ಬನವಾಸಿ ವ್ಯಾಪಾರಿಯ ಚಿನ್ನದ ಚೀಲವನ್ನು ವಾರಸುದಾರರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದ ಸಿದ್ದಾಪುರದ ತರಕಾರಿ ವ್ಯಾಪಾರಿ!

ಸಿದ್ಧಾಪುರ, ನಗರದಲ್ಲಿ ಕಳೆದುಹೋಗಿದ್ದ ಎರಡು ಲಕ್ಷ ರೂಪಾಯಿ ಮೌಲ್ಯದ ಬಂಗಾರದ ಆಭರಣಗಳ ಚೀಲವೊಂದನ್ನು ಪೊಲೀಸರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಇಲ್ಲಿಯ ತರಕಾರಿ ವ್ಯಾಪಾರಿಗೆ ಸಾರ್ವಜನಿಕ ಪ್ರಶಂಸೆ ದೊರೆತಿದೆ.

ಬನವಾಸಿ ಮೂಲದ ವ್ಯಾಪಾರಿ ವಿದ್ಯಾಧರ್‌ ಕೊಚೇರಿ ಈಗ ಇಲ್ಲಿಯ ಹಾಳದಕಟ್ಟಾ ನಿವಾಸಿಯಾಗಿದ್ದು ಸಿದ್ಧಾಪುರ ಸಂತೆ ಮಾರುಕಟ್ಟೆಯಲ್ಲಿ ತಮ್ಮ ಆಭರಣಗಳ ಚೀಲ ಕಳೆದುಕೊಂಡಿದ್ದರು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ ಹುಡುಕುತಿದ್ದಾಗ ಇಲ್ಲಿಯ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ಅವರಗುಪ್ಪಾದ ಗಣಪತಿ ಬಾಳಾ ನಾಯ್ಕ ತಮಗೆ ದೊರೆತ ಈ ಆಭರಣಗಳ ಚೀಲವನ್ನು ಪೊಲೀಸರಿಗೆ ನೀಡಿ ಸನ್ಮತಿ ವಿದ್ಯಾಧರ್‌ ಕೊಚೇರಿಯವರಿಗೆ ಹಸ್ತಾಂತರಿಸಿದರು.

ತರಕಾರಿ ವ್ಯಾಪಾರಿಯ ಪ್ರಾಮಾಣಿಕತೆಗೆ ಪೊಲೀಸರು ಮತ್ತು ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಕಾಂಗ್ರೆಸ್‌ ನಲ್ಲಿ ಗುರುತಿಸಿಕೊಂಡಿದ್ದ ಸಿದ್ಧಾಪುರ ತ್ಯಾರಸಿಯ ಕೃಷಿಕ ಮಂಜುನಾಥ ನಾಯ್ಕ ಸದ್ಯ ನರಸಂಬಂಧಿ ಭೀಕರ ಕಾಯಿಲೆಯಿಂದ ಬಳಲುತಿದ್ದು ಅವರನ್ನು ಮಂಗಳೂರು ಆಸ್ಫತ್ರೆಗೆ ದಾಖಲಿಸಲಾಗಿದೆ. ಇವರ ಚಿಕಿತ್ಸೆಗೆ ಹತ್ತು ಲಕ್ಷರೂಪಾಯಿಗಳಿಗೂ ಅಧಿಕ ಹಣದ ಅವಶ್ಯಕತೆ ಇದ್ದು ದಾನಿಗಳು, ಇವರ ಹಿತೈಶಿಗಳು ಇವರ ಕುಟುಂಬಸ್ಥರಿಗೆ ಅಗತ್ಯವಿರುವ ಹಣಕಾಸಿನ ನೆರವು ನೀಡಲು ಕೋರಲಾಗಿದೆ. ಸಹಾಯಮಾಡಲಿಚ್ಛಿ ಸುವವರು ಮಂಜುನಾಥ ನಾಯ್ಕರ ಪತ್ನಿ ಅಥವಾ ಅವರ ರಕ್ತಸಂಬಂಧಿಗಳ ಮೂಲಕ ಹಣಕಾಸಿನ ನೆರವು ಒದಗಿಸಬಹುದು.

ಕೃಷಿ ಕಾನೂನುಗಳ ವರದಿಯನ್ನು ನ್ಯಾಯಾಲಯ ಬಿಡುಗಡೆ ಮಾಡದಿದ್ದರೆ ನಾವೇ ಬಿಡುಗಡೆ ಮಾಡುತ್ತೇವೆ: ಸುಪ್ರೀಂ ಕೋರ್ಟ್ ಸಮಿತಿ ಸದಸ್ಯ!

ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

Shetkari Sanghatana President said the panel's report was in 'favour of farmers' and will decide next week on releasing the report

ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸುತ್ತಿದ್ದಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ತಂಡದ ಸದಸ್ಯರೊಬ್ಬರು ವರದಿಯನ್ನು ಸಾರ್ವಜನಿಕರ ಮುಂದೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಈಗಾಗಲೇ ಕಾಯ್ದೆಗೆ ಸಂಬಂಧಿಸಿದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.ಇದೀಗ ಕೇಂದ್ರ ಸರ್ಕಾರವೇ ಕಾಯ್ದೆಯನ್ನು ಹಿಂಪಡೆಯುವುದರಿಂದ ಈ ವರದಿಯ ಉದ್ದೇಶವೇನೂ ಇಲ್ಲದಾಗಿದೆ, ಸುಪ್ರೀಂ ಕೋರ್ಟ್ ವರದಿ ಬಿಡುಗಡೆ ಮಾಡದಿದ್ದರೆ ನಾವೇ ಸಾರ್ವಜನಿಕರ ಮುಂದಿಡುತ್ತೇವೆ ಎಂದಿದ್ದಾರೆ.

ಸಮಿತಿಯ ವರದಿ ರೈತರ ಪರವಾಗಿದ್ದಿತ್ತು. ಮುಂದಿನ ವಾರ ವರದಿಯನ್ನು ಬಿಡುಗಡೆ ಮಾಡುವುದಾಗಿ ಶೆಟ್ಕರಿ ಸಂಘಟನೆ ಅಧ್ಯಕ್ಷ ಅನಿಲ್ ಜೆ ಘನ್ವಾಟ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳ ಬಗ್ಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿ ಅಧ್ಯಯನ ಮಾಡಿ ಮೂವರು ಸದಸ್ಯರನ್ನೊಳಗೊಂಡ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಮಿತಿ ಕಳೆದ ಮಾರ್ಚ್ 19ರಂದು ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿತ್ತು.

ಸಮಿತಿಯ ವರದಿಯನ್ನು ಬಿಡುಗಡೆ ಮಾಡಿದರೆ ರೈತರಿಗೆ ಮನದಟ್ಟಾಗುತ್ತದೆ, ಸರ್ಕಾರ ವಿರುದ್ಧ ಮಾಡುತ್ತಿರುವ ಪ್ರತಿಭಟನೆ ನಿಲ್ಲುತ್ತದೆ ಎಂದು ಘನವಟ್ ಕಳೆದ ಸೆಪ್ಟೆಂಬರ್ 1 ರಂದು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರದ ಮೂಲಕ ವಿನಂತಿ ಮಾಡಿಕೊಂಡಿದ್ದರು. ಆದರೆ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಲಾಗಿಲ್ಲ.

ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಘನವಟ್, ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದರೆ ನಾವು ಸಲ್ಲಿಸಿರುವ ವರದಿಗೆ ಯಾವುದೇ ಅರ್ಥವಿಲ್ಲ. ಸುಪ್ರೀಂ ಕೋರ್ಟ್ ಜನರಿಗೆ ನಮ್ಮ ವರದಿಯನ್ನು ಬಿಡುಗಡೆ ಮಾಡದಿದ್ದರೆ ನಾನು ಬಹಿರಂಗಪಡಿಸುತ್ತೇನೆ ಎಂದಿರುವ ಅವರು ವರದಿ ತಯಾರಿಸಲು ಮೂರು ತಿಂಗಳು ತೆಗೆದುಕೊಂಡಿದ್ದೆವು ಎನ್ನುತ್ತಾರೆ. 

ರೈತರ ಹಿತದೃಷ್ಟಿಯಿಂದ ಸಮಿತಿಗಳ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲು ಮುಂದಾಗುತ್ತೇನೆ. ಸಮಿತಿ ಮಾಡಿರುವ ಶಿಫಾರಸ್ಸುಗಳನ್ನು ರೈತರು, ಪತ್ರಿಕೆಗಳು ಮತ್ತು ಸರಕಾರ ಅರಿಯಬೇಕು,’’ ಎಂದು ಹೇಳಿದ ಅವರು, ವರದಿಯು ರೈತರ ಪರವಾಗಿದೆ. ಕೃಷಿಗೆ ಸಂಬಂಧಿಸಿದ ಭವಿಷ್ಯದ ಕಾನೂನುಗಳನ್ನು ರೂಪಿಸಲು ವರದಿಯು ಉತ್ತಮ ಉಲ್ಲೇಖವಾಗಲಿದೆ ಎಂದು ಹೇಳಿದ್ದಾರೆ.  (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇನ್ನಿಲ್ಲ ಕಸ್ತೂರಿ ರಂಗನ್‌ ಕಿರಿಕಿರಿ……

ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ...

ಉತ್ತರ ಕನ್ನಡದ 4 ಜನ ಉತ್ತಮ ಕಂದಾಯ ಅಧಿಕಾರಿಗಳು

ಉತ್ತರ ಕನ್ನಡ ಜಿಲ್ಲೆಯ ಎರಡು ಜನ ತಹಸಿಲ್ಧಾರರು ಮತ್ತು ಇಬ್ಬರು ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಉತ್ತಮ ಕಂದಾಯ ಅಧಿಕಾರಿಗಳಾಗಿ ಗುರುತಿಸಲ್ಪಟ್ಟಿದ್ದಾರೆ. ಶಿರಸಿ ಮತ್ತು ಸಿದ್ದಾಪುರ...

ಕನ್ನಡ ಜ್ಯೋತಿ ರಥಯಾತ್ರೆ…. ‍‍& ವಿವಾದ!

ಡಿಸೆಂಬರ್‌ ನಲ್ಲಿ ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಇದೇ ತಿಂಗಳು ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಸಿದ್ಧಾಪುರದ ಭುವನಗಿರಿಯಿಂದ ಹೊರಟು ಜಿಲ್ಲೆ...

ಬ್ರಷ್ಟಾಚಾರ ಸಾಬೀತು…. ಬಿಜೆಪಿ ಮುಖಂಡೆಗೆ ಶಿಕ್ಷೆ, ದಂಡ

ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ...

ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಮನವಿ, ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜನಸಾಮಾನ್ಯರ ಕೆಲಸ ಮಾಡುವ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಸೋಮುವಾರದಿಂದ ಆಧಾರ್‌ ಸೀಡ್‌,ಲ್ಯಾಂಡ್‌ ಬೀಟ್‌, ಬಗುರ್‌ ಹುಕುಂ, ಹಕ್ಕುಪತ್ರ, ಸೇರಿದಂತೆ ಕೆಲವು ಸೇವೆಗಳನ್ನು ನೀಡದಿರಲು...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *