇಷ್ಠ ಕೆಲಸ ಹಾಗೂ ನಾವು ಅದನ್ನು ಮುಂದುವರೆಸಬೇಕು, ನನ್ನ ಆರೋಗ್ಯ ಬೆಂಬಲಿಸದೇ ಇದ್ದರೂ ನಾನು ಇನ್ನೂ ಹೆಚ್ಚು ಮರಗಳನ್ನು ನೆಡಲು ಇಚ್ಛಿಸುತ್ತೇನೆ ಎನ್ನುತ್ತಾರೆ ತುಳಸಿ ಗೌಡ.

ಉತ್ತರ ಕನ್ನಡ ಜಿಲ್ಲೆಯಾದ್ಯಂತ 30,000 ಮರಗಳನ್ನು ತುಳಸಿ ಗೌಡ ನೆಟ್ಟಿರುವ ಸಾಧನೆ ಮಾಡಿದ್ದಾರೆ. ಅರಣ್ಯದ ನರ್ಸರಿಯಲ್ಲಿ ದೈನದಿಂದ ವೇತನಕ್ಕಾಗಿ ಉದ್ಯೋಗಕ್ಕೆ ಸೇರಿದ ತುಳಸಿ ಗೌಡ ಗಿಡಗಳನ್ನು ಬೆಳೆಸುವುದರೆಡೆಗೆ ತಮಗಿದ್ದ ಆಸಕ್ತಿ, ಪ್ರೀತಿಯ ಪರಿಣಾಮ ಖಾಯಂ ಉದ್ಯೋಗಿಯಾದರು.  

ಪಶ್ಚಿಮ ಘಟ್ಟಗಳ ಸ್ಥಳೀಯ ಸಸ್ಯ ಪ್ರಭೇದಗಳನ್ನು ಪತ್ತೆ ಮಾಡುವುದಕ್ಕೆ ಅರಣ್ಯ ಇಲಾಖೆಗೆ ತುಳಸಿ ಗೌಡ ಸಹಾಯ ಮಾಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಯುವುದಕ್ಕೆ ರೈತರು ಹಾಗೂ ಜನತೆಗೆ ತುಳಸಿ ಗೌಡ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದಾರೆ. 

ಅರಣ್ಯ ಇಲಾಖೆ ವರ್ಷದ ನಿರ್ದಿಷ್ಟ ಕಾಲದಲ್ಲಿ ನರ್ಸರಿಗಳನ್ನು ಮುಚ್ಚಿ ನೌಕರರಿಗೆ ಕೆಲಸ ಇಲ್ಲದೇ ಇದ್ದಾಗಲೂ ನರ್ಸರಿಯಲ್ಲಿ ತುಳಸಿ ಗೌಡ ಮಾತ್ರ ಸಕ್ರಿಯರಾಗಿರುತ್ತಿದ್ದರು. ಅವರ ಈ ಬದ್ಧತೆಯನ್ನು ಗಮನಿಸಿದ ಅರಣ್ಯ ಇಲಾಖೆ ಆಕೆಯನ್ನು ಖಾಯಂ ಉದ್ಯೋಗಿಯನ್ನಾಗಿ ನೇಮಕ ಮಾಡಿತು. ನಿವೃತ್ತಿಯವರೆಗೂ ಕಾರ್ಯನಿರ್ವಹಣೆ ಮಾಡಿದ ತುಳಸಿ ಗೌಡ, ಇಂದಿಗೂ ತಮ್ಮ ಕಾಯಕವನ್ನು ಮುಂದುವರೆಸಿದ್ದು, ಸ್ಥಳೀಯ ಸಸ್ಯ ಜಾತಿಗಳ ಬಗ್ಗೆ ಜ್ಞಾನವನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ತುಳಸಿ ಗೌಡ ಅವರ ಮೊಮ್ಮಗ ಶೇಖರ್ ಗೌಡ ತಿಳಿಸಿದ್ದಾರೆ. 

ಅರಣ್ಯ ಇಲಾಖೆ ವಜ್ಯಜೀವಿಗಳಿಗೆ ಹಣ್ಣುಗಳನ್ನು ನೀಡುವಷ್ಟು ಸ್ಥಳೀಯ ಗಿಡಗಳು ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ತುಳಸಿ ಗೌಡ ಮನವಿ ಮಾಡಿದ್ದು, ಅಕೇಷಿಯಾ ಸೇರಿದಂತೆ ವಿಲಕ್ಷಣ ಮರಗಳನ್ನು ಬೆಳೆಯುವುದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಹಾಲಕ್ಕಿ ಸಮುದಾಯಕ್ಕೆ ಇದು ಎರಡನೇ ಪದ್ಮ ಪ್ರಶಸ್ತಿಯಾಗಿದ್ದು, ಹಾಡುಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಸುಕ್ರಿ ಬೊಮ್ಮಗೌಡ ಅವರನ್ನು ಈ ಹಿಂದೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.  (ಕಪ್ರಡಾ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *