ಕರೋನಾ ಪರಿಣಾಮ- ಟಿ.ಎಂ.ಎಸ್.ಗೆ ಲಾಭ,ಪ್ಯಾಡಿ ಸೊಸೈಟಿಗೆ ಹಾನಿ

ಭಾರತ ಸೇರಿದಂತೆ, ವಿಶ್ವದಾದ್ಯಂತ ಕರೋನಾ ವಿಪರೀತ ಪರಿಣಾಮ ಬೀರಿದೆ. ಸಣ್ಣ ಉದ್ದಿಮೆಗಳು, ವ್ಯಾಪಾರಿಗಳು ಹಾನಿಗೆ ಒಳಗಾಗಿ ವ್ಯಾಪಾರ, ಉದ್ಯೋಗ, ಉದ್ದಿಮೆಗಳನ್ನೂ ಬದಲಾಯಿಸಿದ್ದಾರೆ.ಉ.ಕ. ಸಿದ್ಧಾಪುರದಲ್ಲಿ ಸಹಕಾರಿ ಕ್ಷೇತ್ರದ ಮೇಲೆ ಕರೋನಾ ನೇರ ಪರಿಣಾಮ ಬೀರಿದೆ. ಬಡಸಂಸ್ಥೆಯಾದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಂಘ ಕಳೆದ ವಾರ್ಷಿಕ ವರ್ಷದಲ್ಲಿ ಲಕ್ಷಾಂತರ ರೂಪಾಯಿಗಳ ಹಾನಿ ಅನುಭವಿಸಿದರೆ ಟಿ.ಎಂ.ಎಸ್. ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಲಾಭ ಮಾಡಿದೆ.

ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳಸಹಕಾರಿ ಮಾರಾಟ ಸಂಘ ೨೦೨೦-೨೧ ಸಾಲಿನಲ್ಲಿ೫.೭೮ ಸಾವಿರ ನಿಕ್ಕಿ ಲಾಭ ಗಳಿಸಿದೆ. ಈ ಟಿ.ಎಂ.ಎಸ್.ತನ್ನ ೭೪ ವರ್ಷಗಳ ಇತಿಹಾಸದಲ್ಲಿ ಈ ವರ್ಷ ಗರಿಷ್ಠ ಲಾಭಗಳಿಸಿದೆ ಎಂದು ಅದರ ಆಡಳಿತ ಸಮೀತಿ ಹೇಳಿದೆ. ಟಿ.ಎಂಎಸ್.‌ ನಲ್ಲಿ ಅಡಿಕೆ ವ್ಯಾಪಾರ, ಮಾರಾಟ, ಸಾಲ,ಇತರ ಜೀವನಾವಶ್ಯಕ ವಸ್ತುಗಳ ಮಾರಾಟ- ಖರೀದಿ ವ್ಯವಹಾರಗಳಿವೆ. ಟಿ.ಎಂ.ಎಸ್.‌ ತನ್ನ ಸದಸ್ಯರಿಗೆ ಸಾಲ ನೀಡುತಿದ್ದು ಸಂಘದ ಏಳುಸಾವಿರಕ್ಕಿಂತ ಹೆಚ್ಚಿನ ಸದಸ್ಯರು ಅಡಿಕೆ ಮಾರಾಟ, ಇತರ ಖರೀದಿಗಳನ್ನು ಮಾಡುವ ಮೂಲಕ ಹೆಚ್ಚಿನ ವ್ಯವಹಾರ ಮಾಡಿರುವುದರಿಂದ ಟಿ.ಎಂ.ಎಸ್.‌ ಗೆ ದಾಖಲೆಯ ಲಾಭವಾಗಿದೆ.

ಸಿದ್ಧಾಪುರದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಂಘ೫೨೪ ಸದಸ್ಯರನ್ನು ಹೊಂದಿ ೩.೧೦ ಲಕ್ಷ ಲಾಭ ಗಳಿಸಿದೆ. ಕರೋನಾ ಅವಧಿ, ಲಾಕ್‌ ಡೌನ್‌ ಹಿನ್ನೆಲೆಗಳಲ್ಲಿ ಅಕ್ಕಿ ಮಾಡುವ ಪ್ರಮಾಣ ಮತ್ತು ಸದಸ್ಯರ ವ್ಯವಹಾರ ಕಡಿಮೆ ಇದ್ದುದರಿಂದ ಈ ವರ್ಷ ಲಕ್ಷಾಂತರ ಪ್ರಮಾಣದಲ್ಲಿ ಲಾಭ ಕಡಿಮೆಯಾಗಿದೆ ಎಂದು ಪ್ಯಾಡಿ ಸೊಸೈಟಿ ಅಧ್ಯಕ್ಷ ರಮಾನಂದ ಹೆಗಡೆ ಮಳಗುಳಿ ಹೇಳಿದ್ದಾರೆ. ಈ ಸಹಕಾರಿ ಸಂಸ್ಥೆಗಳ ವ್ಯವಹಾರ, ಲಾಭಗಳ ಲೆಕ್ಕದಲ್ಲಿ ಬಡ ಸಂಸ್ಥೆ, ಬಡ ಸದಸ್ಯರ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಹಾನಿ ಅನುಭವಿಸಿದ್ದರೆ, ಶ್ರೀಮಂತ ಸಂಸ್ಥೆ ಟಿ.ಎಂ.ಎಸ್.‌ ಲಾಭ ಗಳಿಸಿದೆ ಇದರಿಂದ ಕರೋನಾ ಹಾನಿ, ಪರಿಣಾಮ ಶ್ರೀಮಂತರಿಗಿಂತ ಬಡವರನ್ನೇ ಬಾಧಿಸಿದೆ ಎನ್ನುವಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *