ಕಾನಗೋಡು ಗ್ರಾ.ಪಂ. ಸದಸ್ಯ ದಿನೇಶ್‌ ನಾಯ್ಕ ಮೃತ್ಯು & ಸ್ಪೀಕರ್ ಕಾಗೇರಿ ಗರಂ ಆದದ್ದೇಕೆ?

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!

ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

Kageri

ಬೆಳಗಾವಿ: ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

ಆದರೆ, ಶಾಸಕ ಅನ್ನದಾನಿ ಅವರು, ಸಭೆಯಲ್ಲಿ ಎದ್ದು ನಿಂತು ಅಂಬೇಡ್ಕರ್ ಅವರ ವಿಚಾರ ಮಾತನಾಡಲು ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಕಾಗೇರಿ ಅವರು, ನೀವು ಯಾವಾಗ ವಿಷಯವನ್ನು ಪ್ರಸ್ತಾಪಿಸಬೇಕೆಂಬುದನ್ನು ಸ್ಪೀಕರ್ ಆಗಿ ನಾನು ನಿರ್ಧಾರ ಮಾಡುತ್ತೇನೆ. ನೀವು ಯಾವಾಗ ಬೇಕಾದ್ರೆ ಎದ್ದು ನಿಂತು ಪ್ರಶ್ನೆ ಕೇಳಲು ಪ್ರಾರಂಭಿಸಿದರೆ ಸಭೆ ನಿಯಮಾವಳಿ ಪ್ರಕಾರ ನಡೆಯಬೇಕೋ.. ಇಲ್ಲೋ ಮನಸೋ ಇಚ್ಛೆ ನಡೆಯಬೇಕು ಅಂತಾ ಪ್ರಶ್ನೆ ಮಾಡಿದರು.

ನೀವು ಹೇಳಿದ ಹಾಗೇ ನಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಬೆಳೆ ಹಾನಿ ಬಗ್ಗೆ ಈಗ ಮಾತನಾಡುತ್ತಾರೆ. ನೀವು ಕುಳಿತುಕೊಳ್ಳಿ ಎಂದು ಅನ್ನದಾನಿ ಅವರನ್ನು ತಡೆಯಲು ಯತ್ನಿಸಿದರು. ಆದರೆ ಶಾಸಕ ಅನ್ನದಾನಿ ಅವರು ಕುಳಿತುಕೊಳ್ಳಲೇ ಇಲ್ಲ. ನೀವು ಯಾವ ವಿಷಯವನ್ನು ಪ್ರಸ್ತಾಪಿಸಬೇಕು ಎನ್ನುತ್ತಿದ್ದಿರೋ ಅದಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಮುಂಚಿತವಾಗಿ ಅವಕಾಶ ಪಡೆದು ಪ್ರಸ್ತಾಪಿಸಬೇಕಾಗುತ್ತದೆ.

ಸಭಾಧ್ಯಕ್ಷರು ಶಾಂತಿ, ಸಮಾಧಾನದಿಂದ ಹೇಳಿದರೂ ಶಾಸಕರು ಸುಮ್ಮನಾಗಲಿಲ್ಲ. ಇದರಿಂದ ಆಕ್ರೋಶಗೊಂಡ ಸಭಾಧ್ಯಕ್ಷರು ಸಾವಿರ ಸಲ ಹೇಳಿದ್ದೇನೆ. ನಾನು ಅಶಿಸ್ತು ಸಹಿಸಲ್ಲ ಎಂದರು. ಒಂದು ವೇಳೆ ಅಶಿಸ್ತು ಮುಂದುವರಿಸಿದರೆ ಒಂದು ಹೆಜ್ಜೆ ಮುಂದಕ್ಕೆ ಹೋಗಬೇಕಾಗುತ್ತದೆ. ಅನ್ನದಾನಿ ಅವರೇ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದೀರಿ. ಸದನಕ್ಕೆ ಘನತೆ, ಗೌರವ ಇದೆ ಅನ್ನೋದು ಗೊತ್ತಿಲ್ವೇ ಎಂದು ಸಭಾಧ್ಯಕ್ಷರು ಪ್ರಶ್ನೆ ಮಾಡಿದರು.

ನಿಮ್ಮ ಮುಂದೆ ಚಿಕ್ಕವರಾಗಿ ಕೈ ಮುಗಿದು ಹೇಳುತ್ತೇನೆ. ಯಾವುದೇ ವಿಷಯ ಪ್ರಸ್ತಾಪಿಸಬೇಕಾದರೆ ನೀವು ನಮ್ಮೊಂದಿಗೆ ಚರ್ಚಿಸಿ ಪ್ರಸ್ತಾಪಿಸಬೇಕಾಗುತ್ತದೆ. ನೀವು ಯಾವ ವಿಷಯವನ್ನು ಪ್ರಸ್ತಾಪಿಬೇಕೆಂದಿದ್ದರೊ ಆ ವಿಚಾರದ ಬಗ್ಗೆ ನಾವು ಅಷ್ಟೇ ಗಂಭೀರವಾಗಿದ್ದೇವೆ. ನಿಮ್ಮ ವಿಚಾರಕ್ಕೆ ಸದನ ಬದ್ಧವಾಗಿದೆ ಎಂದು ಸಭಾಧ್ಯಕ್ಷರು ಹೇಳಿದರು. ಅಂಬೇಡ್ಕರ್ ಫೋಟೋ ಹಾಕಲು ಯಾವುದೇ ವಿವಾದ ಇಲ್ಲ. ಉಳಿದ ಯಾವ ಫೋಟೋಗಳನ್ನು ಹಾಕಬೇಕೆಂಬುದರ ಮಾಹಿತಿ ಕಲೆ ಹಾಕಲಾಗುತ್ತದೆ. ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬೆಂಗಳೂರಿನಂತೆ ಹಾಕಲಾಗುವುದು ಎಂದು ಸಭಾಧ್ಯಕ್ಷ ಕಾಗೇರಿ ಹೇಳಿದಾಗ ಶಾಸಕ ಅನ್ನದಾನಿ ಸುಮ್ಮನಾದರು. (kpc)

ಶಿರಸಿ ಕಾನಗೋಡು ಗ್ರಾಮ ಪಂಚಾಯತ್‌ ಸದಸ್ಯ ದಿವಾಕರ ನಾಯ್ಕ ಮಂಗಳವಾರ ಸಂಜೆವೇಳೆ ಕುಮಟಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಇವರ ಸಾವಿಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *