ಮಾ. ೧೫ ರಿಂದ ಶಿರಸಿ ಜಾತ್ರೆ & ರಾಮಚಂದ್ರ ನಾಯ್ಕರಿಗೆ ಕೋಲಶಿರ್ಸಿಯಲ್ಲಿ ಸನ್ಮಾನ

Thumbnail image

ಶಿರಸಿಯಲ್ಲಿ ಮಾರ್ಚ್ 15-23ರವರೆಗೆ ನಡೆಯಲಿದೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವ

ಜಾತ್ರಾ ಮುಹೂರ್ತ ನಿಗದಿ ಆಗುತ್ತಿದ್ದಂತೆ ಸಂಪ್ರದಾಯದ ಪ್ರಕಾರ ಇಲ್ಲಿನ ಪ್ರಮುಖರಾದ ಅಜಯ್ ನಾಡಿಗ್ ದೇವಿ ಸಾನಿಧ್ಯದಲ್ಲಿ ದೀಪ ಬೆಳಗಿಸಿದರು. ನಂತರ ಸಭಿಕರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು..

ಶಿರಸಿ : ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಶ್ರೀ ಮಾರಿಕಾಂಬಾ ದ್ವೈವಾರ್ಷಿಕ ಜಾತ್ರಾ ಮಹೋತ್ಸವ ಪ್ರಸಕ್ತ ವರ್ಷ ಮಾ.15ರಿಂದ 23ರವರೆಗೆ ಜರುಗಲಿದೆ. ನಗರದ ಮಾರಿಕಾಂಬಾ ದೇವಾಲಯದ ಸಭಾಂಗಣದಲ್ಲಿಂದು ನಡೆದ ಜಾತ್ರಾ ಮುಹೂರ್ತ ಘೋಷಣಾ ಸಭೆಯಲ್ಲಿ ಅರ್ಚಕ ರಾಮಕೃಷ್ಣ ಭಟ್ಟ ಕೆರೇಕೈ ಮುಹೂರ್ತ ಘೋಷಿಸಿದರು.

ಜಾತ್ರಾ ಮುಹೂರ್ತ ನಿಗದಿ ಆಗುತ್ತಿದ್ದಂತೆ ಸಂಪ್ರದಾಯದ ಪ್ರಕಾರ ಇಲ್ಲಿನ ಪ್ರಮುಖರಾದ ಅಜಯ್ ನಾಡಿಗ್ ದೇವಿ ಸಾನಿಧ್ಯದಲ್ಲಿ ದೀಪ ಬೆಳಗಿಸಿದರು. ನಂತರ ಸಭಿಕರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಯಿತು.

ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಆರ್ ಜಿ ನಾಯ್ಕ, ಉಪಾಧ್ಯಕ್ಷ ಸುದೇಶ ಜೋಗಳೇಕರ, ಧರ್ಮದರ್ಶಿಗಳಾದ ಸುಧೀರ ಹಂದ್ರಾಳ, ಶಿವಾನಂದ ಶೆಟ್ಟಿ, ವತ್ಸಲಾ ಹೆಗಡೆ, ಡಿಎಸ್ಪಿ ರವಿ ನಾಯ್ಕ, ತಹಶೀಲ್ದಾರ್ ಎಂ.ಆರ್. ಕುಲಕರ್ಣಿ, ಬಾಬುದಾರ, ಪ್ರಮುಖರಾದ ಅಜಯ ನಾಡಿಗ್, ರಮೇಶ ದಬ್ಬೆ, ಮಂಜು ಕುರುಬರ, ಬಸವರಾಜ ಚಕ್ರಸಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು. (etbk)

ಸಿದ್ದಾಪುರ: ಧಾರ್ಮಿಕ ತೆಯನ್ನು ಹೊರತುಪಡಿಸಿ ಯಕ್ಷಗಾನ ಬರಬೇಕು. ಯಕ್ಷಗಾನದ ಸಾಧ್ಯತೆಗಳು ವಿಸ್ತರಿಸಬೇಕು
ನಮ್ಮ ಸಂಸ್ಕೃತಿ ಯನ್ನು ಉಳಿಸುವ ಕೆಲಸವಾಗಬೇಕು, ನಮ್ಮನ್ನು ನಾವು ಗುರುತಿಸುವ ಕಾರ್ಯ ವಾಗಬೇಕೆಂದು ಸಮಾಜಮುಖಿ ಪತ್ರಿಕೆಯ ಸಂಪಾದಕ ಕನ್ನೇಶ ಕೋಲಸಿರ್ಸಿ ಅಭಿಪ್ರಾಯ ಪಟ್ಟರು.
ಅವರು ತಾಲೂಕಿನ ಕೋಲಸಿರ್ಸಿ ಗುಡ್ಡೇಕೆರಿಯ ಕಟ್ರನ್ ಕುಟುಂಬದ ವರು ಆಯೋಜಿಸಿರುವ ನಾಗರ ಪ್ರತಿಷ್ಠೆ ಪ್ರಯುಕ್ತ ಹರಕೆ ಯಕ್ಷಗಾನದಲ್ಲಿ ಬಾಗವತ ರಾಮಚಂದ್ರ ನಾಯ್ಕ ಹೆಮ್ಮನಬೈಲ್ ಇವರಿಗೆ ಏರ್ಪಡಿಸಿದ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಸಂಸ್ಕೃತಿ ನಮ್ಮತನ ಉಳಿಸಿ ನಮ್ಮವರನ್ನು ಗುರುತಿಸುವ ಕಾರ್ಯ ವಾಗಬೇಕು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಬಾಗವತರಾದ ಹೆಮ್ಮನಬೈಲ್ ರಾಮಚಂದ್ರ ನಾಯ್ಕ ನನಗೆ ನಮ್ಮವರ ಮಧ್ಯೆ ಸನ್ಮಾನ ಸ್ವೀಕರಿಸುವುದು ಖುಷಿ ತಂದಿದೆ. ನಾವುಗಳು ಸವಾಲುಗಳನ್ನು ಮೆಟ್ಟಿ ನಿಂತಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಕ್ಷಗಾನ ಕಲೆಗೆ ಪ್ರೋತ್ಸಾಹ ಹೆಚ್ಚು ನಮ್ಮಲ್ಲೂ ಆ ರೀತಿಯ ಬೆಲೆ ಕಲೆ, ಕಲಾವಿದರಿಗೆ ಸಿಗುವಂತಾಗಬೇಕು ಎಂದರು.


ಅಧ್ಯಕ್ಷ ತೆ ವಹಿಸಿದ್ದ ಹನುಮಂತ ನಾಯ್ಕ ಮೂರತೂರ, ಬೇಡ್ಕಣಿ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕ ಲಕ್ಷ್ಮಣ ನಾಯ್ಕ ಮಾತನಾಡಿದರು.
ಭಾಗವತ ರಾದ ಹೆಮ್ಮನಬೈಲ್ ರಾಮಚಂದ್ರ ನಾಯ್ಕ ರನ್ನು ಶಾಲು ಹೊಂದಿಸಿ ಫಲತಾಂಬೂಲ ನೀಡಿ ಸನ್ಮಾನಿಸಲಾಯಿತು.
ಶಿವಶಂಕರ ಭಾಗ್ಯಶ್ರೀ ದಂಪತಿಗಳು ಉಪಸ್ಥಿತರಿದ್ದರು.
ಕುಮಾರ್ ನಾಯ್ಕ ಮೆಣಸಿ ನಿರೂಪಿಸಿದರು, ಶಿವಶಂಕರ ಕೋಲಸಿರ್ಸಿ ಸ್ವಾಗತಿಸಿದರು. ಸೋಮಶೇಖರ್ ಕೆ ನಾಯ್ಕ ವಂದಿಸಿದರು.

https://samajamukhi.net/2022/01/07/multi-crop-farmming/

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

dr.vaidya feliciated @ ದೇರಳಕಟ್ಟೆಯಲ್ಲಿ ಡಾ. ಶ್ರೀಧರ್‌ ವೈದ್ಯರಿಗೆ ಸನ್ಮಾನ

ಸಿದ್ದಾಪುರ: ದೇರಳಕಟ್ಟೆಯ ಕೆ. ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ ಆಶ್ರಯದಲ್ಲಿ ವೈದ್ಯಕೀಯ ದಿನಾಚರಣೆ ಹಿನ್ನಲೆಯಲ್ಲಿ ಹೆಸರಾಂತ ವೈದ್ಯ, ಸಿದ್ದಾಪುರದ ಶ್ರೇಯಸ್ ಆಸ್ಪತ್ರೆಯ ಮುಖ್ಯಸ್ಥ ಡಾ....

ಹಾಲು ಉತ್ಫಾದಕರ ಋಣ ತೀರಿಸಲು ಸಾಧ್ಯವಿಲ್ಲ… -ಪರಶುರಾಮ ನಾಯ್ಕ‌

ಹಾಲು ಒಕ್ಕೂಟದ ನನ್ನ ಸೇವೆ ಅನುಲಕ್ಷಿಸಿ ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿರುವುದಕ್ಕೆ ಖುಷಿಯಾಗಿದೆ ಎಂದು ಧಾರವಾಡ ಗದಗ ಉತ್ತರಕನ್ನಡ ಹಾಲು ಒಕ್ಕೂಟದ ನೂತನ...

ಬಾಬಾ ಜಲಪಾತ ಎಲ್ಲಿದೆ ಗೊತ್ತೆ?

ಭೋರ್ಗರೆಯುತ್ತಿದೆ ಕುಂಬ್ವಾಡೆ ಜಲಪಾತ: ವೈಭವ ನೋಡಲು ಪ್ರವಾಸಿಗರ ದಂಡು ಬೆಳಗಾವಿಯಿಂದ ಸುಮಾರು 87 ಕಿಮೀ ದೂರದಲ್ಲಿ ಖಾಸಗಿ ಒಡೆತನದ ಭೂಮಿಯಲ್ಲಿ ಈ ಜಲಪಾತವಿದೆ. ಕುಂಬ್ವಾಡೆ...

ಕನ್ನಡ ಓದಲು, ಬರೆಯಲು ಬಾರದ ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ: ಕುಂ ವೀರಭದ್ರಪ್ಪ ವ್ಯಂಗ್ಯ

11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂಬ ಕಾರಣಕ್ಕೆ ಕನ್ನಡ ಶಾಲೆಗಳನ್ನು ಬಂದ್ ಮಾಡುವ...

ಜನಜಾತ್ರೆಯಂತಾದ ಜನಸ್ಪಂದನ, ಪಟ್ಟಣ ಪಂಚಾಯತ್‌ ಬಗ್ಗೆ ತಕರಾರು

ಸಿದ್ದಾಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾರ್ವಜನಿಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *