


ದನ ಕಳ್ಳತನ ಆರೋಪಿಗಳ ಬಗ್ಗೆ ಮಾಹಿತಿ ನೀಡಿದಕ್ಕೆ ವ್ಯಕ್ತಿ ಮೇಲೆ ಹಲ್ಲೆ
ಹಲ್ಲೆಯಿಂದ ಸದ್ದಾಂ ಹುಸೇನ್ ಕೈ, ಕಾಲು, ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ..

ಭಟ್ಕಳ : ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ಮುಷಾ ನಗರದ ಬದ್ರಿಯಾ ಕಾಲೋನಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ತಾಲೂಕಿನ ಜಾಲಿ ರೋಡ್ ನಿವಾಸಿ ಸದ್ದಾಂ ಹುಸೇನ್ ಎಂದು ತಿಳಿದು ಬಂದಿದೆ. ಈತ ಬದ್ರಿಯಾ ಕಾಲೋನಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದ.
ಈ ವೇಳೆ ಕಾರಿನಲ್ಲಿ ಬಂದ ಐದಾರು ಮಂದಿ ಅಪರಿಚಿತರು, ಅವಾಚ್ಯ ಶಬ್ದಗಳಿಂದ ಬೈದು ದನ ಕಳ್ಳತನದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ತಮ್ಮ ಜನರನ್ನು ಹಿಡಿಸಿದ್ದಿಯಾ, ನಿನ್ನನ್ನು ಕೊಲೆ ಮಾಡಿಯೇ ಹೋಗುತ್ತೇವೆ ಎಂದು ಹೇಳಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ನಂತರ ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾಲಿ ಕ್ರಾಸ್ ಸಮೀಪದ ಲೈಫ್ ಕೇರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಹಲ್ಲೆಯಿಂದ ಸದ್ದಾಂ ಹುಸೇನ್ ಕೈ, ಕಾಲು, ಹೊಟ್ಟೆ ಹಾಗೂ ಮೈ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಘಟನೆ ನಡೆದ ಸ್ಥಳದ ಅಕ್ಕಪಕ್ಕದಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (etbk)

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
