ವೃತ್ತಿ ನಿಷೇಧಿಸಿ ಹಾನಿ ಮಾಡಿದ ಪ್ರಕರಣ, ಅಧಿಕಾರಿ ಮತ್ತು ಗ್ರಾ.ಪಂ. ಸದಸ್ಯರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

ವ್ಯಕ್ತಿಯೊಬ್ಬರ ಮೇಲೆ ವೃತ್ತಿ ನಿಷೇಧ ಹೇರಿದ ಕಾರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಕ್ಯಾದಗಿ ಗ್ರಾಮ ಪಂಚಾಯತ್‌ ಸದಸ್ಯರು ಮತ್ತು ಅಧಿಕಾರಿಯ ವಿರುದ್ಧ ಸ್ಥಳೀಯ ನ್ಯಾಯಾಲಯದಲ್ಲಿ ಸಿವಿಲ್‌ ಮತ್ತು ಕ್ರಿಮಿನಲ್‌ ಪ್ರಕರಣಗಳು ದಾಖಲಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೋವಿಡ್‌ ಸಮಯದಲ್ಲಿ ವಂದಾನೆ ಗೋಪಾಲಕೃಷ್ಣ ಕೊಡಿಯಾ ಕುಟುಂಬಕ್ಕೆ ಅವಧಿಮೀರಿದ ಸೆನಿಟೈಸರ್‌ ಪೂರೈಸಿದ ಸ್ಥಳಿಯ ವ್ಯವಸ್ಥೆ ವಿರುದ್ಧ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಕಾರಣಕ್ಕೆ ಮುನಿಸಿಕೊಂಡ ಕ್ಯಾದಗಿ ಗ್ರಾ.ಪಂ. ಆಡಳಿತ ಮತ್ತು ಅಧಿಕಾರಿ ವೃತ್ತಿ ನಿಷೇಧ ಹೇರಿ ತೊಂದರೆ ಮಾಡಿದ ಕಾರಣಕ್ಕೆ ಕೊಡಿಯಾ ಸ್ಥಳೀಯ ನ್ಯಾಯಾಲಯದಲ್ಲಿ ಅಂದಿನ ಗ್ರಾಮ ಪಂಚಾಯತ್‌ ಅಧಿಕಾರಿ ಮೇಲೆ ಕ್ರಿಮಿನಲ್‌ ಪ್ರಕರಣ ಮತ್ತು ಕ್ಯಾದಗಿ ಗ್ರಾ.ಪಂ. ಸದಸ್ಯರ ಮೇಲೆ ಸಿವಿಲ್‌ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಗೋಪಾಲಕೃಷ್ಣ ಕೊಡಿಯಾ ಕುಟುಂಬದ ಇಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯನ್ನು ಸೀಲ್‌ ಡೌನ್‌ ಮಾಡಿ ನಿರ್ಬಂಧ ವಿಧಿಸಲಾಗಿತ್ತು. ಈ ಕಾರಣಕ್ಕೆ ಸ್ಥಳಿಯ ಆಡಳಿತ ಅವರ ಕುಟುಂಬಕ್ಕೆ ಫುಡ್‌ ಕಿಟ್‌ ವಿತರಿಸಬೇಕಿತ್ತು. ಅಗತ್ಯ ವಸ್ತು ಪೂರೈಸದೆ ಕೊಟ್ಟ ಸೆನಿಟೈಸರ್‌ ಅವಧಿಮೀರಿದ ಕಾರಣದಿಂದ ಕೊಡಿಯಾ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.

ಈ ದೂರು, ಮಾಹಿತಿ ಕೇಳಿದ ಆಧಾರದಲ್ಲಿ ಕ್ಯಾದಗಿ ಪಂಚಾಯತ್‌ ಠರಾವು ಮಾಡಿ ಗೋಪಾಲಕೃಷ್ಣ ಕೊಡಿಯಾ ತಮ್ಮ ವೃತ್ತಿ ಮಾಡಬಾರದೆಂದು ನಿರ್ಬಂಧ ವಿಧಿಸಿತ್ತು. ಈ ಪ್ರಕರಣದಲ್ಲಿ ವ್ಯಕ್ತಿಯ ವೃತ್ತಿ ಸ್ವಾತಂತ್ರ್ಯ ದುಡಿಯುವ ಅವಕಾಶ ಕಸಿದುಕೊಂಡ ಕಾರಣಕ್ಕೆ ಕೊಡಿಯಾ ಹಾನಿ ಮಾಡಿರುವ ಅಧಿಕಾರಿ ವಿರುದ್ಧ ಕ್ರಿ ಮಿನಲ್‌ ಪ್ರಕರಣ ಮತ್ತು ಇದಕ್ಕೆ ಕಾರಣರಾದ ಗ್ರಾ.ಪಂ. ಅಧ್ಯಕ್ಷರು, ಸದಸ್ಯರ ವಿರುದ್ಧ ಸಿವಿಲ್‌ ಪ್ರಕರಣ ದಾಖಲಿಸಿದ್ದಾರೆ. ಕಳೆದ ನಾಲ್ಕೈದು ತಿಂಗಳ ಹಿಂದೆ ನಡೆದ ಈ ಪ್ರಹಸನದ ಬಗ್ಗೆ ಆಗಸ್ಟ್‌ ತಿಂಗಳಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳಿಯರು ಮಾಧ್ಯಮಪ್ರತಿನಿಧಿಗಳಿಗೆ ದಾಖಲೆ ಸಹಿತ ಈ ಮಾಹಿತಿ ಹಂಚಿಕೊಂಡಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *