ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ.

ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿ.ಜೆ.ಪಿ. ೧೦ ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ನಿಚ್ಚಳ ವಾಗಿದೆ. ಜೆ.ಡಿಎಸ್.‌ ಮೂರು ಕ್ಷೇತ್ರಗಳಲ್ಲಿ ೨-೩ ಕ್ಷೇತ್ರಗಳಲ್ಲಿ ಸ್ವತಂತ್ರರು ಆಯ್ಕೆಯಾದರೆ ಉಳಿದ ಹತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದೆ? ಎನ್ನುವ ಪ್ರಶ್ನೆ ಈಗ ರಾಜ್ಯದ ಮುಂದಿರುವ ಒಗಟು.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋತು ಪಕ್ಷೇತರ ಅಭ್ಯರ್ಥಿ ಅಥವಾ ಬಿ.ಜೆ.ಪಿ. ಗೆಲ್ಲುವ ಸಾಧ್ಯತೆ ಕಂಡು ಬಂದಿದೆ.

ಬಿ.ಜೆ.ಪಿ. ಯ ಪ್ರಾಬಲ್ಯದ ಉತ್ತರ ಕನ್ನಡ ಮತ್ತು ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿ.ಜೆ.ಪಿ.ಗೆ ಪೂರಕ ವಾತಾವರಣವಿಲ್ಲದೆ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆ ಹೆಚ್ಚು ಎನ್ನುವ ಅಭಿಪ್ರಾಯಗಳಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಜೆ.ಪಿ. ನಾಯಕರ ಪ್ರತಿಷ್ಠೆ ತಮ್ಮ ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಮಾಡಿರುವಂತಿದೆ. ಬಿ.ಜೆ.ಪಿ. ಒಳಜಗಳದ ಲಾಭ, ಜಾತ್ಯಾತೀತ ಜನತಾದಳದ ಬೆಂಬಲ ಕಾಂಗ್ರೆಸ್‌ ಗೆ ದೊರೆತಿರುವ ಹಿನ್ನೆಲೆಗಳಲ್ಲಿ ಬಿ.ಜೆ.ಪಿ. ಯ ತವರು ಶಿವಮೊಗ್ಗದಲ್ಲಿ ಬಿ.ಜೆ.ಪಿ.ಯ ಕಚ್ಚಾಟದ ಕಾರಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಸನ್ನಕುಮಾರ ಗೆಲುವು ನಿಶ್ಚಿತ ಎನ್ನಲಾಗಿದೆ.

ಉತ್ತರ ಕನ್ನಡ- ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಬಿ.ಜೆ.ಪಿ. ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರ ವಿರುದ್ಧ ಹಿರಿಯ ಶಾಸಕರು, ಸಂಸದರು ಕೆಲಸ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಇದೇ ಮೊದಲ ಬಾರಿ ಹೆಬ್ಬಾರ್‌ ನೇತೃತ್ವದಲ್ಲಿ ಬಿ.ಜೆ.ಪಿ. ಹಣದ ಹೊಳೆ ಹರಿಸಿದೆಯಾದರೂ ಬಿ.ಜೆ.ಪಿ.ಯ ಬಂಡಾಯ ಅಮಾಯಕ ಗಣಪತಿ ಉಳ್ವೇಕರ್‌ ರಿಗೆ ಮಾರಕವಾಗಬಹುದೆ? ಎನ್ನುವ ಅನುಮಾನಗಳನ್ನು ಹುಟ್ಟುಹಾಕಿದೆ.

ಸರ್ಕಾರ ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರಿಗೆ ಈ ಚುನಾವಣೆ ಪ್ರತಿಷ್ಠೆ ಆಗಿರುವುದರಿಂದ ಹೆಬ್ಬಾರ್‌ ಆಪ್ತರು ಬಿ.ಜೆ.ಪಿ ಅಭ್ಯರ್ಥಿ ಪರವಾಗಿ ಅಹರ್ನಿಸಿ ದುಡಿದಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಶಿರಸಿ ಕೇಂದ್ರಿತ ರಾಷ್ಟ್ರೀಯವಾದಿಗಳು ಹೆಬ್ಬಾರ್‌ ವಿರುದ್ಧ ಕೆಲಸಮಾಡುವ ಅಂಗವಾಗಿ ನಿರ್ಲಿಪ್ತರಾಗಿದ್ದು ವಿರೋಧಿ ಪಾಳಯದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕರಿಗೆ ನೆರವಾಗಿದ್ದಾರೆ ಎನ್ನಲಾಗುತ್ತಿದೆ.

ಭೀಮಣ್ಣ ನವರ ದೀವರ ಜಾತಿ, ಜೆ.ಡಿ.ಎಸ್.‌ ಮತಗಳ ಆಕರ್ಷಣೆ, ಎರಡೆರಡು ಕ್ಷೇತ್ರಗಳಲ್ಲಿ ಭೀಮಣ್ಣ ವೈಯಕ್ತಿಕವಾಗಿ ಹೊಂದಿರುವ ಸಂಪರ್ಕ,ಕಾಂಗ್ರೆಸ್‌ ನ ಮಾಜಿ ಶಾಸಕರು, ಸಚಿವರು ಒಗ್ಗಟ್ಟಾಗಿ ಭೀಮಣ್ಣ ಪರ ಕೆಲಸ ಮಾಡಿರುವ ಮಾಹಿತಿ ಭೀಮಣ್ಣ ನಾಯ್ಕ ಈ ಬಾರಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಮತ್ತು ಭೀಮಣ್ಣನವರಿಗೆ ಪೂರಕ ಅಂಶಗಳು ಹೆಚ್ಚಿದ್ದವು. ಈ ಲೆಕ್ಕಾಚಾರದಲ್ಲೇ ಮಾಜಿಗಳೆಲ್ಲಾ ಸೇರಿ ಭೀಮಣ್ಣರನ್ನು ಅಭ್ಯರ್ಥಿ ಮಾಡಿದರು ಎನ್ನುವ ಅಂಶಗಳ ಜೊತೆಗೆ ಕಾಂಗ್ರೆಸ್‌ ನ ಅವೈಜ್ಞಾನಿಕ ಚುನಾವಣಾ ತಂತ್ರ, ಚಿರಪರಿಚಿತ ಭೀಮಣ್ಣ ನಾಯ್ಕ ತಮ್ಮ ಪರವಾಗಿ ವೈಯಕ್ತಿಕವಾಗಿ ಜೊತೆಗೆ ಪಕ್ಷದಿಂದ ನೇರವಾಗಿ ಮತ ಯಾಚನೆಯನ್ನೇ ಮಾಡದಿರುವುದು ಅವರ ಗೆಲ್ಲುವ ಸಾಧ್ಯತೆಯನ್ನು ಕ್ಷೀಣಿಸಿದೆ ಎನ್ನಲಾಗಿದೆ. ಆದರೆ ಶಿವಮೊಗ್ಗ ಮತ್ತು ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಗೆಲುವು,ಬೆಳಗಾವಿ, ಹಾಸನಗಳಲ್ಲಿ ಕಾಂಗ್ರೆಸ್‌,ಬಿ.ಜೆ.ಪಿ.ಗೆ ಸೋಲು ಎನ್ನುವ ಗುಪ್ತಚರ ಇಲಾಖೆಯ ಮಾಹಿತಿ ರಾಜ್ಯದಲ್ಲಿ ಕಾಂಗ್ರೆಸ್‌ ಒಂದಂಕಿ ದಾಟುವ ಮುನ್ಸೂಚನೆ ನೀಡಿದೆ. ಬಿ.ಜೆ.ಪಿ. ಯ ಬಂಡಾಯ, ಭೀಮಣ್ಣ ಪಾಳೆಯದ ನ್ಯೂನ್ಯತೆಗಳ ನಡುವೆ ಕೂಡಾ ಭೀಮಣ್ಣ ಸಣ್ಣ ಅಂತರದಲ್ಲಿ ಗೆಲ್ಲುತ್ತಾರೆ ಎನ್ನುವ ಸಮೀಕ್ಷೆ ನಿಜವಾಗಲು ನಾಲ್ಕು ದಿವಸ ಕಾಯಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *