ನಮ್ಮನೆ ಹಬ್ಬಕ್ಕೆ ತಾರಾ ಮೆರಗು! ತುಳಸಿ ಬೆರಗು

Thumbnail image

ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’ : ಚಿತ್ರನಟಿ ತಾರಾ ಭಾಗಿ

ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ತಾರಾ ಅವರು ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್​​​ ಬಿಡುಗಡೆಗೊಳಿಸಿದರು.

ಶಿರಸಿ: ಕಲೆ,ಸಾಹಿತ್ಯ,ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ರಮ ‘ನಮ್ಮನೆ ಹಬ್ಬ’ ಸಂಭ್ರಮ ಶಿರಸಿಯಲ್ಲಿ ನಡೆಯಿತು. ಚಿತ್ರನಟಿ ತಾರಾ ಅನುರಾಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮೆರಗು ನೀಡಿದರು.

ಶಿರಸಿ ತಾಲೂಕಿನ ಬೆಟ್ಟಕೊಪ್ಪದಲ್ಲಿ ವಿಶ್ವಶಾಂತಿ ಸೇವಾ ಟ್ರಸ್ಟ್, ಕರ್ನಾಟಕ ಅಡಿಯಲ್ಲಿ ನಡೆದ ನಮ್ಮನೆ ಹಬ್ಬದಲ್ಲಿ ನಟಿ ತಾರಾ ಭಾಗವಹಿಸಿ, ದಶಮಾನೋತ್ಸವ ವರ್ಷದ ಕ್ಯಾಲೆಂಡರ್​​​ ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ನಾವು ಎಲ್ಲೋ ಹೋದರೂ ನಮ್ಮ ಊರಿನಲ್ಲಿ ನಮ್ಮ ಮನೆಯಲ್ಲಿ ಸಿಗುವ ಸಂತಸ ಬೆರೆಲ್ಲೂ ಸಿಗಲು ಸಾಧ್ಯವಿಲ್ಲ. ಶಿರಸಿಯ ನೆಲ ಜಲ ಸಂಸ್ಕೃತಿ, ಸಾಹಿತ್ಯ ಕ್ಷೇತ್ರಗಳ ತವರೂರು. ಕರುನಾಡಿಗೆ ಕಲಾವಿದರನ್ನುನೀಡಿದ ಶ್ರೇಷ್ಠ ಭೂಮಿ ಶಿರಸಿ. ತೆರೆಮರೆ ಕಾಯಂತೆ ಇರುವ ಕಲಾವಿದರನ್ನು, ಸಾಧಕರನ್ನು ಗುರುತಿಸಿ ಅವರನ್ನು ಸನ್ಮಾನಿಸುತ್ತೀರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ನಮ್ಮನೆ ಹಬ್ಬ ಇನ್ನಷ್ಟು ಜನಪ್ರಿಯತೆ ಪಡೆಯಲಿ ಎಂದರು.

ಕಲೆ,ಸಾಹಿತ್ಯ, ಸಂಸ್ಕೃತಿ ಉಳಿಸಲು ಶಿರಸಿಯಲ್ಲಿ ಸಂಭ್ರಮದ ‘ನಮ್ಮನೆ ಹಬ್ಬ’

ಇದಕ್ಕೂ‌ ಮುನ್ನ ನಮ್ಮನೆ ಪ್ರಶಸ್ತಿಯನ್ನು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಹಾಗೂ ಸೆಲ್ಕೋ ಇಂಡಿಯಾ ಬೆಂಗಳೂರು ಸಿಇಓ ಮೋಹನ್​ ಹೆಗಡೆ ಅವರಿಗೆ ಹಾಗೂ ನಮ್ಮನೆ ಯುವ ಪುರಸ್ಕಾರವನ್ನು ಕಲಾವಿದ ವಿಭವ ಮಂಗಳೂರು ಅವರಿಗೆ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವಿ.ಉಮಾಕಾಂತ ಭಟ್, ಚಲನಚಿತ್ರ ನಟ ರಾಮಕೃಷ್ಣ ಹೆಗಡೆ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ್​ ಅಶೀಸರ, ಹಿರಿಯ ಪತ್ರಕರ್ತ ರವೀಂದ್ರ ಭಟ್, ಟ್ರಸ್ಟ್ ಅಧ್ಯಕ್ಷೆ ಭುವನೇಶ್ವರಿ ಹೆಗಡೆ ಉಪಸ್ಥಿತರಿದ್ದರು.

ಏಳನೇ ರೂಪಕ: ಸಭಾ ಕಾರ್ಯಕ್ರಮದ ನಂತರ ಅಪರೂಪದ ಪದ್ಯಗಳ ಮೂಲಕ ಶ್ರೀಕೃಷ್ಣನ ಪ್ರೇಮದ ಅಮೃತವನ್ನೇ ಹರಿಸುವ ವಿಶ್ವ ಶಾಂತಿ ಸರಣಿಗೆ ಏಳನೇ ಯಕ್ಷರೂಪಕವಾಗಿ ವಂಶೀ ವಿಲಾಸ ಸೇರ್ಪಡೆಗೊಂಡಿತು.ಪ್ರಸಿದ್ದ ಚಲನಚಿತ್ರತಾರೆ ತಾರಾ ಲೋಕಾರ್ಪಣೆಗೊಳಿಸಿದ ಈ ರೂಪಕ ಒಂದುವರೆ ಗಂಟೆಗಳ‌ ಕಾಲ ‌ತುಳಸಿ ಹೆಗಡೆ ಮೂಲಕ ಅನಾವರಣಗೊಂಡಿತು. ನಾಡಿನ ಹಲವಡೆಯಿಂದ ಐನೂರಕ್ಕೂ ಅಧಿಕ ಕಲಾ ಆಸಕ್ತರು ಪಾಲ್ಗೊಂಡಿದ್ದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *