ತಾನು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ನೀಡದ ಮುನಿಸು: ಚುನಾವಣಾ ಕಣದಿಂದ ದೂರ ಉಳಿದ ಹೆಗಡೆ-nk bjp politics

Thumbnail image

ಡಿಸೆಂಬರ್‌10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣಾ ಕಣ ರಂಗೇರಿದ್ದು, ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ಮಾಡುತ್ತಿವೆ. ಇದರ ನಡುವೆ, ಬಿಜೆಪಿ ಮುಖಂಡ ಹಾಗೂ ಫೈರ್ ಬ್ರ್ಯಾಂಡ್ ನಾಯಕ ಅನಂತ್​ ಕುಮಾರ್​​​ ಹೆಗಡೆ ಎಂಎಲ್‌ಸಿ ಚುನಾವಣಾ ಕಣದಿಂದ ದೂರ ಉಳಿದಿದ್ದಾರೆ.

ಕಾರವಾರ: ಕರಾವಳಿ ಜಿಲ್ಲೆ ಉತ್ತರಕನ್ನಡದಲ್ಲಿ ಪರಿಷತ್ ಚುನಾವಣಾ ಕಾವು ಜೋರಾಗಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

ಜಿಲ್ಲೆ ಬಿಜೆಪಿಯ ಐವರು ಶಾಸಕರನ್ನು ಹೊಂದಿದ್ದು, ಪರಿಷತ್​​ ಚುನಾವಣೆ ಸಾಕಷ್ಟು ಮಹತ್ವ ಪಡೆದಿದೆ. ಉಸ್ತುವಾರಿ ಸಚಿವ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರೂ ಪ್ರಚಾರ ಕಾರ್ಯದಲ್ಲಿ ಅಭ್ಯರ್ಥಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ಪಕ್ಷದ ಪ್ರಭಾವಿ ಮುಖಂಡ ಹಾಗೂ ಫೈರ್ ಬ್ರ್ಯಾಂಡ್ ನಾಯಕ ಅನಂತ್​ ಕುಮಾರ್​​​ ಹೆಗಡೆ ಮಾತ್ರ ಎಂಎಲ್‌ಸಿ ಚುನಾವಣಾ ಕಣದಿಂದ ಕಣ್ಮರೆಯಾಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಬಿಜೆಪಿಯ ಮಟ್ಟಿಗೆ ಅನಂತ್​ ಕುಮಾರ್​ ಹೈಕಮಾಂಡ್ ಇದ್ದಂತೆ. ಯಾವುದೇ ಚುನಾವಣೆಗಳಿದ್ದರೂ ಸಹ ಅವರು ಸೂಚಿಸಿದ ಅಭ್ಯರ್ಥಿಗೆ ಮೊದಲು ಪ್ರಾಶಸ್ತ್ಯ ನೀಡಲಾಗುತ್ತದೆ ಅನ್ನೋದು ಪಕ್ಷದ ವಲಯದಲ್ಲೇ ಕೇಳಿ ಬರುತ್ತಿದ್ದ ಮಾತುಗಳು. ಆದರೆ ಈ ಬಾರಿ ಪರಿಷತ್ ಚುನಾವಣೆ ಪಕ್ಷಕ್ಕೆ ಪ್ರತಿಷ್ಠೆಯಾಗಿದ್ದರೂ ಸಹ ಅನಂತ್​​​​​ ಮಾತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗಾಗಲಿ ಅಥವಾ ಅಭ್ಯರ್ಥಿ ಪರ ಪ್ರಚಾರದಲ್ಲಾಗಲಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದು ಪಕ್ಷದವರಲ್ಲೂ ಸಹ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದ್ದು, ಪಕ್ಷದ ಮುಖಂಡರುಗಳಿಗೂ ಇರಿಸುಮುರುಸು ಉಂಟು ಮಾಡಿದೆ.

ಪರಿಷತ್ ಚುನಾವಣೆಗೆ ಬಿಜೆಪಿಯಿಂದ ಕಾರವಾರದ ಗಣಪತಿ ಉಳ್ವೇಕರ್‌ಗೆ ಟಿಕೆಟ್ ನೀಡಲಾಗಿದ್ದು, ಕಾರವಾರದ ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್​​ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ. ಆದರೆ ತಾನು ಸೂಚಿಸಿದ ಅಭ್ಯರ್ಥಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅನಂತ್​​ ಕುಮಾರ್​​​ ಮುನಿಸಿಕೊಂಡಿದ್ದು, ಈ ಕಾರಣದಿಂದಲೇ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪ್ರಾರಂಭಗೊಂಡ ಜನ ಸ್ವರಾಜ್ ಯಾತ್ರೆ ವೇಳೆಯಲ್ಲಿಯೂ ಅನಂತ್​​ ಗೈರಾಗಿದ್ದರು.

ಜಿಲ್ಲೆಯಲ್ಲಿ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅನಂತ್​ ಕುಮಾರ್​ ಹೆಗಡೆಗೆ ಪಕ್ಷದಲ್ಲಿ ಸಾಕಷ್ಟು ಪ್ರಬಲ್ಯವಿರುವ ಜೊತೆಗೆ, ಜಿಲ್ಲೆಯಲ್ಲಿ ಸಾಕಷ್ಟು ಅಭಿಮಾನಿ ಬಳಗವಿದೆ. ಪರಿಷತ್ ಚುನಾವಣಾ ಪ್ರಚಾರದಲ್ಲಿ ಅವರ ಹಾಜರಾತಿಯಿಂದ ಬಹುಪಾಲು ಮತಗಳನ್ನು ಸೆಳೆಯಲು ಅನುಕೂಲವಾಗುತ್ತಿತ್ತು. ಆದರೆ ಅನಂತ್​ ಕುಮಾರ್​​ ಮಾತ್ರ ಬಹಿರಂಗವಾಗಿ ಎಲ್ಲಿಯೂ ಅಭ್ಯರ್ಥಿ ಪರ ಬೆಂಬಲ ವ್ಯಕ್ತಪಡಿಸಿಲ್ಲವಾಗಿದ್ದು, ಚುನಾವಣಾ ಕಣದಿಂದಲೂ ಅಂತರ ಕಾಯ್ದುಕೊಂಡಿದ್ದಾರೆ. ಇದರಿಂದ ಅನಂತ್​​ ಬೆಂಬಲಿಗರಿಗೆ ಸಾಕಷ್ಟು ಗೊಂದಲ ಉಂಟು ಮಾಡಿದೆ. ಇದು ಪರೋಕ್ಷವಾಗಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ಈ ಬಗ್ಗೆ ಪಕ್ಷದ ವಕ್ತಾರರನ್ನು ಕೇಳಿದ್ರೆ ಅನಂತ್​​ಕುಮಾರ್​​​ ಹೆಗಡೆ ಜವಾಬ್ದಾರಿಯುತ ನಾಯಕನಾಗಿದ್ದು, ತಮ್ಮದೇ ಆದ ಕೆಲಸ ಕಾರ್ಯಗಳನ್ನು ಹೊಂದಿದ್ದಾರೆ. ಈ ಕಾರಣದಿಂದ ಬಹಿರಂಗವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿಲ್ಲ ಎನ್ನುವ ಮೂಲಕ ಆರೋಪವನ್ನು ತಳ್ಳಿ ಹಾಕಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *