ಕರೋನಾ ಪರಿಣಾಮ- ಟಿ.ಎಂ.ಎಸ್.ಗೆ ಲಾಭ,ಪ್ಯಾಡಿ ಸೊಸೈಟಿಗೆ ಹಾನಿ

ಭಾರತ ಸೇರಿದಂತೆ, ವಿಶ್ವದಾದ್ಯಂತ ಕರೋನಾ ವಿಪರೀತ ಪರಿಣಾಮ ಬೀರಿದೆ. ಸಣ್ಣ ಉದ್ದಿಮೆಗಳು, ವ್ಯಾಪಾರಿಗಳು ಹಾನಿಗೆ ಒಳಗಾಗಿ ವ್ಯಾಪಾರ, ಉದ್ಯೋಗ, ಉದ್ದಿಮೆಗಳನ್ನೂ ಬದಲಾಯಿಸಿದ್ದಾರೆ.ಉ.ಕ. ಸಿದ್ಧಾಪುರದಲ್ಲಿ ಸಹಕಾರಿ ಕ್ಷೇತ್ರದ ಮೇಲೆ ಕರೋನಾ ನೇರ ಪರಿಣಾಮ ಬೀರಿದೆ. ಬಡಸಂಸ್ಥೆಯಾದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಂಘ ಕಳೆದ ವಾರ್ಷಿಕ ವರ್ಷದಲ್ಲಿ ಲಕ್ಷಾಂತರ ರೂಪಾಯಿಗಳ ಹಾನಿ ಅನುಭವಿಸಿದರೆ ಟಿ.ಎಂ.ಎಸ್. ಕಳೆದ ಆರ್ಥಿಕ ವರ್ಷದಲ್ಲಿ ದಾಖಲೆಯ ಲಾಭ ಮಾಡಿದೆ.

ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳಸಹಕಾರಿ ಮಾರಾಟ ಸಂಘ ೨೦೨೦-೨೧ ಸಾಲಿನಲ್ಲಿ೫.೭೮ ಸಾವಿರ ನಿಕ್ಕಿ ಲಾಭ ಗಳಿಸಿದೆ. ಈ ಟಿ.ಎಂ.ಎಸ್.ತನ್ನ ೭೪ ವರ್ಷಗಳ ಇತಿಹಾಸದಲ್ಲಿ ಈ ವರ್ಷ ಗರಿಷ್ಠ ಲಾಭಗಳಿಸಿದೆ ಎಂದು ಅದರ ಆಡಳಿತ ಸಮೀತಿ ಹೇಳಿದೆ. ಟಿ.ಎಂಎಸ್.‌ ನಲ್ಲಿ ಅಡಿಕೆ ವ್ಯಾಪಾರ, ಮಾರಾಟ, ಸಾಲ,ಇತರ ಜೀವನಾವಶ್ಯಕ ವಸ್ತುಗಳ ಮಾರಾಟ- ಖರೀದಿ ವ್ಯವಹಾರಗಳಿವೆ. ಟಿ.ಎಂ.ಎಸ್.‌ ತನ್ನ ಸದಸ್ಯರಿಗೆ ಸಾಲ ನೀಡುತಿದ್ದು ಸಂಘದ ಏಳುಸಾವಿರಕ್ಕಿಂತ ಹೆಚ್ಚಿನ ಸದಸ್ಯರು ಅಡಿಕೆ ಮಾರಾಟ, ಇತರ ಖರೀದಿಗಳನ್ನು ಮಾಡುವ ಮೂಲಕ ಹೆಚ್ಚಿನ ವ್ಯವಹಾರ ಮಾಡಿರುವುದರಿಂದ ಟಿ.ಎಂ.ಎಸ್.‌ ಗೆ ದಾಖಲೆಯ ಲಾಭವಾಗಿದೆ.

ಸಿದ್ಧಾಪುರದ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಂಘ೫೨೪ ಸದಸ್ಯರನ್ನು ಹೊಂದಿ ೩.೧೦ ಲಕ್ಷ ಲಾಭ ಗಳಿಸಿದೆ. ಕರೋನಾ ಅವಧಿ, ಲಾಕ್‌ ಡೌನ್‌ ಹಿನ್ನೆಲೆಗಳಲ್ಲಿ ಅಕ್ಕಿ ಮಾಡುವ ಪ್ರಮಾಣ ಮತ್ತು ಸದಸ್ಯರ ವ್ಯವಹಾರ ಕಡಿಮೆ ಇದ್ದುದರಿಂದ ಈ ವರ್ಷ ಲಕ್ಷಾಂತರ ಪ್ರಮಾಣದಲ್ಲಿ ಲಾಭ ಕಡಿಮೆಯಾಗಿದೆ ಎಂದು ಪ್ಯಾಡಿ ಸೊಸೈಟಿ ಅಧ್ಯಕ್ಷ ರಮಾನಂದ ಹೆಗಡೆ ಮಳಗುಳಿ ಹೇಳಿದ್ದಾರೆ. ಈ ಸಹಕಾರಿ ಸಂಸ್ಥೆಗಳ ವ್ಯವಹಾರ, ಲಾಭಗಳ ಲೆಕ್ಕದಲ್ಲಿ ಬಡ ಸಂಸ್ಥೆ, ಬಡ ಸದಸ್ಯರ ಕೃಷಿ ಹುಟ್ಟುವಳಿಗಳ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಹಾನಿ ಅನುಭವಿಸಿದ್ದರೆ, ಶ್ರೀಮಂತ ಸಂಸ್ಥೆ ಟಿ.ಎಂ.ಎಸ್.‌ ಲಾಭ ಗಳಿಸಿದೆ ಇದರಿಂದ ಕರೋನಾ ಹಾನಿ, ಪರಿಣಾಮ ಶ್ರೀಮಂತರಿಗಿಂತ ಬಡವರನ್ನೇ ಬಾಧಿಸಿದೆ ಎನ್ನುವಂತಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *