ಅಕ್ರಮ ಮದ್ಯ ಬುಧವಾರ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಚಿವರ ಸಭೆ

ಅಕ್ರಮ ಮದ್ಯ ಮಾರಾಟಕ್ಕೆ ಗುರಿ ನಿಗದಿಯೇ ಕಾರಣ, ಜನರ ಆರೋಗ್ಯಕ್ಕಿಂತ ಆದಾಯ ದೊಡ್ಡದಲ್ಲ: ಸ್ಪೀಕರ್‌ ಕಾಗೇರಿ

ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ…

Kageri

ಬೆಳಗಾವಿ: ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಮ್ಮ ದನಿಯೆತ್ತಿದ  ಪ್ರಸಂಗಕ್ಕೆ ಸದನ ಮಂಗಳವಾರ ಸಾಕ್ಷಿಯಾಯಿತು.

ಅಕ್ರಮ ಮದ್ಯ ಮಾರಾಟದ ಬಗ್ಗೆ ಕಾಂಗ್ರೆಸ್‌ ಶಾಸಕ ತುಕರಾಮ್‌ ಪ್ರಸ್ತಾಪ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಪೀಕರ್‌ ಕಾಗೇರಿ ಅವರು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಆದಾಯವಿದೆ ನಿಜ. ಆದರೆ ಆದಾಯದ ಹೆಚ್ಚಳಕ್ಕಾಗಿ ಹಣಕಾಸು ಇಲಾಖೆ ಹೆಚ್ಚು ಮದ್ಯ ಮಾರಾಟದ ಗುರಿಯನ್ನು ನಿಗದಿಪಡಿಸುವುದರಿಂದಲೂ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟವಾಗಲು ಕಾರಣವಾಗಿದೆ ಎಂದು ಸಮಸ್ಯೆ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದರು.

ಮದ್ಯ ಮಾರಾಟದಿಂದಾಗಿ ದಿನೇದಿನೇ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಗ್ರಾಮೀಣ ಪ್ರದೇಶಗಳಿಗೆ ಕಳಿಸಿದರೆ ಅವರಿಗೆ ಸಮಸ್ಯೆಯ ಅರಿವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಬೇಕೆಂದರೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿಪಡಿಸುವುದನ್ನು ಬಿಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮೀಣ ಜನತೆಯ ಹಿತದೃಷ್ಟಿಯಿಂದ ವರ್ಷದಿಂದ ವರ್ಷಕ್ಕೆ ಹಣಕಾಸು ಇಲಾಖೆಯವರು ಅಬಕಾರಿ ಇಲಾಖೆಗೆ ಗುರಿ ನಿಗದಿ ಮಾಡುವುದನ್ನು ಕಡಿಮೆ ಮಾಡುತ್ತಾ ಬರಬೇಕು. ಜನರ ಆರೋಗ್ಯಕ್ಕಿಂತ ಮದ್ಯ ಮಾರಾಟದಿಂದ ಬರುವ ಆದಾಯ ದೊಡ್ಡದಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರು ಈ ಸಮಸ್ಯೆ ಬಗ್ಗೆ ಗಮನ ಹರಿಸಬೇಕೆಂದು ಸ್ಪೀಕರ್‌ ಸಲಹೆ ಮಾಡಿದರು.

ಮದ್ಯ ಮಾರಾಟದಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿ ಹಣ ಗಳಿಸೋದು ಸರಿಯಲ್ಲ ಎಂದು ಶಾಸಕ ತುಕಾರಾಂ ಅಭಿಪ್ರಾಯಪಟ್ಟರು. ಇವರ ಪ್ರಶ್ನೆಗೆ ಉತ್ತರ ನೀಡಿದ ಅಬಕಾರಿ ಸಚಿವ ಕೆ. ಗೋಪಾಲಯ್ಯ, ಸಂಡೂರು ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡ್ತಿದ್ರು. ನಮ್ಮ ಇಲಾಖೆಯ ಆಧಿಕಾರಿಗಳು ರೇಡ್ ಮಾಡಿದ್ದಾರೆ. ಮದ್ಯದ ಜೊತೆಗೆ ಅಕ್ರಮ ವಾಹನಗಳನ್ನು  ವಶ ಪಡಿಸಿಕೊಂಡಿದ್ದಾರೆ. ನಾಳೆ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಕ್ರಮ ಮದ್ಯ ಮಾರಾಟ ಕಡಿವಾಣದ ಬಗ್ಗೆ ಸೂಚನೆ ಕೊಡ್ತೇನೆ ಎಂದರು.

ಅಬಕಾರಿ ಸಚಿವರ ಉತ್ತರ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗಾಗಲಿ, ಶಾಸಕ ತುಕಾರಾಂ ಅವರಿಗಾಗಲಿ ಸಮಾಧಾನ ನೀಡಲಿಲ್ಲ. ಹೆಚ್ಚು ಮದ್ಯ ಮಾರಾಟ ಮಾಡಿ ಎಂದು ಹಣಕಾಸು ಇಲಾಖೆ ಗುರಿ ನಿಗದಿ ಮಾಡದಿದ್ದಾಗ ಮಾತ್ರ ಗೋಪಾಲಯ್ಯ ಅವರು ಸಮಂಜಸವಾದ ಉತ್ತರ ಕೊಡಲು ಸಾಧ್ಯವಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಹೇಳಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ...

Latest Posts

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ...

Recommended For You

About the Author: Kanneshwar Naik

Leave a Reply

Your email address will not be published. Required fields are marked *