ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ‌ ಎಫೆಕ್ಟ್- ಇಂದಿನಿಂದಲೇ ಪ್ರಾರಂಭವಾದ ಕರ್ಫ್ಯೂ ಪರಿಣಾಮ

Thumbnail image

ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ‌ ಎಫೆಕ್ಟ್ : ಮಧ್ಯಾಹ್ನದಿಂದಲೇ ಯಕ್ಷಗಾನ ಆರಂಭ

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್‌. ಮಾತನಾಡಿ, ಒಮಿಕ್ರಾನ್ ಸೋಂಕು ಹರಡದಂತೆ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಜ‌.7ರವರೆಗೆ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ..

ಮಂಗಳೂರು : ಯಕ್ಷಗಾನವೆಂದರೆ ರಾತ್ರಿ ಪೂರ್ತಿ ನಡೆಯುವ ಜನಪದ ಕಲಾಪ್ರಕಾರ. ಯಕ್ಷಗಾನದ ರಾಕ್ಷಸ, ದೇವತೆ, ಇನ್ನಿತರ ವೇಷಗಳನ್ನು ರಾತ್ರಿಯ ಕಾಲದಲ್ಲಿಯೇ ನೋಡಲು ಚಂದ. ಆದರೆ, ಕೊರೊನಾ ಸೋಂಕಿನ ಪ್ರಭಾವ ಈ ಯಕ್ಷಗಾನದ ಮೇಲೆಯೂ ಬಿದ್ದಿದೆ. 10 ದಿನಗಳ ನೈಟ್ ಕರ್ಫ್ಯೂವಿನಿಂದಾಗಿ ಯಕ್ಷಗಾನ ಮೇಳಗಳು ತಮ್ಮ ಪ್ರದರ್ಶನ ಸಮಯದಲ್ಲಿ ಬದಲಾವಣೆ ಮಾಡಿವೆ.

ಮಾಮೂಲಿ ಯಕ್ಷಗಾನ ಪ್ರದರ್ಶನವಿದ್ದಲ್ಲಿ ರಾತ್ರಿ 9.30ಕ್ಕೆ ಆರಂಭವಾಗಿ ಬೆಳಗ್ಗೆ 6ರವರೆಗೆ ಇರುತ್ತದೆ. ಕಾಲಮಿತಿಯಾದಲ್ಲಿ ಸಂಜೆ 7 ಗಂಟೆಯಿಂದ ನಡುರಾತ್ರಿ 1ರವರೆಗೆ ಪ್ರದರ್ಶನವಾಗುತ್ತದೆ. ಆದರೆ, ಇದೀಗ ಒಮಿಕ್ರಾನ್ ಭೀತಿಯಿಂದ ರಾಜ್ಯ ಸರಕಾರ ಇಂದಿನಿಂದ ಜ‌.7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಿದೆ.

ಪರಿಣಾಮ ಯಕ್ಷಗಾನ ಪ್ರದರ್ಶನವನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಯಕ್ಷಗಾನವನ್ನು ರದ್ದು ಮಾಡದೆ ಮಧ್ಯಾಹ್ನ 3.30ರಿಂದ ರಾತ್ರಿ 9.30ರವರೆಗೆ ಸಮಯ ಬದಲಾವಣೆ ಮಾಡಿ ಪ್ರದರ್ಶನ ಮಾಡಲಾಗುತ್ತಿದೆ.

ಯಕ್ಷಗಾನಕ್ಕೂ ತಟ್ಟಿದ ನೈಟ್ ಕರ್ಫ್ಯೂ‌ ಎಫೆಕ್ಟ್..

ಸದ್ಯ ಕರಾವಳಿಯಲ್ಲಿ ತೆಂಕು-ಬಡಗು-ಬಡಾಬಡಗು ಸೇರಿ ಸುಮಾರು 45ಕ್ಕಿಂತಲೂ ಅಧಿಕ ಮೇಳಗಳಿವೆ. ಎಲ್ಲಾ ಮೇಳಗಳು ಸರಕಾರದ ಮುಂದಿನ ಆದೇಶದವರೆಗೆ ಕಾಲಮಿತಿಯಲ್ಲಿ ಯಕ್ಷಗಾನ ಪ್ರದರ್ಶನ ಮಾಡಲು ನಿರ್ಧರಿಸಿವೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್‌. ಮಾತನಾಡಿ, ಒಮಿಕ್ರಾನ್ ಸೋಂಕು ಹರಡದಂತೆ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಾದ್ಯಂತ ಇಂದಿನಿಂದ ಜ‌.7ರವರೆಗೆ ರಾತ್ರಿ 10 ರಿಂದ ಬೆಳಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಈ ವೇಳೆ ತುರ್ತು ಅವಶ್ಯಕತೆಗಳನ್ನು ಹೊರತುಪಡಿಸಿ ಅನವಶ್ಯಕ ಓಡಾಟಕ್ಕೆ ಅವಕಾಶವಿಲ್ಲ. ಮಂಗಳೂರು ಹಾಗೂ ದ.ಕ ಜಿಲ್ಲೆಯಾದ್ಯಂತ 36 ಚೆಕ್ ಪೋಸ್ಟ್‌ಗಳಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗಿದೆ ಎಂದು ಹೇಳಿದರು. (etbk)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *