ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ.

ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

ರಾಜ್ಯದಲ್ಲಿ ಆಡಳಿತಾರೂಢ ಬಿ.ಜೆ.ಪಿ. ೧೦ ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ನಿಚ್ಚಳ ವಾಗಿದೆ. ಜೆ.ಡಿಎಸ್.‌ ಮೂರು ಕ್ಷೇತ್ರಗಳಲ್ಲಿ ೨-೩ ಕ್ಷೇತ್ರಗಳಲ್ಲಿ ಸ್ವತಂತ್ರರು ಆಯ್ಕೆಯಾದರೆ ಉಳಿದ ಹತ್ತು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದೆ? ಎನ್ನುವ ಪ್ರಶ್ನೆ ಈಗ ರಾಜ್ಯದ ಮುಂದಿರುವ ಒಗಟು.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋತು ಪಕ್ಷೇತರ ಅಭ್ಯರ್ಥಿ ಅಥವಾ ಬಿ.ಜೆ.ಪಿ. ಗೆಲ್ಲುವ ಸಾಧ್ಯತೆ ಕಂಡು ಬಂದಿದೆ.

ಬಿ.ಜೆ.ಪಿ. ಯ ಪ್ರಾಬಲ್ಯದ ಉತ್ತರ ಕನ್ನಡ ಮತ್ತು ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿ.ಜೆ.ಪಿ.ಗೆ ಪೂರಕ ವಾತಾವರಣವಿಲ್ಲದೆ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆ ಹೆಚ್ಚು ಎನ್ನುವ ಅಭಿಪ್ರಾಯಗಳಿವೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಿ.ಜೆ.ಪಿ. ನಾಯಕರ ಪ್ರತಿಷ್ಠೆ ತಮ್ಮ ಪಕ್ಷದ ಅಭ್ಯರ್ಥಿಗೆ ಹಿನ್ನಡೆ ಮಾಡಿರುವಂತಿದೆ. ಬಿ.ಜೆ.ಪಿ. ಒಳಜಗಳದ ಲಾಭ, ಜಾತ್ಯಾತೀತ ಜನತಾದಳದ ಬೆಂಬಲ ಕಾಂಗ್ರೆಸ್‌ ಗೆ ದೊರೆತಿರುವ ಹಿನ್ನೆಲೆಗಳಲ್ಲಿ ಬಿ.ಜೆ.ಪಿ. ಯ ತವರು ಶಿವಮೊಗ್ಗದಲ್ಲಿ ಬಿ.ಜೆ.ಪಿ.ಯ ಕಚ್ಚಾಟದ ಕಾರಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಪ್ರಸನ್ನಕುಮಾರ ಗೆಲುವು ನಿಶ್ಚಿತ ಎನ್ನಲಾಗಿದೆ.

ಉತ್ತರ ಕನ್ನಡ- ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಬಿ.ಜೆ.ಪಿ. ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರ ವಿರುದ್ಧ ಹಿರಿಯ ಶಾಸಕರು, ಸಂಸದರು ಕೆಲಸ ಮಾಡಿರುವ ಸಾಧ್ಯತೆ ಕಂಡುಬಂದಿದೆ. ಇದೇ ಮೊದಲ ಬಾರಿ ಹೆಬ್ಬಾರ್‌ ನೇತೃತ್ವದಲ್ಲಿ ಬಿ.ಜೆ.ಪಿ. ಹಣದ ಹೊಳೆ ಹರಿಸಿದೆಯಾದರೂ ಬಿ.ಜೆ.ಪಿ.ಯ ಬಂಡಾಯ ಅಮಾಯಕ ಗಣಪತಿ ಉಳ್ವೇಕರ್‌ ರಿಗೆ ಮಾರಕವಾಗಬಹುದೆ? ಎನ್ನುವ ಅನುಮಾನಗಳನ್ನು ಹುಟ್ಟುಹಾಕಿದೆ.

ಸರ್ಕಾರ ಮತ್ತು ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ ರಿಗೆ ಈ ಚುನಾವಣೆ ಪ್ರತಿಷ್ಠೆ ಆಗಿರುವುದರಿಂದ ಹೆಬ್ಬಾರ್‌ ಆಪ್ತರು ಬಿ.ಜೆ.ಪಿ ಅಭ್ಯರ್ಥಿ ಪರವಾಗಿ ಅಹರ್ನಿಸಿ ದುಡಿದಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಶಿರಸಿ ಕೇಂದ್ರಿತ ರಾಷ್ಟ್ರೀಯವಾದಿಗಳು ಹೆಬ್ಬಾರ್‌ ವಿರುದ್ಧ ಕೆಲಸಮಾಡುವ ಅಂಗವಾಗಿ ನಿರ್ಲಿಪ್ತರಾಗಿದ್ದು ವಿರೋಧಿ ಪಾಳಯದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕರಿಗೆ ನೆರವಾಗಿದ್ದಾರೆ ಎನ್ನಲಾಗುತ್ತಿದೆ.

ಭೀಮಣ್ಣ ನವರ ದೀವರ ಜಾತಿ, ಜೆ.ಡಿ.ಎಸ್.‌ ಮತಗಳ ಆಕರ್ಷಣೆ, ಎರಡೆರಡು ಕ್ಷೇತ್ರಗಳಲ್ಲಿ ಭೀಮಣ್ಣ ವೈಯಕ್ತಿಕವಾಗಿ ಹೊಂದಿರುವ ಸಂಪರ್ಕ,ಕಾಂಗ್ರೆಸ್‌ ನ ಮಾಜಿ ಶಾಸಕರು, ಸಚಿವರು ಒಗ್ಗಟ್ಟಾಗಿ ಭೀಮಣ್ಣ ಪರ ಕೆಲಸ ಮಾಡಿರುವ ಮಾಹಿತಿ ಭೀಮಣ್ಣ ನಾಯ್ಕ ಈ ಬಾರಿ ಗೆಲ್ಲುತ್ತಾರೆ ಎನ್ನುವ ವಿಶ್ವಾಸಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ಮತ್ತು ಭೀಮಣ್ಣನವರಿಗೆ ಪೂರಕ ಅಂಶಗಳು ಹೆಚ್ಚಿದ್ದವು. ಈ ಲೆಕ್ಕಾಚಾರದಲ್ಲೇ ಮಾಜಿಗಳೆಲ್ಲಾ ಸೇರಿ ಭೀಮಣ್ಣರನ್ನು ಅಭ್ಯರ್ಥಿ ಮಾಡಿದರು ಎನ್ನುವ ಅಂಶಗಳ ಜೊತೆಗೆ ಕಾಂಗ್ರೆಸ್‌ ನ ಅವೈಜ್ಞಾನಿಕ ಚುನಾವಣಾ ತಂತ್ರ, ಚಿರಪರಿಚಿತ ಭೀಮಣ್ಣ ನಾಯ್ಕ ತಮ್ಮ ಪರವಾಗಿ ವೈಯಕ್ತಿಕವಾಗಿ ಜೊತೆಗೆ ಪಕ್ಷದಿಂದ ನೇರವಾಗಿ ಮತ ಯಾಚನೆಯನ್ನೇ ಮಾಡದಿರುವುದು ಅವರ ಗೆಲ್ಲುವ ಸಾಧ್ಯತೆಯನ್ನು ಕ್ಷೀಣಿಸಿದೆ ಎನ್ನಲಾಗಿದೆ. ಆದರೆ ಶಿವಮೊಗ್ಗ ಮತ್ತು ಉತ್ತರ ಕನ್ನಡದಲ್ಲಿ ಕಾಂಗ್ರೆಸ್‌ ಗೆಲುವು,ಬೆಳಗಾವಿ, ಹಾಸನಗಳಲ್ಲಿ ಕಾಂಗ್ರೆಸ್‌,ಬಿ.ಜೆ.ಪಿ.ಗೆ ಸೋಲು ಎನ್ನುವ ಗುಪ್ತಚರ ಇಲಾಖೆಯ ಮಾಹಿತಿ ರಾಜ್ಯದಲ್ಲಿ ಕಾಂಗ್ರೆಸ್‌ ಒಂದಂಕಿ ದಾಟುವ ಮುನ್ಸೂಚನೆ ನೀಡಿದೆ. ಬಿ.ಜೆ.ಪಿ. ಯ ಬಂಡಾಯ, ಭೀಮಣ್ಣ ಪಾಳೆಯದ ನ್ಯೂನ್ಯತೆಗಳ ನಡುವೆ ಕೂಡಾ ಭೀಮಣ್ಣ ಸಣ್ಣ ಅಂತರದಲ್ಲಿ ಗೆಲ್ಲುತ್ತಾರೆ ಎನ್ನುವ ಸಮೀಕ್ಷೆ ನಿಜವಾಗಲು ನಾಲ್ಕು ದಿವಸ ಕಾಯಬೇಕಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *