ಸ್ಫೀಕರ್‌ ಕಾಗೇರಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ? ಬಿ.ಜೆ.ಪಿ.,ಕಾಂಗ್ರೆಸ್‌ ಜೊತೆಯಾಗಿ ಪ್ರತಿಭಟನೆ!

ಶಿರಸಿ ಕ್ಷೇತ್ರದಲ್ಲಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಮತೀಯವಾದಿ ದಬ್ಬಾಳಿಕೆ ವಿರುದ್ಧ ಒಂದಾಗಿರುವ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಪ್ರಮುಖರು ಇಲ್ಲಿಯ ಅಧಿಕಾರಶಾಹಿ ಹಿಂಸೆಯ ವಿರುದ್ಧ ಇತರ ಪಕ್ಷಗಳನ್ನೂ ಸೇರಿಸಿಕೊಂಡು ಪಕ್ಷಾತೀತವಾಗಿ ಸಾರ್ವಜನಿಕ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಮಾಹಿತಿ ದೊರೆತಿದೆ.

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಪ್ರತಿನಿಧಿಸುವ ಶಿರಸಿ ಕ್ಷೇತ್ರದಲ್ಲಿ ಪೊಲೀಸ್‌ ದಬ್ಬಾಳಿಕೆ ಪ್ರಾರಂಭವಾಗಿರುವ ಬಗ್ಗೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ತಮಗೆ ಬೇಕಾದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ಕರೆತರುವ ಶಾಸಕರು ಮೇಲ್ನೋಟಕ್ಕೆ ಅಧಿಕಾರಿಗಳಿಗೆ ತೊಂದರೆ ಕೊಡದೆ ಸಭ್ಯರಂತೆ ವರ್ತಿಸಿ ಹಿಂದಿನಿಂದ ಪೊಲೀಸ್‌ ರಾಜ್‌, ವಸೂಲಿ ರಾಜ್‌ ವ್ಯವಸ್ಥೆ ಪೋಶಿಸುತಿದ್ದಾರೆ ಎಂದು ಶಿರಸಿ-ಸಿದ್ಧಾಪುರದ ಜನ ಚರ್ಚಿಸುವಂತಾಗಿದೆ. ನಾಲ್ಕೈದು ವರ್ಷದ ಹಿಂದೆ ಕಾಗೇರಿಯ ಆಪ್ತ ಪೊಲೀಸ್‌ ಇನ್ಸಪೆಕ್ಟರ್‌ ಒಬ್ಬರು ಅಮಾಯಕ ಹವ್ಯಕರ ಕೊಲೆ ಕೇಸಿನಲ್ಲಿ ನಾಟಕ ಆಡಿದ್ದರು. ಈ ಅಧಿಕಾರಿಯ ಹಿಂದೆ ಬಿದ್ದ ವಕೀಲರೊಬ್ಬರು ಪೊಲೀಸ್‌ ಇನ್ಸಫೆಕ್ಟರ್‌ ರನ್ನು ಅಮಾನತು ಮಾಡಿಸಿ ಶಾಸಕರ ವಸೂಲಿ ದಂಧೆಗೆ ಬಿಸಿ ಮುಟ್ಟಿಸಿದ್ದರು. ಇದಾದ ನಂತರ ಶಿರಸಿ ಕ್ಷೇತ್ರದಲ್ಲಿ ಅಧಿಕಾರಿಗಳು ವಸೂಲಿಗೆ,ಅಧಿಕಾರ ದುರುಪಯೋಗಕ್ಕೆ ಹೆದರುವಂತಾಗಿತ್ತು. ಆದರೆ ಈಗ ಶಿರಸಿ-ಸಿದ್ಧಾಪುರಗಳಲ್ಲಿ ಅಧಿಕಾರಿಗಳ ಅಂಧಾದರ್ಬಾರ್‌ ನಿಂದಾಗಿ ಜನಸಾಮಾನ್ಯರು ಗೋಳಾಡುವಂತಾಗಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತಿದ್ದಾರೆ.

ಇದೇ ತಿಂಗಳ ಪ್ರಾರಂಭದಲ್ಲಿ ಸಿದ್ಧಾಪುರ ಬಿಳಗಿಯಲ್ಲಿ ನಡೆದ ದನದ ವ್ಯಾಪಾರಿಯೊಬ್ಬರ ಹಲ್ಲೆಯ ವಿಚಾರದಲ್ಲಿ ಪೊಲೀಸರು ಆಡಳಿತ ಪಕ್ಷ ಮತ್ತು ಶಾಸಕರ ಪರವಾಗಿ ಕೆಲಸ ಮಾಡಿ ಗೋವಿಂದ ಗೌಡರಿಗೆ ಅನ್ಯಾಯ ಮಾಡಿದ್ದಾರೆ ಎಂದು ದೂರಲಾಗಿತ್ತು. ಈ ಪ್ರಕರಣದ ಆರೋಪಿಗಳ ರಕ್ಷಣೆ ಮಾಡುತ್ತಿರುವ ಸ್ಥಳೀಯ ಪೊಲೀಸರ ಅನ್ಯಾಯ ನಿಯಂತ್ರಿಸಬೇಕೆಂದು ಸಮಾಜವಾದಿ ಪಕ್ಷ ರಾಜ್ಯಪಾಲರಿಗೆ ದೂರು ನೀಡಿತ್ತು.

ಈ ಪ್ರಕರಣದಲ್ಲಿ ಪೊಲೀಸರ ಎದುರೇ ಗೂಂಡಾಗಿರಿ ಪ್ರದರ್ಶಿಸಿದ ವಿಧಾನಸಭಾ ಅಧ್ಯಕ್ಷ ಕಾಗೇರಿಯವರ ಆಪ್ತರ ಮೇಲೆ ನಾಮಕಾವಸ್ಥೆ ದೂರು ದಾಖಲಿಸಿ ಕೋಮುವಾದಿಗಳನ್ನು ರಕ್ಷಣೆ ಮಾಡಿರುವ ಬಗ್ಗೆ ಸಿದ್ಧಾಪುರ ಪೊಲೀಸರ ವಿರುದ್ಧ ಜಿಲ್ಲೆಯಾದ್ಯಂತ ವಿರೋಧ ವ್ಯಕ್ತವಾಗಿತ್ತು. ಇದಾಗಿ ಸರಿಯಾಗಿ ಎರಡು ವಾರ ಕಳೆದಿಲ್ಲ. ಸಾಮಾನ್ಯ ಅಪಘಾತದ ಪ್ರಕರಣವನ್ನು ಜಾತಿ ನಿಂದನೆ ಎಂದು ದೂರು ದಾಖಲಿಸಿ ಶಾಸಕರ ವಿರೋಧಿಸಿಗಳನ್ನು ಬಂಧಿಸಿರುವ ಬಗ್ಗೆ ಉಗ್ರರಾಗಿರುವ ಸ್ಥಳೀಯ ನಾಯಕರು ಪೊಲೀಸರ ವರ್ತನೆ ಖಂಡಿಸಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದರು. ಹೀಗೆ ಶಾಸಕರು, ಸಂಸದರಿಗೆ ಬೇಕಾದವರಿಗೆ ಒಂದು ನ್ಯಾಯ, ಅನ್ಯರಿಗೇ ಒಂದು ನ್ಯಾಯ ಮಾಡುತ್ತಿರುವ ಬಗ್ಗೆ ಸಾರ್ವಜನಿಕರ ವಿರೋಧ ವ್ಯಕ್ತವಾಗಿದೆ.

ಶಿರಸಿ-ಸಿದ್ಧಾಪುರದ ರಾಜಕೀಯ ಬೆಳವಣಿಗೆಯಿಂದ ಕಂಗೆಟ್ಟು ಹತಾಶರಾಗಿರುವ ಸ್ಫೀಕರ್‌ ಕಾಗೇರಿ ಅಧಿಕಾರಿಗಳ ಮೂಲಕ ಬಹುಸಂಖ್ಯಾತರು, ಜನಸಾಮಾನ್ಯರನ್ನು ಹಿಂಸಿಸುತಿದ್ದಾರೆ. ಈ ರಾಜಕೀಯ ದ್ವೇಶಕ್ಕೆ ಅಧಿಕಾರಿಗಳು ದಾಳವಾಗುತಿದ್ದಾರೆ ಎನ್ನುವ ಅರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *