ಉ.ಕ.ದಲ್ಲಿ ಇಸ್ಪೀಟ್‌ ಮಾಫಿಯಾ…! ಭಟ್ಕಳ: ಮುಸುಕುಧಾರಿಗಳಿಂದ ಪತ್ರಕರ್ತನ ಮೇಲೆ ಹಲ್ಲೆ, ವ್ಯಾಪಕ ಖಂಡನೆ

ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ಪತ್ರಕರ್ತ ರಾಘು ಯಾನೆ ಅರ್ಜುನ್ ಮಲ್ಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಸೇರಿದ್ದಾರೆ.

ಭಟ್ಕಳ: ತನ್ನ ಕೆಲಸ ಮುಗಿಸಿ ಮನೆಗೆ ಬೈಕ್​​​ನಲ್ಲಿ ಬರುತ್ತಿದ್ದ ಪತ್ರಕರ್ತನ ಮೇಲೆ ಹಿಂದಿನಿಂದ ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ರಸ್ತೆಗೆ ತಳ್ಳಿ, ಹಲ್ಲೆ ನಡೆಸಿದ ಘಟನೆ ಭಟ್ಕಳದಲ್ಲಿ ನಡೆಯಿತು.

ರಾಘು ಯಾನೆ ಅರ್ಜುನ್ ಮಲ್ಯ (30) ಹಲ್ಲೆಗೊಳಗಾದ ಪತ್ರಕರ್ತ. ದುಷ್ಕರ್ಮಿಗಳು ಮರದ ರೀಪು ಹಾಗು ರಾಡ್​​​ಗಳಿಂದ ಹಲ್ಲೆ ಮಾಡಿದ್ದಾರೆ. ಅರ್ಜುನ್ ಅವರ ಎಡಗೈ‌ನ ನಾಲ್ಕು ಕಡೆಗಳಲ್ಲಿ ಮೂಳೆ ಮುರಿತಗೊಂಡಿದೆ. ಅಲ್ಲದೇ ಎಡಗಾಲು ಸಹ ಮುರಿದಿದೆ. ರಾಡ್​​​ನಿಂದ ತಲೆಗೆ ಹಲವು ಬಾರಿ ಹಲ್ಲೆ ಮಾಡಿದ್ದು, ಅರ್ಜುನ್ ಹೆಲ್ಮೆಟ್ ಧರಿಸಿದ್ದರಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

ಬೆಳಕೆಯ ನಿವಾಸಿ ಅರ್ಜುನ್ ಯಾನೆ ರಾಘು ಕಳೆದ‌ ಕೆಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಭಟ್ಕಳದ ಪುರಸಭೆ ಕಟ್ಟಡದಲ್ಲಿ ಕಚೇರಿ‌ ಹೊಂದಿರುವ ಅರ್ಜುನ್ ‘ಕರಾವಳಿ ಸಮಾಚಾರ್’ ಎನ್ನುವ ವೆಬ್ ಪೋರ್ಟಲ್ ಸಂಪಾದಕರಾಗಿದ್ದಾರೆ. ಕೆಲವು‌ ದಿನಗಳ ಹಿಂದೆ ರಿಕ್ರಿಯೇಷನ್ ಕ್ಲಬ್​​ನಿಂದಾಗುವ ಸಮಸ್ಯೆಗಳ ಬಗ್ಗೆ ನಿಷ್ಪಕ್ಷಪಾತ ವರದಿ ಮಾಡಿದ್ದರು.

ಕಳೆದ ಎರಡು ದಿನಗಳಿಂದ ಕೆಲವು ವ್ಯಕ್ತಿಗಳು ಅರ್ಜುನ್‌ನನ್ನು ಹಿಂಬಾಲಿಸುತ್ತಿರುವುದನ್ನು ಗಮನಿಸಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಗುರುವಾರ ಸಂಜೆ ಕೆಲಸ ಮುಗಿಸಿ ಬೈಕ್​​ನಲ್ಲಿ ವಾಪಸ್​​ ಆಗುತ್ತಿದ್ದರು. ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ ನಿರ್ಜನ ಪ್ರದೇಶದಲ್ಲಿ ಬರುತ್ತಿದ್ದ ವೇಳೆ, ಹಿಂದಿನಿಂದ ಓವರ್ ಟೇಕ್ ಮಾಡಿ ಬಂದ ಬೈಕ್​​ಗಳಲ್ಲಿ ಹಿಂದೆ ಕುಳಿತವರ ಪೈಕಿ ಒಬ್ಬ ಬಲವಾಗಿ ಅರ್ಜುನ್ ಅವರ ಬೈಕ್​ ಅ​ನ್ನು ತಳ್ಳಿದ್ದಾನೆ.

ನಿಯಂತ್ರಣ ಕಳೆದುಕೊಂಡ ಅರ್ಜುನ್ ಬೈಕ್‌ಸಮೇತ ರಸ್ತೆಗೆ ಬಿದ್ದಿದ್ದಾರೆ. ಆಗ ಆರು ಜನರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಬೊಬ್ಬೆ ಕೇಳಿ ಸ್ಥಳೀಯರು ಓಡಿ ಬಂದಾಗ ರಾಡ್, ರೀಪುಗಳನ್ನು ಅಲ್ಲಿಯೇ ಬಿಟ್ಟು ದುಷ್ಕರ್ಮಿಗಳು ಬೈಕ್​​​ನಲ್ಲಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲುಬು ಮತ್ತು ಮೂಳೆ ತಜ್ಞ ದಿನೇಶ್ ಕುಮಾರ್ ಶುಕ್ರವಾರ ಶಸ್ತ್ರಚಿಕಿತ್ಸೆ ನಡೆಸುವುದಾಗಿ ತಿಳಿಸಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆ ಎಸ್​ಐ ಭರತ್ ಹಾಗು ಸಿಬ್ಬಂದಿ ಮಲ್ಲಿಕಾರ್ಜುನ್ ನಾಯ್ಕ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತ್ರಕರ್ತರಿಂದ ಖಂಡನೆ: ಅರ್ಜುನ್​ ಮಲ್ಯ ಅವರ ಮೇಲಿನ ಹಲ್ಲೆಯನ್ನು ಭಟ್ಕಳ, ಉತ್ತರ ಕನ್ನಡ ಹಾಗು ಕುಂದಾಪುರದ ಪತ್ರಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಪತ್ರಕರ್ತರು ತಮ್ಮ ಕರ್ತವ್ಯವನ್ನು ನಿರ್ಭೀತಿಯಿಂದ ಮಾಡಲು ಅವಕಾಶ ಸಿಗಬೇಕು. ಹೀಗೆ ದುಷ್ಕರ್ಮಿಗಳು ಕಾನೂನನ್ನು ಪದೇ ಪದೇ ಕೈಗೆ ತೆಗೆದುಕೊಂಡು ಹಲ್ಲೆ ನಡೆಸಿದರೆ ಪತ್ರಕರ್ತರಿಗೆ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತದೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳು ಗಮನಹರಿಸಿ ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. (ಈಟಿಬಿ.ಕೆ.)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *