‘ಶೂನ್ಯ ಬಜೆಟ್ ಸಹಜ ಕೃಷಿ’ ಜಾರಿ: ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿ ರೈತರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ವಿಧಾನವನ್ನು ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ.

Farmers celebrating and distribute sweets after PM Modi decided to repeal all three farm laws, at Ghazipur border in New Delhi on Friday.

ನವದೆಹಲಿ: ಕಳೆದ ಒಂದೂವರೆ ವರ್ಷದಿಂದ ರೈತರು-ಕೇಂದ್ರ ಸರ್ಕಾರ, ವಿರೋಧ ಪಕ್ಷಗಳ ನಾಯಕರ ಮಧ್ಯೆ ತೀವ್ರ ತಿಕ್ಕಾಟ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದ್ದ 3 ಕೃಷಿ ತಿದ್ದುಪಡೆ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು ಎಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಶೂನ್ಯ ಬಜೆಟ್ ನೈಸರ್ಗಿಕ ಕೃಷಿ ವಿಧಾನವನ್ನು ಜಾರಿಗೆ ತರುವುದಾಗಿ ಪ್ರಕಟಿಸಿದ್ದಾರೆ.

ಏನಿದು ಶೂನ್ಯ ಬಜೆಟ್ ನೈಸರ್ಗಿಕ ಕೃಷಿ?: ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಇನ್ನಷ್ಟು ದಕ್ಷವಾಗಿ ತರಲು ಮತ್ತು ಇತರ ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಸಮಿತಿಯೊಂದನ್ನು ರಚಿಸಲಿದೆ. ಅದರಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ರೈತರು, ವಿಜ್ಞಾನಿಗಳು, ಆರ್ಥಿಕ ತಜ್ಞರು ಇರುತ್ತಾರೆ. ದೇಶದ ರೈತರ ಪರವಾಗಿ ನಮ್ಮ ಕೆಲಸ ಮುಂದುವರಿಯುತ್ತದೆ ಎಂದು ಕೂಡ ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ದೇಶದ ಕೃಷಿ ಕ್ಷೇತ್ರದ ಅವಶ್ಯಕತೆಗಳನ್ನು ಮತ್ತು ಬೆಳೆಗಳನ್ನು ಹೆಚ್ಚಿಸಲು, ಬೆಳೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಬದಲಾಯಿಸಲು ಹೀಗೆ ಎಲ್ಲಾ ವಿಷಯಗಳ ಬಗ್ಗೆ ಭವಿಷ್ಯದ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಈ ಸಮಿಯನ್ನು ರಚಿಸಲಾಗುತ್ತದೆ. 

ಇಂದು ರೈತರ ಬಗ್ಗೆ ಪ್ರಧಾನಿ ಮೋದಿ ಭಾಷಣದಲ್ಲಿ ಹೇಳಿದ್ದೇನು?: ಇಂದು ಗುರುನಾನಕ್ ಜಯಂತಿ. ದೇಶ ಸೇವೆಯ ಹಾದಿ ಹಿಡಿದರೆ ಮಾತ್ರ ಬದುಕು ಸುಸ್ಥಿತಿಗೆ ಬರಲು ಸಾಧ್ಯ. ನಮ್ಮ ಸರ್ಕಾರವು ಜನರ ಜೀವನವನ್ನು ಸುಲಭಗೊಳಿಸಲು ಈ ಸೇವಾ ಭಾವನೆಯೊಂದಿಗೆ ಕೆಲಸ ಮಾಡುತ್ತಿದೆ.

2014 ರಲ್ಲಿ ನಾನು ಪ್ರಧಾನಿಯಾದಾಗಿನಿಂದ ನಮ್ಮ ಸರ್ಕಾರ ರೈತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುತ್ತಾ ಬಂದಿದ್ದೇವೆ. ಇಂದು ನಮ್ಮ ದೇಶದಲ್ಲಿ 100 ಮಂದಿ ರೈತರಲ್ಲಿ 80ರಷ್ಟು ರೈತರು ಸಣ್ಣ ಹಿಡುವಳಿ ರೈತರಾಗಿದ್ದು 2 ಹೆಕ್ಟೇರ್ ಗಿಂತಲೂ ಕಡಿಮೆ ಭೂಮಿ ಹೊಂದಿದ್ದಾರೆ. ಅಂತವರ ಸಂಖ್ಯೆ 10 ಕೋಟಿಗೂ ಅಧಿಕವಾಗಿದೆ. ಇಷ್ಟು ಸಣ್ಣ ಜಮೀನಿನಲ್ಲಿ ಅವರ ಜೀವನ ಸಾಗಬೇಕು. 

ಕಷ್ಟಪಟ್ಟು ಜೀವನ ನಡೆಸುವ ರೈತರ ಕಠಿಣ ಶ್ರಮ ವ್ಯರ್ಥವಾಗಲು ಸರ್ಕಾರ ಬಿಡುವುದಿಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಮಾರುಕಟ್ಟೆಗಳ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುತ್ತೇವೆ. ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದ್ದು ಮಾತ್ರವಲ್ಲದೆ ದಾಖಲೆಯ ಮಟ್ಟದಲ್ಲಿ ಸರ್ಕಾರಿ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಸರ್ಕಾರದಿಂದ ಬೆಳೆಗಳ ಸಂಗ್ರಹಣೆ ಕಳೆದ ಹಲವು ದಶಕಗಳ ದಾಖಲೆಗಳನ್ನು ಮುರಿದಿದೆ ಎಂದು ಪ್ರಧಾನಿ ಹೇಳಿದರು.

ರೈತರಿಗೆ ಕೈಗೆಟಕುವ ದರದಲ್ಲಿ ಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸುವ ಕೆಲಸ ನಮ್ಮ ಸರ್ಕಾರ ಮಾಡಿದೆ. ಇಂತಹ ಅಂಶಗಳು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕಾರಣವಾಗಿವೆ. ಫಸಲ್ ಬಿಮಾ ಯೋಜನೆಯನ್ನು ಬಲಪಡಿಸಿದ್ದೇವೆ, ಹೆಚ್ಚಿನ ರೈತರನ್ನು ಅದರ ಅಡಿಯಲ್ಲಿ ತಂದಿದ್ದೇವೆ ಎಂದು ತಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳುವ ಪ್ರಯತ್ನವನ್ನು ಪ್ರಧಾನಿ ಮಾಡಿದರು.

ನಾನು ಏನೇ ಮಾಡಿದರೂ ರೈತರಿಗಾಗಿ ಮಾಡಿದ್ದೇನೆ. ನಾನು ಮಾಡುತ್ತಿರುವುದು ಈ ದೇಶಕ್ಕಾಗಿ. ನಿಮ್ಮ ಆಶೀರ್ವಾದದಿಂದ ನಾನು ನನ್ನ ಶ್ರಮದಲ್ಲಿ ಕೊರತೆಯಾಗದಂತೆ ಮತ್ತು ಕಡಿಮೆಯಾಗದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನಿಮ್ಮ ಕನಸುಗಳು, ರಾಷ್ಟ್ರದ ಕನಸುಗಳು ನನಸಾಗಲು ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡುವುದಾಗಿಯೂ ಪ್ರಧಾನಿ ಭಾಷಣದಲ್ಲಿ ಹೇಳಿದರು. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *