ಕಾಗೇರಿಯವರ ಒಕ್ಕಲಿಗರ ಓಲೈಕೆ! ಶಶಿಭೂಷಣರ ದೀವರ ಪ್ರೀತಿ ಹಿಂದೆ ಜಾತಿನಿಂದನೆ ಪ್ರಕರಣ ಇರುವುದು ದುರಂತ!

ಇದೇ ತಿಂಗಳು ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಯುವಘಟಕಗಳ ಅಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಲಾಯಿತು. ಈ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದು ಬಹಿರಂಗ ಗುಟ್ಟು.

ಈ ಪ್ರಕರಣಕ್ಕಿಂತ ಸ್ವಲ್ಪ ಮೊದಲು ಸಿದ್ಧಾಪುರ ಬಿಳಗಿಯಲ್ಲಿ ಕೆಲವು ಪುಂಡರು ದನದ ವ್ಯಾಪಾರಿ ಗೋವಿಂದ ಗೌಡರ ಮೇಲೆ ಹಲ್ಲೆ ನಡೆಸಿದರು.ಈ ಪ್ರಕರಣದಲ್ಲಿ ಪೊಲೀಸರು ಗೋವಿಂದ ಗೌಡರನ್ನು ಹೊಂದಾಣಿಕೆಗೆ ಬರುವಂತೆ ಒತ್ತಡ ತಂದರು.

ಈ ಘಟನೆಗಳಿಗಿಂತ ಸ್ಪಲ್ಪ ಹಿಂದೆ ಸ್ಥಳಿಯ ಶಾಸಕರು ನಾಮಧಾರಿ ಕಲ್ಯಾಣಮಂಟಪಕ್ಕೆ ಮಂಜೂರಿಯಾದ ಅನುದಾನ ತಡೆಹಿಡಿದರು. ನಂತರ ಸರಿಸುಮಾರು 9 ನೇ ಬಾರಿ ಮುಖ್ಯಂಂತ್ರಿಗಳು ನಾಮಧಾರಿ ಸಭಾಭವನಕ್ಕೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಮತ್ತೆ ಸುದ್ದಿಯಾಯಿತು. (ಪ್ರಚಾರ ನೀಡಲಾಯಿತು)

ಈ ಪ್ರಕರಣಗಳನ್ನು ಪ್ರತ್ಯೇಕವಾಗಿ ನೋಡಿದರೆ ಸಂಶಯಕ್ಕೆ ಅವಕಾಶವಿಲ್ಲ ಆದರೆ ಈ ಪ್ರಕರಣಗಳ ಹಿಂದುಮುಂದಿನ ವಿದ್ಯಮಾನಗಳನ್ನು ಅವಲೋಕಿಸಿದರೆ ಸ್ಥಳಿಯ ಶಾಸಕ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ದೊಡ್ಡ ಸಮೂದಾಯಕ್ಕೆ ಸೆಡ್ಡು ಹೊಡೆಯುತ್ತಿರುವಂತೆ ಭಾಸವಾಗುತ್ತಿದೆ.

ಪ್ರಕರಣ ಒಂದು- ಉತ್ತರ ಕನ್ನಡ ಜಿಲ್ಲೆಯ ಬಿ.ಜೆ.ಪಿ. ಕಾಗೇರಿ ಆಪ್ತರಲ್ಲಿ ಪ್ರಮುಖರಾಗಿದ್ದ ಕೆ.ಜಿ.ನಾಯ್ಕ ಹಣಜಿಬೈಲ್‌ ಚುನಾವಣೆ ಮೊದಲು ನಾಮಧಾರಿಗಳಿಗೆ ನಿಗಮ ಮಂಡಳಿ ಅಥವಾ ಪ್ರಮುಖ ಸ್ಥಾನ ಮಾನ ಕೇಳಿ ಕಾಗೇರಿಯವರಿಂದ ದೂರಾಗುವಂತಾಯಿತು.

ಪ್ರಕರಣ 2- ಸಿದ್ಧಾಪುರ ಮತ್ತು ಉತ್ತರ ಕನ್ನಡ ಜಿಲ್ಲೆಯ ದೀವರನ್ನು ಓಲೈಸಲು ಕಾಗೋಡು ತಿಮ್ಮಪ್ಪ,ಕುಮಾರ ಬಂಗಾರಪ್ಪ, ಹಾಲಪ್ಪರನ್ನು ಬಳಸಿಕೊಳ್ಳುತಿದ್ದ ಕಾಗೇರಿ ಈಗ ಅರಗಜ್ಞಾನೇಂದ್ರ ಮೂಲಕ ಒಕ್ಕಲಿಗರ ಮನ ಒಲಿಸುವ ಕೆಲಸ ಪ್ರಾರಂಭಿಸಿದ್ದಾರೆ ಎನ್ನುವ ಗುಸು ಗುಸು ಕೇಳಿ ಬರುತ್ತಿದೆ.

ಈ ಎಲ್ಲಾ ವಿದ್ಯಮಾನಗಳ ಹಿನ್ನೆಲೆಯಲ್ಲಿ ಕಲಗದ್ದೆಯಲ್ಲಿ ರಾಜಮಾನ್ಯ ಪ್ರಶಸ್ತಿ ನೀಡಲು ಗೃಹಸಚಿವ ಅರಗಜ್ಞಾನೇಂದ್ರರೇ ಬರಬೇಕು, ಅಲ್ಲಿ ಒಕ್ಕಲಿಗರಿಂದ ಅರಗಜ್ಞಾನೇಂದ್ರರಿಗೆ ಸನ್ಮಾನ ಆಗಬೇಕೆಂದು ಕಾರ್ಯಕ್ರಮದ ರೂಪರೇಷೆ ಕೊಟ್ಟವರೇ ಕಾಗೇರಿಯವರಂತೆ!

ಇಲ್ಲಿಗೆ ದೀವರ ಸಹವಾಸ ತನಗೆ ಅಗತ್ಯವಿಲ್ಲ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸವಾಲು ಹಾಕಿದಂತಾಯಿತು. ಇದರ ಮುಂದುವರಿದ ಭಾಗವೆಂದರೆ ತಾವು ಹೇಳಿದ್ದನ್ನು ಮಾತ್ರ ಚಾಚೂ ತಪ್ಪದೆ ಬರೆಯುವವರು, ತಾವು ಹೇಳದೇ ಇದ್ದುದನ್ನು ಬರೆಯುವವರು ಎಂದು ವಿಂಗಡಿಸಿದ್ದಾರಂತೆ.

ಸರಳ-ಸಜ್ಜನ ಎನ್ನುವ ಗುರುತರ ಆರೋಪಗಳಿಗೆ ತುತ್ತಾಗಿರುವ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜಕೀಯ ಸೇಡು ಪ್ರಾರಂಭಿಸಿರುವುದು, ಅದರ ಅಂಗವಾಗಿ ತಮ್ಮ ವಂದಿಮಾಗಧರು, ವಿರೋಧಿಗಳೆಂದು ವಿಂಗಡಿಸಿಕೊಂಡಿರುವುದು. ಇವೆಲ್ಲಕ್ಕಿಂತ ಮುಖ್ಯವಾಗಿ ಅಮಾಯಕ ಪರಿಶಿಷ್ಟರನ್ನು ಎತ್ತಿಕಟ್ಟಿ ತಮ್ಮ ವಿರೋಧಿಗಳ ವಿರುದ್ಧ ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸುತ್ತಿರುವುದು, ಸ್ವಯಂ ತಾವೇ ಕಾರ್ಯಕ್ರಮ ರೂಪಿಸಿಕೊಂಡು ಸನ್ಮಾನ, ಪ್ರಶಸ್ತಿಯ ಹೆಸರಿನಲ್ಲಿ ತಮ್ಮನ್ನೇ ಬಿಂಬಿಸಿಕೊಳ್ಳುವುದು, ಈ ಕಾರ್ಯಕ್ರಮಕ್ಕೆ ಚಪ್ಪಾಳೆ ತಟ್ಟಲು ಕೆಲವರನ್ನು ಆಹ್ವಾನಿಸಿಕೊಳ್ಳುವುದು ಇವೆಲ್ಲಾ ರಾಜ್ಯ ವಿಧಾನಸಭಾ ಅಧ್ಯಕ್ಷರ ಹೊಸ ಖಯ್ಯಾಲಿಗಳೆಂದರೆ ಅಲ್ಲ ಗಳೆಯುವವರು ಈ ಗೌರವಾನ್ವಿತರಿಗೆ ಮೊದಲೇ ಈ ಚಟ ಇತ್ತೆಂದು ಒಪ್ಪಿಕೊಳ್ಳಬೇಕಾದ ಅನಿವಾರ್ಯತೆ ಇದೆ.

ಒಟ್ಟಾರೆ ರಾಜಕೀಯ ಕ್ಷೇತ್ರ ಹದಗೆಟ್ಟಿದೆ ಎನ್ನುವವರು ಕೆಲವರು ಕಣ್ಮುಚ್ಚಿ ಅದೇನನ್ನೋ ಕುಡಿಯುತಿದ್ದಾರೆ ಎನ್ನುವುದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. 40 ವರ್ಷಗಳ ಸುಧೀರ್ಘ ಕಾಲ ಈ ಕ್ಷೇತ್ರದ ಶಾಸಕರಾಗಿದ್ದ ಪರಿಶಿಷ್ಟರ ಅವಧಿಯಲ್ಲಿ ಕಾಣದ ಜಾತಿನಿಂದನೆ ಪ್ರಕರಣಗಳು ರಾಷ್ಟ್ರೀಯವಾದಿಗಳ ಆಡಳಿತದಲ್ಲಿ ಬಹುಸಂಖ್ಯಾತ ಮೂಲನಿವಾಸಿಗಳ ವಿರುದ್ಧ ದಾಖಲಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಜಾತಿ ವಿರೋಧ, ಜಾತಿ ನಿಂದನೆ, ಜಾತಿಆಧಾರಿತ ಸುಳ್ಳುಪ್ರಕರಣಗಳು ಸಿದ್ಧಾಪುರದಲ್ಲಿ ಪ್ರಾರಂಭವಾಗಿರುವುದು ಉತ್ತರ ಕನ್ನಡ ಜಿಲ್ಲೆಗೇ ಕಳಂಕ. ಅಂದಹಾಗೆ ಈಗ ಕಾಮಗಾರಿ ಭರದಿಂದ ನಡೆಯುತ್ತಿರುವ ಸಿದ್ಧಾಪುರ ನಾಮಧಾರಿ ಸಭಾಭವನಕ್ಕೆ ದೊಡ್ಡಮನೆ ಶಶಿಭೂಷಣ ಹೆಗಡೆಯವರು ಐದು ಲಕ್ಷ ರೂಪಾಯಿ ದೇಣಿಗೆ ನೀಡಿರುವುದು, ಮಾಜಿ ಸಚಿವ ಆರ್.‌ ವಿ. ದೇಶಪಾಂಡೆ ಡಾ. ಶಶಿಭೂಷಣ ಹೆಗಡೆಯವರನ್ನು ಕಾಂಗ್ರೆಸ್‌ ಗೆ ಆಹ್ವಾನಿಸಿರುವುದು ಶಿರಸಿ ಕ್ಷೇತ್ರದ ಸಂಚಲನದ ದೃಷ್ಟಾಂತ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *