ಕೋಲಶಿರ್ಸಿ-ಕಾನಳ್ಳಿ ಭೇಟಿ ಮಾಡಿದ ಕಾಗೇರಿ, ರೈತರಲ್ಲಿ ಆತ್ಮವಿಶ್ವಾಸ ಮೂಡಿಸಲು ಕರೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಅಕಾಲಿಕ ಮಳೆ ರೈತರಿಗೆ ಹಾನಿ ಮಾಡಿದೆ. ಬೆಳೆನಾಶ, ಪ್ರಕೃತಿಯೊಂದಿಗೆ ಸೆಣಸಾಡುತ್ತಿರುವ ರೈತ ಈ ಅಕಾಲಿಕ ಮಳೆಯಿಂದ ಕಂಗಾಲಾಗಿದ್ದು ಕೆಲವೆಡೆ ಆತ್ಮಹತ್ಯೆಗಳು ಕೂಡಾ ನಡೆಯುತ್ತಿವೆ. ಈ ಬಗ್ಗೆ ತೀವೃ ಕಳವಳ ವ್ಯಕ್ತಪಡಿಸಿರುವ ರಾಜ್ಯ ವಿಧಾನಸಭೆಯ ಸ್ಫೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅಕಾಲಿಕ ಮಳೆಯಿಂದ ಹಾನಿಗೊಳಗಾದ ರೈತರಲ್ಲಿ ಆತ್ಮವಿಶ್ವಾಸ ಮೂಡಿಸುವ ಅಗತ್ಯದ ಬಗ್ಗೆ ಪ್ರತಿಪಾದಿಸಿದ್ದಾರೆ.
ತಮ್ಮ ಕ್ಷೇತ್ರ ಶಿರಸಿ-ಸಿದ್ಧಾಪುರಗಳಲ್ಲಿ ಅಕಾಲಿಕ ಮಳೆಯ ಹಾನಿ ಪರಿಶೀಲಿಸಿದ ವಿಧಾನಸಭಾ ಅಧ್ಯಕ್ಷರು ರಾಜ್ಯದ ರೈತರು ಧೃತಿಗೆಡುವ ಅಗತ್ಯವಿಲ್ಲ.ರಾಜ್ಯಸರ್ಕಾರ ನೊಂದ ರೈತರ ಪರವಾಗಿದೆ. ಬೆಳೆವಿಮೆ, ಬೆಳೆಸಮೀಕ್ಷೆ ಇತ್ಯಾದಿ ಸರ್ಕಾರದ ಪ್ರಯತ್ನ, ರೈತರ ಹಿತಕಾಪಾಡುವ ಯತ್ನಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಮಾಡುತ್ತಿದೆ. ಎಂದಿದ್ದಾರೆ.


ಬೆಳೆಸಮೀಕ್ಷೆ, ಬೆಳೆಹಾನಿ ವರದಿ ಮಾಡುವ ಮೂಲಕ ಅಧಿಕಾರಿಗಳು ಸರ್ಕಾರದ ಪರಿಹಾರ, ಬೆಳೆವಿಮೆ, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ದೊರೆಯುವ ಸೌಲಭ್ಯ ಒದಗಿಸಲು ಕೆಲಸ ಮಾಡುತಿದ್ದಾರೆ ಈ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಕ್ಷೇತ್ರ ಸಮೀಕ್ಷೆ ವೇಳೆ ಸ್ಫೀಕರ್‌ ಕಾಗೇರಿಯವರಿಗೆ ರೈತರು ತಮ್ಮ ಬವಣೆ ಹೇಳಿಕೊಂಡರು. ರೈತರ ಅಹವಾಲು, ಅನಿವಾರ್ಯತೆಗಳನ್ನು ಕೇಳಿ ಸಾಂತ್ವನ ಹೇಳಿದ ಅವರು ನಗರ ಗ್ರಾಮೀಣ ಪ್ರದೇಶಗಳೆನ್ನದೆ ರಾಜ್ಯದಾದ್ಯಂತ ಮಳೆ ಹಾನಿ ಗಣನೀಯ ಪ್ರಮಾಣದಲ್ಲಿ ಆಗಿದೆ. ಈ ಹಾನಿ. ತೊಂದರೆಗೆ ಹೆದರದಂತೆ ರೈತರಿಗೆ ಧೈರ್ಯನೀಡುವ ಕೆಲಸವನ್ನು ಸ್ಥಳಿಯ ಜನಪ್ರತಿನಿಧಿಗಳು, ಸಹಕಾರಿ ಕ್ಷೇತ್ರ ಮಾಡಬೇಕು. ಇದಕ್ಕೆ ಅಗತ್ಯ ನೆರವು ನೀಡಲು ಸರ್ಕಾರವನ್ನೂ ಕೋರಬೇಕು ಎಂದರು.
ಸ್ಥಳದಲ್ಲಿದ್ದ ಸ್ಥಳಿಯ ಜನಪ್ರತಿನಿಧಿಗಳು ರೈತರ ಪರವಾಗಿ ತಮ್ಮ ಬೇಡಿಕೆ ಸಲ್ಲಿಸಿದರು.ಇದಕ್ಕೆ ಪ್ರತಿಕ್ರೀಯಿಸಿದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿ,ನ್ಯಾಯ ಒದಗಿಸುವ ಭರವಸೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *