ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ  ಆಡಳಿತ ವಿರೋಧಿ ಅಲೆಯ ಸಂಕೇತವೇ?

ಸಾಲು ಸಾಲು ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ  ಆಡಳಿತ ವಿರೋಧಿ ಅಲೆಯ ಸಂಕೇತವೇ?

2023 ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ,  ಸರ್ಕಾದ ಕೆಲವು ನೀತಿ ನಿಯಮಗಳ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು ಆಡಳಿತ ವಿರೋಧಿ ಅಲೆ ಎಂದು ಹೇಳಲಾಗುತ್ತಿದೆ.

basavaraja bommai

ಬೆಂಗಳೂರು: 2023 ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ,  ಸರ್ಕಾದ ಕೆಲವು ನೀತಿ ನಿಯಮಗಳ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು ಆಡಳಿತ ವಿರೋಧಿ ಅಲೆ ಎಂದು ಹೇಳಲಾಗುತ್ತಿದೆ.

ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವ ಸರ್ಕಾರ ಆರೋಪದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ ಕೆಂಪಣ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ತಾವರ್ ಚಂದ್ರ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದರು. ಶೇ. 40 ಪರ್ಸೆಂಟ್ ಕಮಿಷನ್ ತೆಗೆದುಕೊಳ್ಳುತ್ತಿರುವುದನ್ನು ವಿರೋಧಿಸಿ ಜನವರಿ 3 ರಂದು ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮೆಗಾ ರ್ಯಾಲಿ ನಡೆಸಲಿದೆ.

ಗುತ್ತಿಗೆದಾರರ ಸಂಘ ಕರೆ ನೀಡಿರುವ ಪ್ರತಿಭಟನೆ ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ ಎಂದುಸೇಡಂ ಶಾಸಕ ಹಾಗೂ ರಾಜ್ಯ ಬಿಜೆಪಿ ವಕ್ತಾರ ರಾಜ್ ಕುಮಾರ್ ಪಾಟೀಲ್ ತೆಲ್ಕೂರು ಆರೋಪಿಸಿದ್ದಾರೆ.

ರಾಜ್ಯದ 440 ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿರುವ 14,183 ಉಪನ್ಯಾಸಕರು ಹಲವು ದಿನಗಳಿಂದ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಇಟ್ಟಿರುವ ಬೇಡಿಕೆಗಳು ದುಬಾರಿಯಾದುವೇನಲ್ಲ. ಅವರು ಕೇಳುತ್ತಿರುವುದಿಷ್ಟೆ, ತಾವು ಮಾಡುತ್ತಿರುವ ಸೇವೆಗೆ ಕನಿಷ್ಟ ಭದ್ರತೆ ನೀಡಿ, ವರ್ಷದ ಎಲ್ಲ ತಿಂಗಳು ಸಂಬಳ ನೀಡಿ ಮತ್ತು ನೀಡುತ್ತಿರುವ ಸಂಬಳವನ್ನು ಘನತೆಯಿಂದ ಬದುಕುವುದಕ್ಕೆ ಬೇಕಾಗುವಷ್ಟನ್ನು ಹೆಚ್ಚಿಸಿ ಎಂಬುದಷ್ಟೆ ಅವರ ಬೇಡಿಕೆ ಎಂದು ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದು ಅತಿಥಿ ಉಪನ್ಯಾಸಕರ ಜೊತೆ ಮಾನವೀಯತೆಯಿಂದ ವರ್ತಿಸುವಂತೆ ಒತ್ತಾಯಿಸಿದ್ದಾರೆ.

ಲಿಂಗಾಯತ ಪಂಚಮಶಾಲಿಗಳು 2ಎ ವರ್ಗದ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿದೆ, ಆದರೆ ಇದನ್ನು ಹಿಂದುಳಿದ ವರ್ಗಗಳ ಮುಖಂಡರು ತೀವ್ರವಾಗಿ ವಿರೋಧಿಸಿದ್ದಾರೆ. ‘ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಿದರೇ,  ಸಿಎಂ ಅವರ ಬೇಡಿಕೆಗೆ ಮನ್ನಣೆ ನೀಡಿದರೆ ಬೆಂಗಳೂರಿನಲ್ಲಿರುವ ಸಿಎಂ ನಿವಾಸದ ಮುಂದೆಯೇ ಜೀವನ ಅಂತ್ಯಗೊಳಿಸುತ್ತೇವೆ’ ಎಂದು ಸಿದ್ದರಾಮಯ್ಯ ಅವರ ಆಪ್ತ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಎಚ್ಚರಿಸಿದ್ದಾರೆ.

2013ರಲ್ಲಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಎಸ್‌ಸಿ ಕೋಟಾ ವರ್ಗೀಕರಣಕ್ಕೆ ಆಗ್ರಹಿಸಿ ಎಸ್‌ಸಿ ಮಾದಿಗ ಸಮುದಾಯದವರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಅಂತಿಮವಾಗಿ ಪೊಲೀಸರಿಂದ ಲಾಠಿ ಪ್ರಹಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಸದ್ಯ ಮಾದಿಗ ಸಮುದಾಯವು ಹೊಸ ಹೋರಾಟವನ್ನು ಪ್ರಾರಂಭಿಸುವ ಸೂಚನೆಯಿದೆ ಎಂದು ಮೂಲಗಳು ಹೇಳುತ್ತವೆ. ಇದರ ಜೊತೆಗೆ ಬೊಮ್ಮಾಯಿ ಅವರು ಆಡಳಿತ ವಿರೋಧಿತನವನ್ನು ಹೋಗಲಾಡಿಸುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಗೋಮಾಳ ಜಮೀನುಗಳನ್ನು (ಮೇಯುವ ಹುಲ್ಲುಗಾವಲು) ಕ್ರಮಬದ್ಧಗೊಳಿಸುವ ನಿರ್ಧಾರವನ್ನು ಮಾಡಿದರು ಮತ್ತು ಡೀಮ್ಡ್ ಅರಣ್ಯಗಳನ್ನು ಮರುವ್ಯಾಖ್ಯಾನಿಸಿದರು. ಇದರಿಂದ ರೈತರಿಗೆ ಸಹಾಯವಗಲಿದೆ.

ಬಿಜೆಪಿ ಸರ್ಕಾರವು ಆಡಳಿತ ವಿರೋಧಿ ಅಂಶವನ್ನು ನಿಭಾಯಿಸಲು ಬೊಮ್ಮಾಯಿ ಅವರ ಅಂತಿಮ ಬಜೆಟ್‌ನಲ್ಲಿ  ಹಲವು ಬದಲಾವಣೆ ಸಾಧ್ಯತೆಯಿದೆ, ಕ್ಯಾಬಿನೆಟ್ ಪುನರಾಚನೆಯನ್ನು ನಡೆಸುವ ಸಾಧ್ಯತೆಯಿದೆ, ಇದರ ಜೊತೆಗೆಪ್ರತಿಪಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಮರಳಲು ಪ್ರಯತ್ನಿಸುತ್ತಿದೆ ಎಂದು ಹೇಳಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *