ಕಾನಗೋಡು ಗ್ರಾ.ಪಂ. ಸದಸ್ಯ ದಿನೇಶ್‌ ನಾಯ್ಕ ಮೃತ್ಯು & ಸ್ಪೀಕರ್ ಕಾಗೇರಿ ಗರಂ ಆದದ್ದೇಕೆ?

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!

ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

Kageri

ಬೆಳಗಾವಿ: ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

ಆದರೆ, ಶಾಸಕ ಅನ್ನದಾನಿ ಅವರು, ಸಭೆಯಲ್ಲಿ ಎದ್ದು ನಿಂತು ಅಂಬೇಡ್ಕರ್ ಅವರ ವಿಚಾರ ಮಾತನಾಡಲು ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಕಾಗೇರಿ ಅವರು, ನೀವು ಯಾವಾಗ ವಿಷಯವನ್ನು ಪ್ರಸ್ತಾಪಿಸಬೇಕೆಂಬುದನ್ನು ಸ್ಪೀಕರ್ ಆಗಿ ನಾನು ನಿರ್ಧಾರ ಮಾಡುತ್ತೇನೆ. ನೀವು ಯಾವಾಗ ಬೇಕಾದ್ರೆ ಎದ್ದು ನಿಂತು ಪ್ರಶ್ನೆ ಕೇಳಲು ಪ್ರಾರಂಭಿಸಿದರೆ ಸಭೆ ನಿಯಮಾವಳಿ ಪ್ರಕಾರ ನಡೆಯಬೇಕೋ.. ಇಲ್ಲೋ ಮನಸೋ ಇಚ್ಛೆ ನಡೆಯಬೇಕು ಅಂತಾ ಪ್ರಶ್ನೆ ಮಾಡಿದರು.

ನೀವು ಹೇಳಿದ ಹಾಗೇ ನಡೆಯಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಬೆಳೆ ಹಾನಿ ಬಗ್ಗೆ ಈಗ ಮಾತನಾಡುತ್ತಾರೆ. ನೀವು ಕುಳಿತುಕೊಳ್ಳಿ ಎಂದು ಅನ್ನದಾನಿ ಅವರನ್ನು ತಡೆಯಲು ಯತ್ನಿಸಿದರು. ಆದರೆ ಶಾಸಕ ಅನ್ನದಾನಿ ಅವರು ಕುಳಿತುಕೊಳ್ಳಲೇ ಇಲ್ಲ. ನೀವು ಯಾವ ವಿಷಯವನ್ನು ಪ್ರಸ್ತಾಪಿಸಬೇಕು ಎನ್ನುತ್ತಿದ್ದಿರೋ ಅದಕ್ಕೆ ಅವಕಾಶ ನೀಡಿಲ್ಲ. ಇದಕ್ಕೆ ಮುಂಚಿತವಾಗಿ ಅವಕಾಶ ಪಡೆದು ಪ್ರಸ್ತಾಪಿಸಬೇಕಾಗುತ್ತದೆ.

ಸಭಾಧ್ಯಕ್ಷರು ಶಾಂತಿ, ಸಮಾಧಾನದಿಂದ ಹೇಳಿದರೂ ಶಾಸಕರು ಸುಮ್ಮನಾಗಲಿಲ್ಲ. ಇದರಿಂದ ಆಕ್ರೋಶಗೊಂಡ ಸಭಾಧ್ಯಕ್ಷರು ಸಾವಿರ ಸಲ ಹೇಳಿದ್ದೇನೆ. ನಾನು ಅಶಿಸ್ತು ಸಹಿಸಲ್ಲ ಎಂದರು. ಒಂದು ವೇಳೆ ಅಶಿಸ್ತು ಮುಂದುವರಿಸಿದರೆ ಒಂದು ಹೆಜ್ಜೆ ಮುಂದಕ್ಕೆ ಹೋಗಬೇಕಾಗುತ್ತದೆ. ಅನ್ನದಾನಿ ಅವರೇ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದೀರಿ. ಸದನಕ್ಕೆ ಘನತೆ, ಗೌರವ ಇದೆ ಅನ್ನೋದು ಗೊತ್ತಿಲ್ವೇ ಎಂದು ಸಭಾಧ್ಯಕ್ಷರು ಪ್ರಶ್ನೆ ಮಾಡಿದರು.

ನಿಮ್ಮ ಮುಂದೆ ಚಿಕ್ಕವರಾಗಿ ಕೈ ಮುಗಿದು ಹೇಳುತ್ತೇನೆ. ಯಾವುದೇ ವಿಷಯ ಪ್ರಸ್ತಾಪಿಸಬೇಕಾದರೆ ನೀವು ನಮ್ಮೊಂದಿಗೆ ಚರ್ಚಿಸಿ ಪ್ರಸ್ತಾಪಿಸಬೇಕಾಗುತ್ತದೆ. ನೀವು ಯಾವ ವಿಷಯವನ್ನು ಪ್ರಸ್ತಾಪಿಬೇಕೆಂದಿದ್ದರೊ ಆ ವಿಚಾರದ ಬಗ್ಗೆ ನಾವು ಅಷ್ಟೇ ಗಂಭೀರವಾಗಿದ್ದೇವೆ. ನಿಮ್ಮ ವಿಚಾರಕ್ಕೆ ಸದನ ಬದ್ಧವಾಗಿದೆ ಎಂದು ಸಭಾಧ್ಯಕ್ಷರು ಹೇಳಿದರು. ಅಂಬೇಡ್ಕರ್ ಫೋಟೋ ಹಾಕಲು ಯಾವುದೇ ವಿವಾದ ಇಲ್ಲ. ಉಳಿದ ಯಾವ ಫೋಟೋಗಳನ್ನು ಹಾಕಬೇಕೆಂಬುದರ ಮಾಹಿತಿ ಕಲೆ ಹಾಕಲಾಗುತ್ತದೆ. ಹಾಗೂ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬೆಂಗಳೂರಿನಂತೆ ಹಾಕಲಾಗುವುದು ಎಂದು ಸಭಾಧ್ಯಕ್ಷ ಕಾಗೇರಿ ಹೇಳಿದಾಗ ಶಾಸಕ ಅನ್ನದಾನಿ ಸುಮ್ಮನಾದರು. (kpc)

ಶಿರಸಿ ಕಾನಗೋಡು ಗ್ರಾಮ ಪಂಚಾಯತ್‌ ಸದಸ್ಯ ದಿವಾಕರ ನಾಯ್ಕ ಮಂಗಳವಾರ ಸಂಜೆವೇಳೆ ಕುಮಟಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಇವರ ಸಾವಿಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ನಾಯ್ಕ ಸಂತಾಪ ವ್ಯಕ್ತಪಡಿಸಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *