ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ: ಸಚಿವ ಅಶ್ವತ್ಥ ನಾರಾಯಣ

Thumbnail image

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಸಮಿತಿ ರಚನೆ: ವರದಿ ಬಂದ್ಮೇಲೆ ಸೂಕ್ತ ನಿರ್ಧಾರ : ಸಚಿವ ಅಶ್ವತ್ಥ ನಾರಾಯಣ

ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಇದೇ ತಿಂಗಳ 15 ರಂದು ಸಮಿತಿ ರಚಿಸಿ ಅಧಿಸೂಚನೆ ಹೊರಡಿಸಿದ್ದೇವೆ. ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಬೆಳಗಾವಿ: ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಈ ಸಮಿತಿ ವರದಿ ಬಂದ ನಂತರ ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ಸೂಕ್ತ ತೀರ್ಮಾನ ಸರ್ಕಾರ ತೆಗೆದುಕೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ವಿಧಾನ ಸಭೆಯಲ್ಲಿ ಇಂದು ಶೂನ್ಯ ವೇಳೆಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ಶಾಸಕ ಲಿಂಗೇಶ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಇದೇ ತಿಂಗಳ 15 ರಂದು ಸಮಿತಿ ರಚಿಸಿ ಅಧಿಸೂಚನೆ ಹೊರಡಿಸಿದ್ದೇವೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರನಾಯ್ಕ್ ಅಧ್ಯಕ್ಷತೆಯಲ್ಲಿ ಆರ್ಥಿಕ ಇಲಾಖೆ, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಲೇಜು ನಿರ್ದೇಶನಾಲಯದ ಆಯುಕ್ತರು ಈ ಸಮಿತಿಯ ಸದಸ್ಯರಾಗಿದ್ದು, ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಮಿತಿಯ ವರದಿ ಬಂದ ನಂತರ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಪರಿಹಾರ ಮತ್ತು ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ್ದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್‌ನ ಲಿಂಗೇಶ್‌, ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳಲ್ಲಿ 14 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರು ಪಿಹೆಚ್‌ಡಿ ಸಹ ಪಡೆದಿದ್ದಾರೆ. ಇಂತಹ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿ ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರಿಗೆ 12 ತಿಂಗಳು ಪೂರ್ಣ ವೇತನ ನೀಡಬೇಕು. ಕಾಯಂ ಮಾಡಿದರೆ ಈ ಸಮಸ್ಯೆ ಬರುವುದಿಲ್ಲ. ಹಾಗಾಗಿ ದೆಹಲಿ ಮಾದರಿಯಲ್ಲೇ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿ. ಕೆಲವರು ನಿವೃತ್ತಿ ಅಂಚಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನಗಳು ನಡೆದಿವೆ. ಆದ್ದರಿಂದ ಸರ್ಕಾರ ಅತಿಥಿ ಉಪನ್ಯಾಸಕರ ಖಾಯಮಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. (ಈಟಿಬಿಕೆ)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *