ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

Thumbnail image

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ

ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ.

ಶಿರಸಿ: ಕಾರ್ವಿಂಗ್ ಆರ್ಟ್(ಮರ ಕೆತ್ತನೆ) ನಮ್ಮ ರಾಜ್ಯದ ಅದ್ಭುತ ಕಲೆ. ಈ ಮರಕೆತ್ತನೆಯ ಕುಸುರಿ ಕೆಲಸದ ಹಿಂದೆ ಅದೆಷ್ಟೋ ಪರಿಶ್ರಮ ಇದೆ. ಇಂತಹ ಕಠಿಣ ಕುಸುರಿ ಕೆಲಸವನ್ನು ದತ್ತವಾಗಿಸಿಕೊಂಡಿದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕುಟುಂಬ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಈ ಕುಟುಂಬಸ್ಥರು ತಯಾರಿಸಿದ ಕಲಾಕೃತಿಗಳು ಹೊರ ರಾಜ್ಯಗಳಲ್ಲದೇ, ವಿದೇಶಗಳಿಗೂ ರಫ್ತಾಗಿವೆ. ಈ ಮೂಲಕ ರಾಜ್ಯದ ಕಲೆಯನ್ನು ಸಾಗರದಾಚೆಗೂ ಪ್ರಖ್ಯಾತವಾಗುವಂತೆ ಮಾಡಿದೆ ಯಲ್ಲಾಪುರದ ಕುಟುಂಬ.

ಇವರು ಮಾಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ. ಆದಿತ್ಯ ಗುಡಿಗಾರ್ ಎಂಬುವ ಯುವ ಕೆತ್ತನೆಗಾರ ಇವೆಲ್ಲವುಗಳ ಸಾರಥ್ಯ ವಹಿಸಿಕೊಂಡಿದ್ದಾರೆ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಅಮೆರಿಕದ ದೇವಾಲಯಕ್ಕೂ ಬಾಗಿಲು ತಯಾರಿ

ಅಮೆರಿಕದ ನ್ಯೂ ಜೆರ್ಸಿಯಲ್ಲಿನ ಸ್ವಾಮಿ ನಾರಾಯಣ ದೇವಾಲಯಕ್ಕೆ ಇಲ್ಲಿಂದಲೇ ಬಾಗಿಲುಗಳು ತಯಾರಿಸಿ ಕೊಡಲಾಗಿದೆ. ಇಸ್ಕಾನ್ ಮಂದಿರಕ್ಕೂ ಕೂಡ ಇಲ್ಲಿಂದಲೇ ಬಾಗಿಲುಗಳ ರವಾನೆಯಾಗಿದೆ. ಇನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಮೂಲರಥದ ನಿರ್ಮಾಣ ಮಾಡಿದ್ದು ಕೂಡ ಇವರೇ.

ಸಚಿವ ಆನಂದ್ ಸಿಂಗ್ ಈ ರಥವನ್ನ ನಿರ್ಮಾಣ ಮಾಡಿಕೊಡಲು ಕೋರಿಕೊಂಡಿದ್ದರು. ಇದೀಗ ಗುಜರಾತ್​ನ ಸ್ವಾಮಿ ನಾರಾಯಣ ದೇವಾಲಯಕ್ಕೆ ಸಂಪೂರ್ಣ ಬಾಗಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರ ಬೆಲೆ ಬರೋಬ್ಬರಿ 60 ಲಕ್ಷ ರೂಪಾಯಿ. ಅಂದರೆ ಇವರ ಮರ ಕೆತ್ತನೆಯ ಕುಸುರಿ ಕಲೆಗೆ ಎಷ್ಟು ಬೆಲೆ ಎಂಬುವನ್ನು ಇದು ತೋರಿಸುತ್ತದೆ.

ಮನೆಮಂದಿಯೆಲ್ಲಾ ಸೇರಿ ಕಲಾಕೃತಿಗಳ ರಚನೆ

ಈ ಗುಡಿಗಾರರ ಕುಟುಂಬ ತಯಾರಿಸುವ ಕೆತ್ತನೆಗಳಿಗೆ ವಿಪರೀತ ಬೇಡಿಕೆ ಇರುವ ಕಾರಣ ಮನೆಯ ಯುವಕರು ಹಾಗೂ ಮಹಿಳಾ ಸದಸ್ಯರೂ ಕೂಡ ಕೆತ್ತನೆಯಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 25 ಜನ ಕೆಲಸಗಾರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹಲವರು ಕೆತ್ತನೆಯನ್ನ ಕರಗತ ಮಾಡಿಕೊಳ್ಳುತ್ತಿದ್ದಾರೆ. ಇವರ ಜೀವನ ನಡೆದುಕೊಂಡು ಬಂದಿರೋದು ಕೂಡ ಈ ಕರಕುಶಲ ಕಲೆಯ ಮೂಲಕ. ಸಾಂಪ್ರದಾಯಿಕ ಕಲೆಗಳಿಗೆ ಒತ್ತು ನೀಡುವ ಮೂಲಕ ಉದ್ಯೋಗದ ಸೃಷ್ಟಿಯನ್ನು ಕೂಡ ಮಾಡ್ತಿದೆ ಈ ಕುಟುಂಬ. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *