ಯಲ್ಲಾಪುರದ ಕಲೆಗೆ ವಿಶ್ವವ್ಯಾಪಿ ಬೇಡಿಕೆ!

Thumbnail image

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ.. ಅಮೆರಿಕದ ದೇವಾಲಯಕ್ಕೆ ಬಾಗಿಲು ಮಾಡಿಕೊಟ್ಟ ಹೆಗ್ಗಳಿಕೆ

ಯಲ್ಲಾಪುರದ ಗುಡಿಗಾರ ಕುಟುಂಬ ನಿರ್ಮಿಸಿಕೊಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ.

ಶಿರಸಿ: ಕಾರ್ವಿಂಗ್ ಆರ್ಟ್(ಮರ ಕೆತ್ತನೆ) ನಮ್ಮ ರಾಜ್ಯದ ಅದ್ಭುತ ಕಲೆ. ಈ ಮರಕೆತ್ತನೆಯ ಕುಸುರಿ ಕೆಲಸದ ಹಿಂದೆ ಅದೆಷ್ಟೋ ಪರಿಶ್ರಮ ಇದೆ. ಇಂತಹ ಕಠಿಣ ಕುಸುರಿ ಕೆಲಸವನ್ನು ದತ್ತವಾಗಿಸಿಕೊಂಡಿದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕುಟುಂಬ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಈ ಕುಟುಂಬಸ್ಥರು ತಯಾರಿಸಿದ ಕಲಾಕೃತಿಗಳು ಹೊರ ರಾಜ್ಯಗಳಲ್ಲದೇ, ವಿದೇಶಗಳಿಗೂ ರಫ್ತಾಗಿವೆ. ಈ ಮೂಲಕ ರಾಜ್ಯದ ಕಲೆಯನ್ನು ಸಾಗರದಾಚೆಗೂ ಪ್ರಖ್ಯಾತವಾಗುವಂತೆ ಮಾಡಿದೆ ಯಲ್ಲಾಪುರದ ಕುಟುಂಬ.

ಇವರು ಮಾಡುವ ಮರದ ಹಲವಾರು ಪ್ರತಿಮೆ, ರಥ, ಬಾಗಿಲುಗಳು ವಿಶ್ವ ಪ್ರಸಿದ್ಧವಾಗಿವೆ. ದೇಶ, ವಿದೇಶಗಳಿಂದ ಇವರಿಗೆ ಮರದ ಕೆತ್ತನೆಯ ಕಲಾಕೃತಿಗಳನ್ನು ಮಾಡಿಕೊಡಲು ಬೇಡಿಕೆ ಬರುತ್ತಿವೆ. ಆದಿತ್ಯ ಗುಡಿಗಾರ್ ಎಂಬುವ ಯುವ ಕೆತ್ತನೆಗಾರ ಇವೆಲ್ಲವುಗಳ ಸಾರಥ್ಯ ವಹಿಸಿಕೊಂಡಿದ್ದಾರೆ.

ಯಲ್ಲಾಪುರದ ಮರ ಕೆತ್ತನೆ ದೇಶ, ವಿದೇಶಗಳಲ್ಲೂ ಪ್ರಖ್ಯಾತಿ

ಅಮೆರಿಕದ ದೇವಾಲಯಕ್ಕೂ ಬಾಗಿಲು ತಯಾರಿ

ಅಮೆರಿಕದ ನ್ಯೂ ಜೆರ್ಸಿಯಲ್ಲಿನ ಸ್ವಾಮಿ ನಾರಾಯಣ ದೇವಾಲಯಕ್ಕೆ ಇಲ್ಲಿಂದಲೇ ಬಾಗಿಲುಗಳು ತಯಾರಿಸಿ ಕೊಡಲಾಗಿದೆ. ಇಸ್ಕಾನ್ ಮಂದಿರಕ್ಕೂ ಕೂಡ ಇಲ್ಲಿಂದಲೇ ಬಾಗಿಲುಗಳ ರವಾನೆಯಾಗಿದೆ. ಇನ್ನು ರಾಜನಹಳ್ಳಿ ವಾಲ್ಮೀಕಿ ಪೀಠದ ಮೂಲರಥದ ನಿರ್ಮಾಣ ಮಾಡಿದ್ದು ಕೂಡ ಇವರೇ.

ಸಚಿವ ಆನಂದ್ ಸಿಂಗ್ ಈ ರಥವನ್ನ ನಿರ್ಮಾಣ ಮಾಡಿಕೊಡಲು ಕೋರಿಕೊಂಡಿದ್ದರು. ಇದೀಗ ಗುಜರಾತ್​ನ ಸ್ವಾಮಿ ನಾರಾಯಣ ದೇವಾಲಯಕ್ಕೆ ಸಂಪೂರ್ಣ ಬಾಗಿಲುಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದರ ಬೆಲೆ ಬರೋಬ್ಬರಿ 60 ಲಕ್ಷ ರೂಪಾಯಿ. ಅಂದರೆ ಇವರ ಮರ ಕೆತ್ತನೆಯ ಕುಸುರಿ ಕಲೆಗೆ ಎಷ್ಟು ಬೆಲೆ ಎಂಬುವನ್ನು ಇದು ತೋರಿಸುತ್ತದೆ.

ಮನೆಮಂದಿಯೆಲ್ಲಾ ಸೇರಿ ಕಲಾಕೃತಿಗಳ ರಚನೆ

ಈ ಗುಡಿಗಾರರ ಕುಟುಂಬ ತಯಾರಿಸುವ ಕೆತ್ತನೆಗಳಿಗೆ ವಿಪರೀತ ಬೇಡಿಕೆ ಇರುವ ಕಾರಣ ಮನೆಯ ಯುವಕರು ಹಾಗೂ ಮಹಿಳಾ ಸದಸ್ಯರೂ ಕೂಡ ಕೆತ್ತನೆಯಲ್ಲಿ ತೊಡಗಿಕೊಂಡಿದ್ದಾರೆ. ಸುಮಾರು 25 ಜನ ಕೆಲಸಗಾರರು ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇನ್ನೂ ಹಲವರು ಕೆತ್ತನೆಯನ್ನ ಕರಗತ ಮಾಡಿಕೊಳ್ಳುತ್ತಿದ್ದಾರೆ. ಇವರ ಜೀವನ ನಡೆದುಕೊಂಡು ಬಂದಿರೋದು ಕೂಡ ಈ ಕರಕುಶಲ ಕಲೆಯ ಮೂಲಕ. ಸಾಂಪ್ರದಾಯಿಕ ಕಲೆಗಳಿಗೆ ಒತ್ತು ನೀಡುವ ಮೂಲಕ ಉದ್ಯೋಗದ ಸೃಷ್ಟಿಯನ್ನು ಕೂಡ ಮಾಡ್ತಿದೆ ಈ ಕುಟುಂಬ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *