ಧಾವಂತದ ಸುದ್ದಿ, ಎಡವಟ್ಟು ಬೇಡ. ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ

ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ‘ಧಾವಂತದ ಸುದ್ದಿ, ಎಡವಟ್ಟು ಬೇಡ’; ಸಿಎಂ ಜಂಟಿ ಕಾರ್ಯದರ್ಶಿ ಜಿ.ಜಗದೀಶ್ ಅಭಿಪ್ರಾಯ

ನಾವೇ‌ ನೊಟ್ಟ ಮೊದಲು ಸುದ್ದಿ ಕೊಡಬೇಕೆನ್ನುವ ಧಾವಂತದಲ್ಲಿ ಎಡವಟ್ಟುಗಳನ್ನು ಮಾಡುವ ಕಾರ್ಯವನ್ನು ಮಾಧ್ಯಮದವರು ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ ಜಿ.‌ಜಗದೀಶ್ ಅವರು ಅಭಿಪ್ರಾಯಪಟ್ಟರು.

Information commissioner G Jagadiesh Malalagadde speaks on celebration on national press day at Karnataka media academy

ಬೆಂಗಳೂರು: ನಾವೇ‌ ಮೊಟ್ಟ ಮೊದಲು ಸುದ್ದಿ ಕೊಡಬೇಕೆನ್ನುವ ಧಾವಂತದಲ್ಲಿ ಎಡವಟ್ಟುಗಳನ್ನು ಮಾಡುವ ಕಾರ್ಯವನ್ನು ಮಾಧ್ಯಮದವರು ಮಾಡಬಾರದು ಎಂದು ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ ಜಿ.‌ಜಗದೀಶ್ ಅವರು ಅಭಿಪ್ರಾಯಪಟ್ಟರು.

ಅವರು ಇಂದು ಕರ್ನಾಟಕ ಮಾಧ್ಯಮ‌ ಅಕಾಡೆಮಿ‌ ಆಯೋಜಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ ವಿಚಾರಗೋಷ್ಠಿ‌ ಉದ್ಘಾಟಿಸಿ ಮಾತನಾಡಿದರು. “ಅವಸರದಲ್ಲಿ ಬ್ರೇಕಿಂಗ್ ಕೊಡುವಾಗ ಪ್ರಮಾದಗಳಾಗುತ್ತವೆ ಎಂಬುದಕ್ಕೆ ಅವರು ತಮ್ಮ ಅನುಭವವನ್ನೇ ಉದಾಹರಣೆಯನ್ನಾಗಿ ನೀಡಿದರು. ಶಿರಸಿಯಲ್ಲಿ ಉಪ ವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ ಟಿವಿಯೊಂದರಲ್ಲಿ ವಿಭಾಗಾಧಿಕಾರಿ ಜಗದೀಶ್ ಹಠಾತ್ ಮರಣ ಎಂಬ ಬ್ರೇಕಿಂಗ್ ನ್ಯೂಸ್ ಬಂದಿತ್ತು. ಕ್ಷೇತ್ರದ‌ ಶಾಸಕರು ಮಂತ್ರಿಯಾಗಿದ್ದರು. ‌ಅವರು ಗಾಬರಿಯಿಂದ ವಿಚಾರಿಸಿದ್ದರು. ನನ್ನ ಪತ್ನಿ, ಪೋಷಕರು ನೋಡಿದ್ದರೆ ಅವರಿಗೆ ಹೃದಯಾಘಾತವಾಗುತ್ತಿತ್ತೇನೋ ಎಂದು ಆತಂಕ ವ್ಯಕ್ತಪಡಿಸಿದರು. ‌ಯಾವುದೇ ಸುದ್ದಿ ನೀಡುವ ಮುನ್ನ ಎರಡೆರಡು ಬಾರಿ ಖಚಿತಪಡಿಸಿಕೊಳ್ಳಿ” ಎಂದುಸಲಹೆನೀಡಿದರು.

“ಕಳೆದ 14 ವರ್ಷಗಳ ತಮ್ಮ ಸರ್ಕಾರಿ ಸೇವಾವಧಿಯಲ್ಲಿ ಸಂಘರ್ಷ ಮಾಡಿಕೊಂಡಿಲ್ಲ. ಮಾಧ್ಯಮಗಳಿಂದ ಸರ್ಕಾರದ ನೀತಿ ನಿರೂಪಣೆಯನ್ನು ತಕ್ಷಣ ತಿಳಿಸುವುದು ಸಾಧ್ಯ. ನಮ್ಮದು ದೊಡ್ಡ ಪ್ರಜಾಪ್ರಭುತ್ವ. ‌ಮಾಧ್ಯಮ‌ ನಾಲ್ಕನೆ ಅಂಗ. ಒಂದಿಷ್ಟು ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಸ್ವಯಂ ಪರಿವೀಕ್ಷಣೆ, ಸ್ವಯಂ ನಿಯಂತ್ರಣ ಇರಬೇಕು” ಎಂದರು.

“ಪತ್ರಕರ್ತರು ಅಂದರೆ ವರದಿ ಮಾಡುವುದು. ಆದರೆ ಕೆಲವರು ನ್ಯೂಸ್ ಕ್ರಿಯೇಟ್ ಮಾಡುತ್ತಾರೆ. ಇದು ಸರಿಯಾದ ಕೆಲಸವಲ್ಲ. ಇದ್ದಿದ್ದನ್ನು ವರದಿ ಮಾಡಬೇಕು. ‌ಇದರಿಂದ ಸಮಾಜವನ್ನು ಎಚ್ಚರಿಸಬೇಕು. ಮಾಧ್ಯಮದವರು ಸರ್ಕಾರದ ರಚನಾತ್ಮಕ ಟೀಕಾಕಾರರು. ಪ್ರತಿಪಕ್ಷಗಳ ಮಿತ್ರರು ಎಂದು ಅಭಿಪ್ರಾಯ ಪಟ್ಟರು. ಸಮಾಜದ‌ ಕಣ್ಣುಕಿವಿ ಮಾಧ್ಯಮ.‌ ಇವುಗಳಿಂದ ಎಷ್ಟೋ ಸಮಸ್ಯೆಗಳು ಬಗೆಹರಿದಿವೆ”‌ ಎಂದರು.

ಖ್ಯಾತನಟ ರಮೇಶ್ ಅರವಿಂದ್ ಮಾತನಾಡಿದರು. “ನಾನು ಜನರಿಗೆ ಗೊತ್ತಾಗಿದ್ದು ಮಾಧ್ಯಮಗಳಿಂದ. ಮೀಡಿಯಾದಿಂದ ಅಪಾರ ಜನರನ್ನು ತಲುಪುತ್ತೇವೆ. ಅದು ಶಕ್ತಿ, ಪದಗಳ ಜಾದೂ. ಮೈಂಡ್ ಬದಲಾಯಿಸುವ ಶಕ್ತಿಯಿದೆ. ನಾನು ಎಡವಿದಾಗ ಮಾಧ್ಯಮ‌ ಮಿತ್ರರು ತಿದ್ದಿದ್ದಾರೆ. ಸೋಶಿಯಲ್‌ ಮೀಡಿಯಾ ಬಂದ ನಂತರ ಎಲ್ಲರೂ ಮೀಡಿಯಾದವರೇ ಆಗಿದ್ದಾರೆ. ಪ್ರತಿಯೊಬ್ಬರಿಗೂ ಅಲ್ಲಿ ಅವಕಾಶವಿದೆ. ವೇದಿಕೆಯಿದೆ. ಅದು ಮೈಕ್ ಆಗಿದೆ. ಮೀಡಿಯಾ ಇಲ್ಲದಿದ್ದರೆ ಅರಾಜಕತೆ ಉಂಟಾಗುತ್ತಿತ್ತು” ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನಿರೂಪಿಸಿದರು. “ಕಾರ್ಯನಿರತ ಪತ್ರಕರ್ತರ ಸಂಘದ ಹೋರಾಟದ ಫಲವಾಗಿ ಮಾಧ್ಯಮ ಅಕಾಡೆಮಿ ಅಸ್ತಿತ್ವಕ್ಕೆ ಬಂದಿತು. ಈಗ ಒಂದು ಕೋಟಿ ಅನುದಾನ ಬಂದಿದೆ. ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ” ಎಂದರು.

ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ ಎಂಬ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದ ಅವರು, “ಶ್ರಮಿಕ ವರ್ಗ, ರೈತಾಪಿ ವರ್ಗಕ್ಕೆ ಮಾಧ್ಯಮ‌ ಕಂಡರೆ ಭಯವಿಲ್ಲ. ಇದಕ್ಕೆ ಕಾರಣ ಅವರ ಪ್ರಾಮಾಣಿಕತೆ” ಎಂದು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಮಾತನಾಡಿದರು. “ರಾಷ್ಟ್ರೀಯ ‌ದಿನಾಚರಣೆಯನ್ನು ಮಂಗಳೂರಿನಲ್ಲಿ ಮಾಡಬೇಕು ಅಂತ ಇತ್ತು.‌ ಚುನಾವಣೆ ನೀತಿ ಸಂಹಿತೆಯಿಂದದಾಗಿ ಬೆಂಗಳೂರಿನಲ್ಲಿ ಮಾಡಿದೆವು. ಮಾಧ್ಯಮಗಳ ಎಲ್ಲ ವಿಭಾಗದವರು ಬಂದಿದ್ದಾರೆ” ಎಂದರು.

“ಮಾಧ್ಯಮ‌ ಅಕಾಡೆಮಿ 40ನೇ ವರ್ಷದ ಸಂಭ್ರಮದಲ್ಲಿದೆ. 40 ಪುಸ್ತಕ ತರುವ ಯೋಜನೆಯಿದೆ. ಈಗಾಗಲೇ ಆಚರಣೆ ಆರಂಭಿಸಿದ್ದೇವೆ” ಎಂದು ಮಾಹಿತಿ ನೀಡಿದರು. ಹಿರಿಯ ಪತ್ರಕರ್ತರು, ಮಾಧ್ಯಮ‌ ಅಕಾಡೆಮಿಯ ಸದಸ್ಯರುಗಳು ಹಾಜರಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ! ಶಿರಸಿ-ಅಂಕೋಲಾ ರಸ್ತೆ ಬಂದ್!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ‌ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ೨೪ ಗಂಟೆಗಳಲ್ಲಿ ನಿರಂತರ ಮಳೆಯಾಗಿದೆ. ಇದರ ಪರಿಣಾಮ ಶಿರಸಿ-ಅಂಕೋಲಾ ಮಾರ್ಗದ ಮಧ್ಯೆ ಗುಡ್ಡ...

Recommended For You

About the Author: Kanneshwar Naik

Leave a Reply

Your email address will not be published. Required fields are marked *