ಚಂಪಾ.. ಚಿತ್ರ,ಕಾವ್ಯ ಇತ್ಯಾದಿ

ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ

ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆಪಿ ಚಳುವಳಿಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದರು. ತುರ್ತು ಪರಿಸ್ಥಿತಿಯನ್ನು ಖಂಡತುಂಡವಾಗಿ ಖಂಡಿಸಿ ಜೈಲುವಾಸ ಅನುಭವಿಸಿದ ಏಕಮಾತ್ರ ಕನ್ನಡ ಸಾಹಿತಿ ಅವರು. ಕೋಮುವಾದ ಜಾತಿವಾದ ಹಾಗೂ ಬೇರೆಲ್ಲ ಪ್ರತಿಗಾಮಿಗಳ ವಿರುದ್ಧ ಚಾಟಿ ಬೀಸುತ್ತಿದ್ದ ಪರಿಣಾಮಕಾರಿ ಧ್ವನಿ. ನಾಲ್ಕು ದಶಕಗಳ ಕಾಲ ಕನ್ನಡ ಸಾಹಿತ್ಯಾಗಸವನ್ನು ಆವರಿಸಿದವರು. ಲಂಕೇಶ್,ತೇಜಸ್ವಿ,ಚಂಪಾ ಮೂವರು ಸೇರಿ ಅನೇಕ ಬಿರುಗಾಳಿ ಎಬ್ಬಿಸಿದವರು. ಬಂಡಾಯ ಸಾಹಿತ್ಯದಲ್ಲಿ ಬರಗೂರು, ಚಂಪಾ ಎರಡು ಮುಖ್ಯ ಸ್ತಂಭಗಳಾಗಿ ಬೆಳೆಸಿದವರು. ನವ್ಯದ ಮುಖ್ಯ ಸಾಹಿತಿಯಾಗಿ ಬೆಳೆದು ಬಂಡಾಯ ಸಾಹಿತ್ಯದ ಬಾವುಟ ಎತ್ತಿದವರು. ಅವರ ಕಾವ್ಯ,ನಾಟಕಗಳೂ ಸಾಹಿತ್ಯದಲ್ಲಿ ಗಣನೀಯ ಪರಿಣಾಮ ಬೀರಿದವು. ಅವರ ಟಿಂಗರ ಬುಡ್ಡಣ್ಣ , ಅಪ್ಪ,ಕೊಡೆಗಳು, ಕುಂಟಾ ಕುಂಟಾ ಕುರವತ್ತಿ ನಾಟಕಗಳು ನೋಡುಗರ ಮನದಲ್ಲಿ ವಿಚಾರಶೀಲತೆಯನ್ನು ಬಡಿದೆಬ್ಬಿಸಿದವು.

ನಂತರ ನಾಟಕವನ್ನು ತಮ್ಮ‌ಹರಿತ ವ್ಯಂಗ್ಯದ ಮೂಲಕ ಪ್ರತಿಗಾಮಿ ಪ್ರವೃತ್ತಿಗಳನ್ನು ಲೇವಡಿ ಮಾಡಲು ಪರಿಣಾಮಕಾರಿ ಸಾಧನವಾಗಿಸಿದರು. ಇಂದಿರಾ ಮತ್ತು ತುರ್ತುಪರಿಸ್ಥಿತಿ ವಿರುದ್ಧದ ಜಗದಂಬೆಯ ಬೀದಿ ನಾಟಕ( ಚಂಪಾರಿಗೆ ಜೈಲುವಾಸ ನೀಡಿದ್ದು.) ಸಾಯಿಬಾಬಾ ವಿರುದ್ದದ ಬುರುಡೀಬಾಬಾನ ಪವಾಡ, ಅಡಿಗರ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ಲೇವಡಿ ಮಾಡಿದ ನಳಕವಿಯ ಮಹಾ ಮಸ್ತಕಾಭಿಷೇಕ ಅಂದು ಬಹಳ ಜನಪ್ರಿಯವಾಗಿದ್ದ ನಾಟಕಗಳು. ಅವರ ಕಾವ್ಯ,ನಾಟಕಗಳು ಬಹುಕಾಲ ಕನ್ನಡಿಗರ ಮನದಲ್ಲಿ ಜೀವಂತ.ಅವರೂ ಸೇರಿದಂತೆ ಮೂವರ ಸಂಪಾದಕತ್ವದಲ್ಲಿ ನವ್ಯದ ಒಂದು ಮುಖವಾಣಿಯಾಗಿ ಆರಂಭವಾದ “ಸಂಕ್ರಮಣ” ನಂತರ ಬಂಡಾಯದ ಆಧಾರ ಸ್ತಂಭವಾಗಿ ಬಹು ದೀರ್ಘ ಕಾಲ ಕನ್ನಡ ಓದುಗರನ್ನು ಹಲವು ವಿಚಾರಗಳ ಮೂಸೆಗೆ ಒಡ್ಡಿ ಬೆಳೆಸಿತು. ಹೊಸ ಸಾಹಿತಿಗಳನ್ನು ಪೋಷಿಸಿತು.ಅವರೊಡನೆ ನಾನು ಭಾಗವಹಿಸಿದ ಹೋರಾಟಗಳು, ಹಂಚಿಕೊಂಡ ವೇದಿಕೆಗಳೆಷ್ಟು ಲೆಕ್ಕವೇ ಇಲ್ಲ. 1979ರಲ್ಲಿ ನಾನು ಮೊದಲ ಬಾರಿಗೆ ಧಾರವಾಡ ಜಿಲ್ಲೆಗೆ ಅಧಿಕಾರಿಯಾಗಿ ಹೋದ ಕೂಡಲೇ ಮೊದಲು ಭೇಟಿಯಾದ ವ್ಯಕ್ತಿ ಅವರು. ಅವರ ಮನೆಯಲ್ಲಿ ಅವರನ್ನು ಭೇಟಿಯಾದ,ಹಲ ಹಲವು ವಿಷಯಗಳನ್ನು ಚರ್ಚಿಸಿದ ಸವಿ ನೆನಪು .ನಾನು ಹಿಂದೆಯೇ ಬರೆದಂತೆ ಲೋಹಿಯಾ ಮಾರ್ಕ್ಸ್ ಮತ್ತು ಗಾಂಧಿ ಬಗ್ಗೆ ಬರೆದ ಒಂದು ಪುಸ್ತಕ ನೀಡಿ ಅದರ ಮೂಲಕ ಮಾರ್ಕ್ಸ್‌ರವರ ವಿಚಾರಗಳ ಪರಿಚಯ ಮಾಡಿಸಿದವರು,ನಾನು ಮಾರ್ಕ್ಸ್‌ವಾದಿಯಾಗಲು ಒಂದು ಮುಖ್ಯ ಹಂತ ಅದು.

ಸಮಾಜವಾದಿಯಾಗಿದ್ದ ಅವರೊಡನೆ ಹಲವು ಸೈದ್ಧಾಂತಿಕ ಜಗಳ ಮಾಡಿದರೂ ಕೂಡಾ ಮುನಿಸಿಕೊಳ್ಳದೆ ಒಳ್ಳೆಯ ಸಂಬಂಧ ಬೆಳೆಸಿಕೊಂಡವರು. ಕಮ್ಯುನಿಸ್ಟ್ ವಿಚಾರಧಾರೆಯ ಹಲವು ಸಂಘಟನೆಗಳೊಡನೆ ಆಪ್ತ ಸಂಬಂಧ ಇಟ್ಟುಕೊಂಡವರು. ಇಳಿವಯಸ್ಸಿನಲ್ಲೂ ಪೋಲಿಸರ ನಿರ್ಬಂಧವನ್ನು ಧಿಕ್ಕರಿಸಿ ಅವರು ಭಾಗವಹಿಸಿದ, ಕಲುಬುರ್ಗಿಯವರ ನಿಧನದ ಒಂದು ವರ್ಷದ ನೆನಪಿನಲ್ಲಿ ಮೂರು ದಿನಗಳ ಕಾಲ ಬೆಂಗಳೂರಿನಿಂದ ಧಾರವಾಡದವರೆಗೆ ನಡೆಸಿದ ವಾಹನ ಜಾಥಾ ಆ ಸಂದರ್ಭದಲ್ಲಿ ಅವರ ಮಾತುಗಳು ಅವರ ಬದ್ಧತೆ ಮತ್ತು ಹಿಂಜರಿಯದೆ ಮುನ್ನುಗ್ಗುವ ದೃಡತೆಗೆ ಪುರಾವೆಯಾಗಿದ್ದವು. ಹಾಗೆಯೇ ಗಣಿ ದರೋಡೆಕೋರರ ವಿರುದ್ಧ ನಡೆಸಿದ ಮೂರು ದಿನಗಳ ವಾಹನ ಜಾಥಾ ಅಚ್ಚಳಿಯದ ನೆನಪು.ಅವರದು ಯಾವಾಗಲೂ ಹೊಸ ವಿಚಾರಗಳ ಬಗ್ಗೆ ತೆರೆದ ಮನಸ್ಸು. ಯಾವುದೇ ವಿಚಾರ ಸಂಕಿರಣಗಳಲ್ಲಿ ಒಬ್ಬ ವಿದ್ಯಾರ್ಥಿಯಂತೆ ಟಿಪ್ಪಣಿ ಮಾಡಿಕೊಳ್ಳುತ್ತಿದ್ದರು. ಇತ್ತೀಚೆಗೆ ಕಲಬುರ್ಗಿ ಕೊಲೆಯ ನಂತರ ಅವರ ಮೇಲೂ ಹಿಂದೂ ಭಯೋತ್ಪಾದಕರ ಕಣ್ಣಿದೆ ಎಂದರೂ ಹೆದರದೆ, ಪೋಲೀಸರ ಹಾಕುತ್ತಿದ್ದ ನಿರ್ಬಂಧಗಳ ಬಗ್ಗೆ ಕೇರ್ ಮಾಡದೆ ಎಲ್ಲ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ವೃದ್ಧಾಪ್ಯದ ದೈಹಿಕ ಸಮಸ್ಯೆ ಮಾತ್ರ ಅವರ ಭಾಗವಹಿಸುವಿಕೆಯನ್ನು ಸೀಮಿತಗೊಳಿಸಿತ್ತು. ಅವರ ನಿಧನ ಕರ್ನಾಟಕದ ಜನತೆಗೆ, ಸಾಹಿತ್ಯಕ್ಕೆ ಬಹು ದೊಡ್ಡ ನಷ್ಟ. ನನಗಂತೂ ಒಬ್ಬ ವೈಯುಕ್ತಿಕ ಗೆಳೆಯರನ್ನು ಕಳೆದುಕೊಂಡ ಶೂನ್ಯಭಾವ. -gn nagraj

ಪ್ರಶ್ನೋತ್ತರ

ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
ಇದ್ದವರ ನೆನಪಿನ ಗುದ್ದಿನಲ್ಲಿ
ಗುದ್ದಲಿಯಾಗುತ್ತಾರೆ.
ಅವರ ಶ್ವಾಸೋಚ್ಛ್ವಾಸದ ಹಳ್ಳ ಕೊಳ್ಳಗಳಲ್ಲಿ
ಹಾವಾಗಿ ಹರಿದಾಡುತ್ತಾರೆ.
ಅವರ ಆಕಾಶದ ತುಂಬ
ಹುಡಿಯಾಗಿ ಅಡರುತ್ತಾರೆ.
ಹಕ್ಕಿಯಾಗಿ ರೆಕ್ಕೆ ಬಿಚ್ಚುತ್ತಾರೆ.
ಚಿಕ್ಕೆಯಾಗಿ ಚಿಮುಕುತ್ತಾರೆ.
ಎಲ್ಲಿಯ ತನಕ?
ಇದ್ದವರು ಸಾಯುವ ತನಕ.
ಸತ್ತವರು ಎಲ್ಲಿ ಹೋಗುತ್ತಾರೆ?
ಸತ್ತವರು ಎಲ್ಲೂ ಹೋಗುವುದಿಲ್ಲ…
(1986)

-ಚಂದ್ರಶೇಖರ ಪಾಟೀಲ
‘ಅರ್ಧ ಸತ್ಯದ ಹುಡುಗಿ’ (ಕವನ ಸಂಕಲನ, 1989)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *