ಮುರುಡೇಶ್ವರ ಈಶ್ವರ ಮೂರ್ತಿ ಸ್ಪೋಟಕ್ಕೆ ಸ್ಕೆಚ್ಚು!?

ಉಗ್ರ ಸಂಘಟನೆ ಪತ್ರಿಕೆಯಲ್ಲಿ ಮುರುಡೇಶ್ವರನ ಭಗ್ನಗೊಂಡ ಪ್ರತಿಮೆ..! ಕರ್ನಾಟಕದ ಪ್ರಸಿದ್ಧ ಯಾತ್ರಾತಾಣದ ಮೇಲೆ ಐಸಿಸ್ ದಾಳಿಗೆ ಸಂಚು?

ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿಗೆ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

murudeshwar shiva idol

ಕಾರವಾರ: ಕರ್ನಾಟಕದ ಪ್ರಸಿದ್ಧ ಯಾತ್ರಾತಾಣಗಳಲ್ಲಿ ಒಂದಾದ ಉತ್ತರ ಕನ್ನಡದ ಮುರುಡೇಶ್ವರ(murudeshwar) ದ ಬೃಹತ್ ಈಶ್ವರ ಪ್ರತಿಮೆ ಚಿತ್ರ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಯ ಪತ್ರಿಕೆಯಲ್ಲಿ ಪ್ರಕಟವಾಗಿದ್ದು, ಇದು ಉಗ್ರ ಸಂಘಟನೆಯ ದಾಳಿ ಸಂಚೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.

ಅಂಶುಲ್ ಸಕ್ಸೇನಾ ಎಂಬುವವರು ಇದನ್ನು ತಮ್ಮ ಖಾತೆಗಳಲ್ಲಿ ಪೋಸ್ಟ್ ಮಾಡಿ ಸರ್ಕಾರಗಳ ಗಮನ ಸೆಳೆಯಲು ಯತ್ನಿಸಿದ್ದಾರೆ. ‘ಐಸಿಸ್’ ಮುಖವಾಣಿ ಪತ್ರಿಕೆ ‘ದಿ ವಾಯ್ಸ್ ಆಫ್ ಹಿಂದ್’ (the Voice of hind)ನಲ್ಲಿ ಮುರುಡೇಶ್ವರದ ಶಿವನ ವಿಗ್ರಹವನ್ನು ಪ್ರಕಟಿಸಲಾಗಿದೆ. ಅದರ ಮೇಲೆ ‘ಇದು ನಕಲಿ ದೇವರನ್ನು ಒಡೆಯುವ ಸಮಯ’ (Its time to Break False Gods) ಎಂಬ ವಾಕ್ಯವನ್ನು ಬರೆಯಲಾಗಿದೆ. ಅಲ್ಲದೆ ಶಿವನ ಪ್ರತಿಮೆಯನ್ನು ಅರ್ಧಕ್ಕೆ ಕತ್ತರಿಸಿ, ತಲೆಯ ಭಾಗದಲ್ಲಿ ಉಗ್ರ ಸಂಘಟನೆಯ ಮಾದರಿಯ ಧ್ವಜ ಹಾರಾಡುತ್ತಿರುವಂತೆ ಚಿತ್ರಿಸಲಾಗಿದೆ.

ಇನ್ನು ಪೋಸ್ಟ್ ನ ಅಧಿಕೃತತೆ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲವಾದರೂ, ಈ ಕುರಿತು ಕೂಡಲೇ ಸುರಕ್ಷಾ ಕ್ರಮ ಕೈಗೊಳ್ಳಬೇಕು ಎಂದು ಅಂಶುಲ್ ಸಕ್ಸೇನಾ ತಮ್ಮ ಪೋಸ್ಟ್‌ನಲ್ಲಿ ಸರ್ಕಾರಗಳನ್ನು ಆಗ್ರಹಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಪೋಟೋ ಮತ್ತು ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆ ಸಂಬಂಧಿಸಿದ ಇಲಾಖೆ ಕ್ರಮವಹಿಸಬೇಕು ಮತ್ತು ಇಂತಹ ದುಷ್ಕೃತ್ಯಕ್ಕೆ ಸರ್ಕಾರ ಅವಕಾಶ ನೀಡಬಾರದು ಎಂಬುದು ಸಾರ್ವಜನಿಕರ ಆಗ್ರಹಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *