memory2021-1- ಜಿಯೋ ತಿರಸ್ಕರಿಸೋಣ ಎಂದ ಭಟ್ಟರ ನೆನಪು!

ನಮ್ಮ ನಡುವೆ ಮಾಧ್ಯಮಲೋಕ ಲೋಕವ್ಯಾಪಿ ವಿಸ್ತರಿಸಿಕೊಂಡಿದೆ. ಎಲ್ಲಾ ಕ್ಷೇತ್ರಗಳಂತೆ ಮಾಧ್ಯಮಕ್ಷೇತ್ರ ಕೂಡಾ ವ್ಯಾಪಾರಿಲೋಕ,ಬ್ರಷ್ಟತನಗಳಿಂದ ಮುಕ್ತವಲ್ಲ. ಆದರೆ ಮುಖ್ಯವಾಹಿನಿಯ ಪ್ರತಿಶತ ೨೦ ಕ್ಕಿಂತ ಕಡಿಮೆ ವ್ಯಾಪಾರಿಮನೋಭಾವದ ಬ್ರಷ್ಟ ಮಾಧ್ಯಮಗಳನ್ನು ಇಡೀ ಮಾಧ್ಯಮಲೋಕಕ್ಕೆ ವಿಸ್ತರಿಸುವುದು ತಪ್ಪು. ಇವೆಲ್ಲಾ ಚರ್ಚೆಯ ವಿಷಯಗಳು.

ಇಂಥ ಚರ್ಚೆಗಳ ನಡುವೆ ನಾವೆಲ್ಲಾ ಬದುಕಿದ್ದರೆ ಪುನೀತ್‌ ರಾಜ್‌ ಕುಮಾರ್‌ ರಂತೆ ಬದುಕಬೇಕೆಂದು ಪುನೀತ್‌ ಮಾದರಿಯನ್ನು ಮುಂದಿಡುತ್ತೇವೆ. ಪುನೀತ್‌ ಅಸೀಮವಾದ ಅಪ್ಪು ಮಾದರಿಯನ್ನು ಬಿಟ್ಟುಹೋಗಿದ್ದಾರೆ ಎನ್ನುವುದು ಸರ್ವವಿಧಿತ. ಆದರೆ ಬದುಕಿದ್ದಾಗ ಬಹಳಷ್ಟು ಸಂದರ್ಭಗಳಲ್ಲಿ ಸತ್ತ ನಂತರ ಕೂಡಾ ಪುನೀತ್‌ ರಿಗೆ ಸಿಕ್ಕ ಮಾನ್ಯತೆ, ಗೌರವ ದೊರೆಯದ ಸಂದರ್ಭಗಳು ಅನೇಕ.

ಸೆಲಿಬ್ರಿಟಿಯಲ್ಲದೆ, ಪ್ರಚಾರಕ್ಕೆ ಬಾರದೆ ನಿಜ ಸಂತರಂತೆ ಬದುಕಿದವರು ಅನೇಕ.

ನಾವು ೨೦೧೯ ರಿಂದ ೨೦೨೧ ರ ಅವಧಿಯಲ್ಲಿ ಕಳೆದ ಕೊಂಡ ಅಮೂಲ್ಯ ಜೀವಗಳು ಅನೇಕ. ಅವರಲ್ಲಿ ಡಾ. ವಿಠ್ಠಲ್‌ ಭಂಡಾರಿ, ರವೀಂದ್ರ ಭಟ್‌ ಸೇರಿದಂತೆ ಅನೇಕರಿದ್ದಾರೆ. ಪುನೀತ್‌ ರಿಗೆ ಸಿಕ್ಕಂತೆ ಬದುಕಿದ್ದಾಗ ಸಿಗದ ಮಹತ್ವ ಈ ಮಹನೀಯರಿಗೂ ಸಾವಿನ ನಂತರ ದೊರೆತದ್ದು ಸಮಾಧಾನದ ವಿಷಯ.

ಈ ಕತೆಯ ಮುಕ್ತಾಯದ ಮೊದಲು ಈ ವರ್ಷ ನನಗೆ ಹೆಮ್ಮೆ ಹುಟ್ಟಿಸಿದ ಎರಡು ಪ್ರಸಂಗಗಳನ್ನೂ ಹೇಳಬೇಕು. ತೀರಾ ವೈಯಕ್ತಿಕ ಕಾರಣಕ್ಕೆ ನನ್ನ ವೃತ್ತಿ,ನನ್ನ ಸಂಪರ್ಕಗಳನ್ನು ಬಳಸಿಕೊಳ್ಳುವಲ್ಲಿ ನನಗಿರುವ ಹಿಂಜರಿಕೆ ದೊಡ್ಡದು. ಹಾಗಾಗಿ ನನಗೆ ನೇಮ್‌ ಪ್ಲೇಟ್ಗಳು,ವಿಸಿಟಿಂಗ್‌ ಕಾರ್ಡ್ಗಳಿಲ್ಲ. ಈ ಸಮಾಧಾನದ ನಡುವೆ ಹಿಂದಿನ ತಿಂಗಳು ಸಣ್ಣ ಕೆಲಸವೊಂದಕ್ಕೆ ನೋಟರಿಯಾಗಿರುವ ವಕೀಲರೊಬ್ಬರನ್ನು ಕಾಣುವ ಅನಿವಾರ್ಯತೆಯಾಯಿತು. ಒಂದೇ ನಿಮಿಷದಲ್ಲಿ ನನ್ನ ಕೆಲಸ ಮಾಡಿಕೊಟ್ಟ ವಕೀಲರಿಗೆ ಸರ್‌ ಎಷ್ಟು ಎಂದು ಫೀ ವಿಚಾರಿಸಿದೆ. ʼಇರಲಿ ಬಿಡ್ರಿ ನಿಮ್ಮಿಂದ ಹಣ ಪಡೆದರೆ ನಮಗೆ ಪಾಪ ಬರಲ್ಲೇನ್ರೀ ʼ ಎಂದು ಬಿಟ್ಟರು.

ಅರೆ ಕ್ಷಣ ನಾನು ಸತ್ತಿದ್ದೆ, ಅವರ ಮಾತು ನನ್ನಂಥವರನ್ನು ತುಸು ಚಿಗುರಿಸಿತೇನೋ ಎನ್ನುವ ವಿನಯ ಬಿಟ್ಟು ಅವರಿಗೆ ಹೇಳಲು,ನೀಡಲು ನನ್ನಲ್ಲೇನೂ ಇರಲಿಲ್ಲ.

ಇನ್ನೊಂದು ಘಟನೆ ಮತ್ತೆಂದಾದರೂ ಬರೆದೇನು. ಈಗ ವಿಷಯಕ್ಕೆ ಬರೋಣ……

ಇದೇ ತಿಂಗಳು ನಮ್ಮನ್ನಗಲಿದ ಸಿದ್ಧಾಪುರದ ಪ್ರಜಾವಾಣಿ ವರದಿಗಾರ ರವೀಂದ್ರ ಭಟ್‌ ಬಳಗುಳಿ ನಮಗೆಲ್ಲರಿಗೂ ಆತ್ಮೀಯರು, ಆಧರಣೀಯರೂ ಆಗಿದ್ದರು. ತುಸು ಸಂಕೋಚ, ನಾಚಿಕೆ, ಹಿಂಜರಿಕೆ ಸ್ವಾಭಾವದ ರವೀಂದ್ರರ ಕಠಿಣ ಬದ್ಧತೆ, ಶುದ್ಧತೆ ಅಪರೂಪ ಎನ್ನುವುದು ನನ್ನ ಅನುಭವ. ಕಳೆದ ಕೆಲವು ವರ್ಷಗಳ ಹಿಂದೆ ಜಯೋ ಮೊಬೈಲ್‌ ಭರಾಟೆ ಹೆಚ್ಚಾದಾಗ ನಮ್ಮಂಥ ಅನೇಕ ಬಿ.ಜೆ.ಪಿ. ವಿರೋಧಿಗಳು ಕೂಡಾ ಜಿಯೋ ಸಿಮ್‌ ಕೊಂಡದ್ದಿದೆ. ಬಹುತೇಕರಂತೆ ಜಿಯೋ ಆಮಿಷ, ಅನುಕೂಲಗಳಿಗೆ ಮರುಳಾಗದ ಭಟ್ಟರು ತಮ್ಮ ಬಿ.ಎಸ್. ಎನ್.‌ ಎಲ್.‌ ಸಿಮ್‌ ಬದಲಿಸಿರಲಿಲ್ಲ. ಸಿಗ್ನಲ್‌ ಅನುಕೂಲ,ಕಡಿಮೆ ಬೆಲೆ ಕಾರಣಕ್ಕೆ ನಾವು ಜಿಯೋ ಸಿಮ್‌ ಖರೀದಿಸಿದ್ದೇವೆ ಎಂದಾಗ ಬಂದ ರವೀಂದ್ರರ ಉತ್ತರ ನಮಗೆ ಕಪಾಲಿಗೆ ಹೊಡೆದಂತಿತ್ತು.

ಮೋದಿ, ಸಂಘ ಮುಂದಿಟ್ಟುಕೊಂಡು ಭಾರತವನ್ನು ಲೂಟಿ ಮಾಡುವ ಅಂಬಾನಿ, ಅದಾನಿಗಳಿಗೆ ನಮ್ಮ ಬೆಂಬಲ ಇಲ್ಲ ಅವರು ಕೊಡುವ ರಿಯಾಯತಿ, ಉಚಿತ ಸ್ಕೀಮುಗಳು ಪರೋಕ್ಷವಾಗಿ ಈ ದೇಶ, ಈ ದೇಶವಾಸಿ ಶ್ರಮಿಕರಿಗೆ ವಿರುದ್ಧ,,ಹಾನಿಕಾರಕ ಎನ್ನುವ ಅವರ ಕಠಿಣ ಬದ್ಧತೆ ಅವರಂಥ ಎಷ್ಟು ಜನರಿಗೆ ಸಾಧ್ಯ ಎಂದರೆ ಮತ್ತದೇ ಕಳ್ಳರು, ಬ್ರಷ್ಟರನ್ನು ಬಿಟ್ಟು ಉತ್ತಮರನ್ನೇ ಪ್ರಶ್ನೆ ಮಾಡುವ ಸಮಾಜದ ಮನಸ್ಥಿತಿಯ ನಡುವೆ ಪುನೀತ್‌, ಡಾ. ವಿಠ್ಠಲ್‌ ಭಂಡಾರಿ, ರವೀಂದ್ರ ಭಟ್‌ ರಂಥವರೆಲ್ಲಾ ಇದ್ದರಲ್ಲಾ ಎನ್ನುವುದೇ ನಮ್ಮ ಪುಣ್ಯ.

ಅಂದಹಾಗೆ ನೀವೆಷ್ಟು ಜನ ಮೋದಿ, ಅಂಬಾನಿ, ಅದಾನಿ ಕಾರಣಕ್ಕೆ ಜಿಯೋ ಗೆ ಮೊರೆಹೋಗಿದ್ದೀರಿ, ಮತ್ತು ಜಿಯೋ ತಿರಸ್ಕರಿಸಿದ್ದೀರಿ?. ರವೀಂದ್ರ ಭಟ್ಟರು ತಮ್ಮ ಅಂತ್ಯದ ವರೆಗೂ ಕೋಮುವಾದಿ ಮನಸ್ಥಿತಿ, ಕೋಮುವಾದಿ ಕಾರ್ಯಾಚರಣೆಯ ಧಾರ್ಮಿಕ ದಲ್ಲಾಳಿಯಾಗದೆ. ಮಘೇಗಾರಿನ ದೇವಸ್ಥಾನ ಒಂದರ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು ಎನ್ನುವುದು ಅವರ ಗಟ್ಟಿತನದ ಧ್ಯೋತಕವೆ.- ಕನ್ನೇಶ್‌.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *