ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ,-madhu & ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

Thumbnail image

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ: ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ

ಬಿಜೆಪಿ ಖಾಲಿ ಡಬ್ಬ ಆಗಿದೆ, ಇನ್ನು ಮುಂದೆ ಹಿಂದುತ್ವ ಅನ್ನೋದು ವರ್ಕೌಟ್ ಆಗಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು.

ಬಾಗಲಕೋಟೆ: ಮುಂಬರುವ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು.

ಬಾದಾಮಿ ತಾಲೂಕಿನ ನರಸಾಪುರ ಗ್ರಾಮದಲ್ಲಿ ಅವರ ಆಪ್ತ ಮಂಜುನಾಥ ಗುಬ್ಬಿ ಅವರ ಹುಟ್ಟುಹಬ್ಬದ ಅಂಗವಾಗಿ ಆಗಮಿಸಿದ ಸಮಯದಲ್ಲಿ ಮಾತನಾಡುತ್ತಾ, ಬಿಜೆಪಿ ಖಾಲಿ ಡಬ್ಬ ಆಗಿದೆ, ಇನ್ಮುಂದೆ ಹಿಂದುತ್ವ ಅನ್ನೋದು ವರ್ಕೌಟ್ ಆಗಲ್ಲ ಎಂದರು.

ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ವಾಗ್ದಾಳಿ

ನಾವು ಹಿಂದುಗಳೇ ಅಲ್ವಾ ಎಂದು ಪ್ರಶ್ನೆ ಮಾಡಿದ ಮಧು ಬಂಗಾರಪ್ಪ, ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನು ಒರಿಜಿನಲ್ ಹಿಂದೂ. ಹೊಟ್ಟೆಗೆ ನಾವು ಅನ್ನ ತಿಂತೀವಿ. ಹೊಟ್ಟೆಗೆ ಅನ್ನ ತಿನ್ನುವವರೆಲ್ಲ ಹಿಂದೂಗಳೇ. ಬಿಜೆಪಿ ಅವರೆಲ್ಲ ಬ್ರಿಟಿಷ್ ಜನತಾ ಪಾರ್ಟಿ ಇದ್ದಂತೆ. ಡಿವಿಜನ್ ಮಾಡುವುದೇ ಇವರ ಕೆಲಸ. ರಾಜರನ್ನು ಒಡೆದು ಆಳಿ ಒಳ ಬಂದವರು ಬ್ರಿಟಿಷರು. ಅವರಂತೆ ಬಿಜೆಪಿಯವರು ಆಳುತ್ತಿದ್ದಾರೆ. ಜನರಿಗೆ ಇವರ ಆಟ ಗೊತ್ತಾಗಿದೆ ಎಂದು ಕಿಡಿಕಾರಿದರು.

ಮತಾಂತರ ನಿಷೇಧ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಮೊದಲು ನೈತಿಕ ಪೊಲೀಸ್ ಗಿರಿ, ತಡೆಯುವ ಕಾನೂನು ಜಾರಿ ಮಾಡಲಿ. ಯಾರು ಎಲ್ಲಿಯೂ ಹೋಗಲ್ಲ. ಸ್ವಾತಂತ್ರ್ಯ ಇರಬೇಕು ಅಷ್ಟೇ. ಅದನ್ನು ಕಟ್ ಮಾಡಬಾರದು. ಏನು ಮಾತನಾಡ್ತಾರೋ ಅದನ್ನೇ ಕಾನೂನು ಮಾಡುತ್ತಾ ಹೋದರೆ ಹೇಗೆ?. ಅದು ತಪ್ಪಾಗುತ್ತದೆ ಎಂದರು.

ಚುನಾವಣೆ ಹತ್ತಿರ ಬಂದರೆ ಬಿಜೆಪಿಯವರು ಇಂತಹದನ್ನು ಶುರು ಮಾಡುತ್ತಾರೆ. ಜನಪರ ಕೆಲಸಗಳನ್ನು ಮಾಡಿದರೆ, ಇದನ್ನು ಮಾಡುತ್ತಿರಲಿಲ್ಲ. ಸರ್ಕಾರ ಇರುವುದು ಕೆಲಸ ಮಾಡುವುದಕ್ಕೆ, ಜಾತಿ ಜಾತಿಗಳನ್ನು ಒಡೆಯಲಿಕ್ಕೆ ಅಲ್ಲ ಎಂದು ಟಾಂಗ್ ನೀಡಿದರು.

ರಾಜ್ಯದ ಜನರೇನು ಅಷ್ಟು ಮೂರ್ಖರಲ್ಲ. ಬಿಜೆಪಿಯವರ ಸರ್ಕಾರ ಇರಬಹುದು. ಒತ್ತಡ ತಂದು ಕಾನೂನು ಮಾಡಬಹುದು. ಬೇರೆ ಬೇರೆ ಧರ್ಮದ ಜನರೆಲ್ಲಾ ಧೈರ್ಯದಿಂದ ಬಾಳಲಿ. ಅಂಬೇಡ್ಕರ್ ಅವರು ಸಂವಿಧಾನ ಬರೆದಿದ್ದಾರೆ. ಬೆಂಕಿ ಹಿಡಿದು ಕೆಲಸ ಮಾಡುವಂತ ಅವಶ್ಯಕತೆ ನನಗಿಲ್ಲ. ಎಲ್ಲರೂ ಧೈರ್ಯದಿಂದ ಬಾಳೋಣ ಎಂದು ಮಧು ಬಂಗಾರಪ್ಪ ಹೇಳಿದರು. (kpc)

ದೇಶ ಇಂದು ಅನುಭವಿಸುತ್ತಿರುವ ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

‘ಹಿಂದುತ್ವ’ವಾದಿಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪ್ರಸ್ತುತ ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳಿಗೆ ‘ಹಿಂದುತ್ವವಾದಿಗಳೇ ನೇರ ಹೊಣೆ’ ಎಂದು…

rahul1

ಲಖನೌ: ‘ಹಿಂದುತ್ವ’ವಾದಿಗಳ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪ್ರಸ್ತುತ ದೇಶವನ್ನು ಕಾಡುತ್ತಿರುವ ಹಲವು ಸಮಸ್ಯೆಗಳಿಗೆ ‘ಹಿಂದುತ್ವವಾದಿಗಳೇ ನೇರ ಹೊಣೆ’ ಎಂದು ಶನಿವಾರ ಆರೋಪಿಸಿದ್ದಾರೆ.

ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಅಮೇಥಿಯಲ್ಲಿ 6-ಕಿಮೀ ಉದ್ದದ ಪಾದಯಾತ್ರೆಯ ಸಂದರ್ಭದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ, ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನೋವು ಮತ್ತು ದುಃಖಕ್ಕೆ ಹಿಂದುತ್ವವಾದಿಗಳು ಕಾರಣ ಎಂದು ಹೇಳಿದರು.

ಇಂದು ನಮ್ಮ ದೇಶದಲ್ಲಿ ಹಣದುಬ್ಬರ, ನೋವು, ದುಃಖ ಇದ್ದರೆ ಅದು ಹಿಂದುತ್ವವಾದಿಗಳ ಕೈವಾಡದಿಂದ ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. 

ಪ್ರಧಾನಿ ನರೇಂದ್ರ ಮೋದಿ ಗಂಗಾಸ್ನಾನ ಮಾಡುತ್ತಾರೆಯೇ ಹೊರತು ನಿರುದ್ಯೋಗದ ಬಗ್ಗೆ ಮಾತನಾಡುವುದಿಲ್ಲ. ನೋಟು ಅಮಾನ್ಯೀಕರಣ, ಜಿಎಸ್‍ಟಿಯ ಕಳಪೆ ಅನುಷ್ಠಾನ ಮತ್ತು ಕೋವಿಡ್ -19 ಬಿಕ್ಕಟ್ಟಿನಂತಹ ತಪ್ಪು ನಿರ್ಧಾರದಿಂದಾಗಿ ಇಂದು ಬಡವರು ದುಃಖ ಅನುಭವಿಸುವಂತಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು.

ನಿಮಗೆ ಇಂದಿನ ಪರಿಸ್ಥಿತಿಯ ಅರಿವಿದೆಯೇ? ನಿರುದ್ಯೋಗ ಮತ್ತು ಹಣದುಬ್ಬರ ದೊಡ್ಡ ಪ್ರಶ್ನೆಗಳಾಗಿದ್ದು, ಸಿಎಂ ಆಗಲಿ ಅಥವಾ ಪ್ರಧಾನಿಯಾಗಲಿ ಈ ಬಗ್ಗೆ ಉತ್ತರಿಸುವುದಿಲ್ಲ. ಪ್ರಧಾನಿ ತೆಗೆದುಕೊಂಡ ಕೆಲವು ನಿರ್ಧಾರಗಳಿಂದ ಮಧ್ಯಮ ವರ್ಗದ ಜನರು ಮತ್ತು ಬಡವರ ಮೇಲೆ ಕೆಟ್ಟ ಪರಿಣಾಮ ಬೀರಿದೆ. ನೋಟು ಅಮಾನ್ಯೀಕರಣ, ತಪ್ಪಾಗಿ ಜಾರಿಗೊಳಿಸಲಾದ ಜಿಎಸ್‍ಟಿ, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಯಾವುದೇ ಸಹಾಯ ಮಾಡದಿರುವುದು ಭಾರತದಲ್ಲಿ ನಿರುದ್ಯೋಗಕ್ಕೆ ಪ್ರಮುಖ ಕಾರಣಗಳಾಗಿವೆ ಎಂದರು.

ನಾನು ರಾಜಕೀಯ ಜಗತ್ತಿಗೆ ಮೊದಲ ಹೆಜ್ಜೆ ಇಡುವಂತೆ ಮಾಡಿದ್ದು ಅಮೇಥಿ ಕ್ಷೇತ್ರ. 2004ರಲ್ಲಿ ರಾಜಕೀಯಕ್ಕೆ ಬಂದೆ. ನನ್ನ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿದ ನಗರ ಅಮೇಥಿ. ಅಮೇಥಿಯ ಜನರು ನನಗೆ ರಾಜಕೀಯದ ಬಗ್ಗೆ ಸಾಕಷ್ಟು ಕಲಿಸಿದ್ದಾರೆ. ನೀವು ನನಗೆ ರಾಜಕೀಯಕ್ಕೆ ದಾರಿ ತೋರಿಸಿದ್ದೀರಿ. ಹಾಗಾಗಿ ನಾನು ಅಮೇಥಿ ಜನತೆಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 2019 ರಲ್ಲಿ ಕಾಂಗ್ರೆಸ್ ಭದ್ರಕೋಟೆ ಅಮೇಥಿಯನ್ನು ಕಳೆದುಕೊಂಡ ನಂತರ ಸುಮಾರು ಎರಡೂವರೆ ವರ್ಷಗಳ ನಂತರ ಮೊದಲ ಬಾರಿಗೆ ಅಮೇಥಿಗೆ ಆಗಮಿಸಿದ್ದಾರೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *