ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

Thumbnail image

ರಾಜ್ಯದಲ್ಲಿ ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

COVID guidelines in Karnataka: ಇಂದಿನಿಂದ ಜ.19ರವರೆಗೆ ರಾಜ್ಯದಲ್ಲಿ ಹೊಸ ಕೋವಿಡ್​ ಮಾರ್ಗಸೂಚಿ ಜಾರಿಗೆ ಬರಲಿದೆ. ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಾಗಲಿದೆ. ಮದುವೆ ಸಮಾರಂಭಕ್ಕೂ ಇಂದಿನಿಂದ ಕೋವಿಟ್ ನಿರ್ಬಂಧ ಅನ್ವಯವಾಗಲಿದೆ.

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನವರಿ 19 ರವರೆಗೆ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಶೇ.50ರ ನಿಯಮ, ವೀಕೆಂಡ್ ಕರ್ಫ್ಯೂ, ಬೆಂಗಳೂರಿಗೆ ಸೀಮಿತವಾಗಿ ಶಾಲಾ-ಕಾಲೇಜುಗಳು ಬಂದ್ ಆಗಲಿವೆ. ಎಲ್ಲಾ ರೀತಿಯ ಪ್ರತಿಭಟನೆ, ಧರಣಿ, ರ್ಯಾ ಲಿಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದಲ್ಲಿ ಕೊರೊನಾ ಸ್ಫೋಟಗೊಂಡಿದ್ದು, ಮೂರನೇ ಅಲೆ ಶುರುವಾಗಿದೆ. ಪರಿಸ್ಥಿತಿ ಕೈ ಜಾರುವ ಮುನ್ನವೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇಂದಿನಿಂದ ರಾಜ್ಯಾದ್ಯಂತ ಕಠಿಣ ನಿರ್ಬಂಧಗಳನ್ನು ವಿಧಿಸಿ ನೂತನ ಕೋವಿಡ್ ಮಾರ್ಗಸೂಚಿ ಜಾರಿಗೊಳಿಸಿದೆ. ಹೊಸ ಗೈಡ್ ಲೈನ್ಸ್​ನಲ್ಲಿ ಏನಿದೆ, ಯಾವುದಕ್ಕೆಲ್ಲಾ ಅನುಮತಿ, ಯಾವುದಕ್ಕೆ ನಿರ್ಬಂಧ ಎನ್ನುವ ಫುಲ್ ಡೀಟೇಲ್ಸ್ ಇಲ್ಲಿದೆ.

ನಿಯಮಗಳು:

ಇಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದ್ದು, ಇದು ಜನವರಿ 19 ರವರೆಗೆ ವಿಸ್ತರಣೆಯಾಗಲಿದೆ. ಎಲ್ಲಾ ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ತೆರೆಯಲಿವೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಚೇರಿಗಳನ್ನು ತೆರೆಯಬೇಕು, ಬೆಂಗಳೂರು ಹೊರತುಪಡಿಸಿ ಇತರೆಡೆಯ ಶಾಲಾ-ಕಾಲೇಜುಗಳಿಗೂ ಇದೇ ನಿಯಮ ಅನ್ವಯವಾಗಲಿದೆ.

ವಿಧಾನಸೌಧ ಸಚಿವಾಲಯದಲ್ಲಿ ಅಧೀನ ಕಾರ್ಯದರ್ಶಿ ದರ್ಜೆಯ ಕೆಳಗಿನ ಎಲ್ಲಾ ಸಿಬ್ಬಂದಿ ಶೇ.50ರ ನಿಯಮದಂತೆ ಕರ್ತವ್ಯ ನಿರ್ವಹಿಸುವುದು ಕಡ್ಡಾಯ. ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡದ ಕಚೇರಿಗಳಿಗೂ ಶೇ. 50ರ ನಿಯಮ ಅನ್ವಯವಾಗಲಿದೆ.

ವಾರಾಂತ್ಯದ ಕರ್ಫ್ಯೂ: ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.

*ಸಾರಿಗೆ ಸೇವೆ ವಿಚಾರದಲ್ಲಿ ಬಿಎಂಆರ್ಸಿಎಲ್, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಸಾರಿಗೆ ನಿಗಮಗಳ ವ್ಯವಸ್ಥಾಪಕರು ಬೇಡಿಕೆಗೆ ಅನುಗುಣವಾಗಿ ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಆನ್​ಲೈನ್ ಟಿಕೆಟ್ ಕಾಯ್ದಿರಿಸುವಿಕೆ ಆಧಾರದಲ್ಲಿ ಬಸ್​ಗಳ ಸೇವೆ ನೀಡಲು ಕ್ರಮ.

*ಬೆಂಗಳೂರಿನಲ್ಲಿ ಎಸ್ಎಸ್ಎಲ್​​ಸಿಯಿಂದ ದ್ವಿತೀಯ ಪಿಯುಸಿ ಮತ್ತು ಎಲ್ಲಾ ವೈದ್ಯಕೀಯ, ನರ್ಸಿಂಗ್ ಕೋರ್ಸ್ ಹೊರತುಪಡಿಸಿ ಇತರ ಎಲ್ಲಾ ಶಾಲಾ-ಕಾಲೇಜುಗಳ ಭೌತಿಕ ತರಗತಿ ಇಂದಿನಿಂದ ಎರಡು ವಾರಗಳ ಕಾಲ ರದ್ದು.

*ಪಬ್, ಕ್ಲಬ್, ರೆಸ್ಟೊರೆಂಟ್, ಬಾರ್, ಹೋಟೆಲ್ ಇತರೆ ಫುಡ್ ಕೋರ್ಟ್​ಗಳಲ್ಲಿ ಇಂದಿನಿಂದ ಆಸನ ಸಾಮರ್ಥ್ಯದ ಶೇ. 50ರಷ್ಟು ಮಾತ್ರ ಭರ್ತಿಗೆ ಅವಕಾಶ ಮತ್ತು ಎರಡೂ ಡೋಸ್ ವ್ಯಾಕ್ಸಿನ್ ಆಗದ ವ್ಯಕ್ತಿಗಳಿಗೆ ಈ ಜಾಗಗಳ ಪ್ರವೇಶಕ್ಕೆ ನಿರ್ಬಂಧವಿರಲಿದೆ.

*ಸಿನಿಮಾ ಮಂದಿರಗಳು, ಮಲ್ಟಿಫ್ಲೆಕ್ಸ್ ಥಿಯೇಟರ್​ಗಳು, ರಂಗ ಮಂದಿರಗಳು, ಆಡಿಟೋರಿಯಂಗಳು ಮತ್ತು ಇದೇ ಮಾದರಿಯ ಸ್ಥಳಗಳಗಳಲ್ಲಿಯೂ ಆಸನ ಸಾಮರ್ಥ್ಯದ ಶೇ.50 ರಷ್ಟು ಭರ್ತಿಗೆ ಅವಕಾಶ ನೀಡಿದ್ದು, ವ್ಯಾಕ್ಸಿನ್ ಆಗಿರುವ ವ್ಯಕ್ತಿಗಳ ಪ್ರವೇಶಕ್ಕೆ ಮಾತ್ರ ಅನುಮತಿ ನೀಡಲಾಗುತ್ತದೆ.

*ಮದುವೆ ಸಮಾರಂಭಕ್ಕೂ ಇಂದಿನಿಂದ ಕೋವಿಟ್ ನಿರ್ಬಂಧ ಅನ್ವಯವಾಗಲಿದ್ದು, ಹೊರ ಆವರಣದಲ್ಲಿ ನಡೆಯುವ ಮದುವೆಗೆ 200 ಜನರಿಗೆ ಅವಕಾಶ ಹಾಗು ಒಳಾಂಗಣ ಅಥವಾ ಕಲ್ಯಾಣ ಮಂಟಪದ ಒಳಗಡೆ ನಡೆಯುವ ಮದುವೆಗೆ 100 ಜನರು ಭಾಗಿಯಾಗುವಂತೆ ಗರಿಷ್ಠ ಮಿತಿ ವಿಧಿಸಲಾಗಿದೆ. ಕೋವಿಡ್ ನಿಯಮ ಪಾಲನೆ ಕಡ್ಡಾಯವಾಗಿದೆ.

*ಧಾರ್ಮಿಕ ಸ್ಥಳಗಳಲ್ಲಿ ಕೇವಲ ದರ್ಶನಕ್ಕೆ ಮಾತ್ರ ಅವಕಾಶವಿರಲಿದ್ದು, ಯಾವುದೇ ರೀತಿಯ ಸೇವೆಗಳಿಗೆ ಅವಕಾಶವಿಲ್ಲ. ಒಂದು ಬಾರಿಗೆ 50 ಜನರು ಮಾತ್ರ ದರ್ಶನಕ್ಕೆ ತೆರಳಬಹುದಾಗಿದೆ. ಇಲ್ಲಿಯೂ ಕೋವಿಡ್ ಎರಡೂ ಡೋಸ್ ವ್ಯಾಕ್ಸಿನೇಷನ್​ ಆಗಿರುವುದು ಕಡ್ಡಾಯವಾಗಿದೆ.

*ಮಾಲ್​ಗಳು, ಶಾಪಿಂಗ್ ತಾಣಗಳು ಇತರೆ ಎಲ್ಲಾ ವಾಣಿಜ್ಯ ಅಂಗಡಿ, ಮುಂಗಟ್ಟುಗಳು ವಾರಾಂತ್ಯ ಕರ್ಫ್ಯೂ ಹೊರತುಪಡಿಸಿ ವಾರದ ಇತರ ಐದು ದಿನಗಳಲ್ಲಿ ತೆರೆಯಬಹುದಾಗಿದೆ.

*ಈಜುಕೊಳ, ಜಿಮ್​ಗಳಿಗೆ ಶೇ.50 ರ ನಿಯಮ ಅನ್ವಯವಾಗಲಿದ್ದು, ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಜಿಮ್, ಈಜುಕೊಳ ಪ್ರವೇಶಕ್ಕೆ ಅವಕಾಶವಿರಲಿದೆ. ವ್ಯಾಕ್ಸಿನೇಷನ್​ ಆಗದ ಅಥವಾ ಒಂದು ಡೋಸ್ ಪಡೆದಿದ್ದವರಿಗೆ ಇಲ್ಲಿ ನಿರ್ಬಂಧವಿರಲಿದೆ.

*ರಾಜ್ಯದ ಎಲ್ಲಾ ಕ್ರೀಡಾ ಸಮುಚ್ಚಯಗಳು, ಕ್ರೀಡಾಂಗಣಗಳಲ್ಲಿಯೂ ಶೇ. 50 ರ ನಿಯಮ ಪಾಲಿಸಿ ಚಟುವಟಿಕೆ ನಡೆಸಬಹುದಾಗಿದೆ. ಇಂದಿನಿಂದ ರಾಜ್ಯಾದ್ಯಂತ ಅನ್ವಯವಾಗುವಂತೆ ಎಲ್ಲಾ ರೀತಿಯ ಮೆರವಣಿಗೆಗಳು, ಧರಣಿಗಳು, ಪ್ರತಿಭಟನೆಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರಿಗೆ ವಿಧಿಸಿರುವ ಕಠಿಣ ನಿರ್ಬಂಧಗಳನ್ನು ಗೋವಾ ರಾಜ್ಯಕ್ಕೂ ಅನ್ವಯಿಸಲಾಗಿದೆ.

ಕಾಂಗ್ರೆಸ್ ಪಾದಯಾತ್ರೆಗೂ ಇಲ್ಲ ಅನುಮತಿ:

*ಕೋವಿಡ್ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ಯಾವುದೇ ರೀತಿಯ ಮೆರವಣಿಗೆ, ರ್ಲಿಯಾ, ಪ್ರತಿಭಟನೆ, ಧರಣಿ, ಸತ್ಯಾಗ್ರಹಗಳನ್ನು ನಡೆಸುವಂತಿಲ್ಲ. ಈ ಎಲ್ಲಾ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಲಾಗಿದೆ. ಹಾಗಾಗಿ ಕಾಂಗ್ರೆಸ್ ನಡೆಸಲುದ್ದೇಶಿಸಿರುವ ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲದಂತಾಗಿದೆ. ಅಲ್ಲದೆ ಮದುವೆ ಕಾರ್ಯ ಹೊರತುಪಡಿಸಿ ಇತರ ಸಭೆಗಳಿಗೆ 50 ಜನರ ಮಿತಿ ವಿಧಿಸಿರುವುದರಿಂದ ಪಾದಯಾತ್ರೆಗೆ ಅವಕಾಶ ಇಲ್ಲದಂತಾಗಿದೆ. (etbk)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಶಿರೂರು…ಮತ್ತೊಂದು ದುರಂತ!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ...

ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್! 1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್,...

atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ...

ನೌಕರರು ಗಮನಿಸಲೇಬೇಕಾದ ಮಾಹಿತಿ ಇದು… ( only for employees)

*In..come Tax Act 1961 ಸೆಕ್ಷನ್ 80CCD ಅಡಿಯಲ್ಲಿ ಉದ್ಯೋಗದಾತರ NPS ಕೊಡುಗೆಯ ಕಡಿತದ ಕುರಿತು..* *(Clarification of deductions available for NPS...

ಮಳೆ ಬಂತು… ಸಿದ್ಧರಾಗಿ… ಶಾಸಕರ ಸೂಚನೆ

ಸರ್‌, ನಾವು ಮುಗದೂರಿನ ಜನ ಸಿದ್ಧಾಪುರದಿಂದ ಕೂಗಳತೆ ದೂರದಲ್ಲಿದ್ದೇವೆ ಕಳೆದ ೧೫-೨೦ ವರ್ಷಗಳಿಂದ ಈ ಗ್ರಾಮದಲ್ಲಿ ಯಾವ ಅಭಿವೃದ್ಧಿ ಕೆಲಸಗಳೂ ಆಗಿಲ್ಲ, ಚರಂಡಿ ಸ್ವಚ್ಛತೆ,...

Latest Posts

ಶಿರೂರು…ಮತ್ತೊಂದು ದುರಂತ!

ಶಿರೂರು ಭೂಕುಸಿತದಿಂದ ಬದುಕುಳಿದಿದ್ದ ವೃದ್ಧ ಸಿಡಿಲು ಬಡಿದು ಸಾವು ಮೃತನನ್ನು ಗ್ರಾಮದ ತಮ್ಮಣ್ಣಿ ಅನಂತ ಗೌಡ (65) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ. ಇದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಂದರ್ಭಿಕ ಚಿತ್ರ ಕಾರವಾರ: ಶಿರೂರು ಗುಡ್ಡ ಕುಸಿತ ದುರಂತದಿಂದ ಪಾರಾಗಿದ್ದ ವೃದ್ಧ ವ್ಯಕ್ತಿಯೊಬ್ಬ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *