ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ.

ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿ.ಜೆ.ಪಿ. ೧೦ ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ನಿಚ್ಚಳ ವಾಗಿದೆ. ಜೆ.ಡಿಎಸ್.‌ ಮೂರು ಕ್ಷೇತ್ರಗಳಲ್ಲಿ ೨-೩ ಕ್ಷೇತ್ರಗಳಲ್ಲಿ ಸ್ವತಂತ್ರರು ಆಯ್ಕೆಯಾದರೆ ಉಳಿದ ಹತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದೆ? ಎನ್ನುವ ಪ್ರಶ್ನೆ ಈಗ ರಾಜ್ಯದ ಮುಂದಿರುವ ಒಗಟು.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋತು ಪಕ್ಷೇತರ ಅಭ್ಯರ್ಥಿ ಅಥವಾ ಬಿ.ಜೆ.ಪಿ. ಗೆಲ್ಲುವ ಸಾಧ್ಯತೆ ಕಂಡು ಬಂದಿದೆ.

ಬಿ.ಜೆ.ಪಿ. ಯ ಪ್ರಾಬಲ್ಯದ ಉತ್ತರ ಕನ್ನಡ ಮತ್ತು ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿ.ಜೆ.ಪಿ.ಗೆ ಪೂರಕ ವಾತಾವರಣವಿಲ್ಲದೆ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆ ಹೆಚ್ಚು ಎನ್ನುವ ಅಭಿಪ್ರಾಯಗಳಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಜೆ.ಪಿ. ನಾಯಕರ ಪ್ರತಿಷ್ಠೆ ತಮ್ಮ ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಮಾಡಿರುವಂತಿದೆ. ಬಿ.ಜೆ.ಪಿ. ಒಳಜಗಳದ ಲಾಭ, ಜಾತ್ಯಾತೀತ ಜನತಾದಳದ ಬೆಂಬಲ ಕಾಂಗ್ರೆಸ್‌ ಗೆ ದೊರೆತಿರುವ ಹಿನ್ನೆಲೆಗಳಲ್ಲಿ ಬಿ.ಜೆ.ಪಿ. ಯ ತವರು ಶಿವಮೊಗ್ಗದಲ್ಲಿ ಬಿ.ಜೆ.ಪಿ.ಯ ಕಚ್ಚಾಟದ ಕಾರಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಸನ್ನಕುಮಾರ ಗೆಲುವು ನಿಶ್ಚಿತ ಎನ್ನಲಾಗಿದೆ.

ಉತ್ತರ ಕನ್ನಡ- ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಬಿ.ಜೆ.ಪಿ. ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರ ವಿರುದ್ಧ ಹಿರಿಯ ಶಾಸಕರು, ಸಂಸದರು ಕೆಲಸ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಇದೇ ಮೊದಲ ಬಾರಿ ಹೆಬ್ಬಾರ್‌ ನೇತೃತ್ವದಲ್ಲಿ ಬಿ.ಜೆ.ಪಿ. ಹಣದ ಹೊಳೆ ಹರಿಸಿದೆಯಾದರೂ ಬಿ.ಜೆ.ಪಿ.ಯ ಬಂಡಾಯ ಅಮಾಯಕ ಗಣಪತಿ ಉಳ್ವೇಕರ್‌ ರಿಗೆ ಮಾರಕವಾಗಬಹುದೆ? ಎನ್ನುವ ಅನುಮಾನಗಳನ್ನು ಹುಟ್ಟುಹಾಕಿದೆ.

ಸರ್ಕಾರ ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರಿಗೆ ಈ ಚುನಾವಣೆ ಪ್ರತಿಷ್ಠೆ ಆಗಿರುವುದರಿಂದ ಹೆಬ್ಬಾರ್‌ ಆಪ್ತರು ಬಿ.ಜೆ.ಪಿ ಅಭ್ಯರ್ಥಿ ಪರವಾಗಿ ಅಹರ್ನಿಸಿ ದುಡಿದಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಶಿರಸಿ ಕೇಂದ್ರಿತ ರಾಷ್ಟ್ರೀಯವಾದಿಗಳು ಹೆಬ್ಬಾರ್‌ ವಿರುದ್ಧ ಕೆಲಸಮಾಡುವ ಅಂಗವಾಗಿ ನಿರ್ಲಿಪ್ತರಾಗಿದ್ದು ವಿರೋಧಿ ಪಾಳಯದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕರಿಗೆ ನೆರವಾಗಿದ್ದಾರೆ ಎನ್ನಲಾಗುತ್ತಿದೆ.

ಭೀಮಣ್ಣ ನವರ ದೀವರ ಜಾತಿ, ಜೆ.ಡಿ.ಎಸ್.‌ ಮತಗಳ ಆಕರ್ಷಣೆ, ಎರಡೆರಡು ಕ್ಷೇತ್ರಗಳಲ್ಲಿ ಭೀಮಣ್ಣ ವೈಯಕ್ತಿಕವಾಗಿ ಹೊಂದಿರುವ ಸಂಪರ್ಕ,ಕಾಂಗ್ರೆಸ್‌ ನ ಮಾಜಿ ಶಾಸಕರು, ಸಚಿವರು ಒಗ್ಗಟ್ಟಾಗಿ ಭೀಮಣ್ಣ ಪರ ಕೆಲಸ ಮಾಡಿರುವ ಮಾಹಿತಿ ಭೀಮಣ್ಣ ನಾಯ್ಕ ಈ ಬಾರಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಮತ್ತು ಭೀಮಣ್ಣನವರಿಗೆ ಪೂರಕ ಅಂಶಗಳು ಹೆಚ್ಚಿದ್ದವು. ಈ ಲೆಕ್ಕಾಚಾರದಲ್ಲೇ ಮಾಜಿಗಳೆಲ್ಲಾ ಸೇರಿ ಭೀಮಣ್ಣರನ್ನು ಅಭ್ಯರ್ಥಿ ಮಾಡಿದರು ಎನ್ನುವ ಅಂಶಗಳ ಜೊತೆಗೆ ಕಾಂಗ್ರೆಸ್‌ ನ ಅವೈಜ್ಞಾನಿಕ ಚುನಾವಣಾ ತಂತ್ರ, ಚಿರಪರಿಚಿತ ಭೀಮಣ್ಣ ನಾಯ್ಕ ತಮ್ಮ ಪರವಾಗಿ ವೈಯಕ್ತಿಕವಾಗಿ ಜೊತೆಗೆ ಪಕ್ಷದಿಂದ ನೇರವಾಗಿ ಮತ ಯಾಚನೆಯನ್ನೇ ಮಾಡದಿರುವುದು ಅವರ ಗೆಲ್ಲುವ ಸಾಧ್ಯತೆಯನ್ನು ಕ್ಷೀಣಿಸಿದೆ ಎನ್ನಲಾಗಿದೆ. ಆದರೆ ಶಿವಮೊಗ್ಗ ಮತ್ತು ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಗೆಲುವು,ಬೆಳಗಾವಿ, ಹಾಸನಗಳಲ್ಲಿ ಕಾಂಗ್ರೆಸ್‌,ಬಿ.ಜೆ.ಪಿ.ಗೆ ಸೋಲು ಎನ್ನುವ ಗುಪ್ತಚರ ಇಲಾಖೆಯ ಮಾಹಿತಿ ರಾಜ್ಯದಲ್ಲಿ ಕಾಂಗ್ರೆಸ್‌ ಒಂದಂಕಿ ದಾಟುವ ಮುನ್ಸೂಚನೆ ನೀಡಿದೆ. ಬಿ.ಜೆ.ಪಿ. ಯ ಬಂಡಾಯ, ಭೀಮಣ್ಣ ಪಾಳೆಯದ ನ್ಯೂನ್ಯತೆಗಳ ನಡುವೆ ಕೂಡಾ ಭೀಮಣ್ಣ ಸಣ್ಣ ಅಂತರದಲ್ಲಿ ಗೆಲ್ಲುತ್ತಾರೆ ಎನ್ನುವ ಸಮೀಕ್ಷೆ ನಿಜವಾಗಲು ನಾಲ್ಕು ದಿವಸ ಕಾಯಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *